ಬ್ರೇಕಿಂಗ್ ನ್ಯೂಸ್
19-06-21 02:12 pm Headline Karnataka News Network ಕ್ರೈಂ
ಮಂಡ್ಯ, ಜೂನ್ 19: ಮುಖ್ಯಮಂತ್ರಿ ಯಡ್ಡಿಯೂರಪ್ಪ ಅವರ ಪಿಎ ಅಂತ ಹೇಳಿಕೊಂಡು ಯುವಕನೊಬ್ಬ ಧರ್ಮಸ್ಥಳದ ಕೆಎಸ್ಆರ್ಟಿಸಿ ಚಾಲಕನಿಂದ ಹಣ ಪಡೆದು ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಧರ್ಮಸ್ಥಳ ಕೆಎಸ್ಸಾರ್ಟಿಸಿ ಡಿಪೋದಲ್ಲಿ ಬಸ್ ಚಾಲಕನಾಗಿರುವ, ಮಂಡ್ಯ ಜಿಲ್ಲೆಯ ಕೀಲಾರ ಗ್ರಾಮದ ಪುರುಷೋತ್ತಮ್ ಎಂಬಾತ ವಂಚನೆಗೊಳಗಾದ ವ್ಯಕ್ತಿ. ಧರ್ಮಸ್ಥಳ ಡಿಪೋದಲ್ಲಿ ಚಾಲಕನಾಗಿದ್ದ ವೇಳೆ ಶೈಲೇಶ್ ಎಂಬ ಯುವಕ ಪರಿಚಯವಾಗಿದ್ದ. ಧರ್ಮಸ್ಥಳದ ಹೋಟೆಲ್ ಒಂದರಲ್ಲಿ ಪರಿಚಯವಾಗಿದ್ದು ಸಿಎಂ ಯಡ್ಡಿಯೂರಪ್ಪ ನನಗೆ ತುಂಬಾ ಹತ್ತಿರದವರು ಅಂತ ತನ್ನ ಮೊಬೈಲಿನಲ್ಲಿ ಫೋಟೋ ತೋರಿಸಿ ನಂಬಿಸಿದ್ದಾನೆ. ಅಲ್ಲದೆ, ಯಡ್ಡಿಯೂರಪ್ಪ ಚುನಾವಣೆ ಸಂದರ್ಭ ಹಣ ಹಂಚಲು ನನಗೇ ಹಣ ಕೊಟ್ಟಿದ್ದರು ಅಂತ ಕಂತೆ ಕಂತೆ ನೋಟಿನ ಫೋಟೋವನ್ನೂ ತೋರಿಸಿ ಶೈಲೇಶ್ ನಂಬಿಕೆ ಹುಟ್ಟಿಸಿದ್ದಾನೆ. ಮುಖ್ಯಮಂತ್ರಿ ಬಳಿ ಹೇಳಿಸಿ ಏನು ಬೇಕಾದ್ರೂ ಕೆಲಸ ಮಾಡಿಸ್ತೀನಿ ಅಂತ ಹೇಳಿದ್ದಾನೆ.

ಇದನ್ನು ನಂಬಿದ ಚಾಲಕ ಪುರುಷೋತ್ತಮ್, ತನ್ನನ್ನು ಧರ್ಮಸ್ಥಳ ಡಿಪೋದಿಂದ ಮಂಡ್ಯಕ್ಕೆ ವರ್ಗಾವಣೆ ಮಾಡಿಸಲು ಹೇಳಿದ್ದಾನೆ. ನಿನ್ನ ಕೆಲಸ ಮಾಡಿಕೊಡುವುದಾಗಿ ಹೇಳಿದ ಶೈಲೇಶ್, ಅದಕ್ಕೆ ಅಧಿಕಾರಿಗಳಿಗೆ ಒಂದಿಷ್ಟು ಕೊಡಬೇಕಾಗುತ್ತೆ ಅಂತ ಹೇಳಿ ಹಣದ ಬೇಡಿಕೆ ಇಟ್ಟಿದ್ದಾನೆ. ಆತನ ಮಾತನ್ನು ನಂಬಿದ ಚಾಲಕ ಪುರುಷೋತ್ತಮ್, 98 ಸಾವಿರ ರೂ. ಹಣವನ್ನು ನೀಡಿದ್ದಾನೆ. ಆದರೆ, ಶೈಲೇಶ್ ಹಣ ಪಡೆದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ.
ಹಣ ಕಳೆದುಕೊಂಡ ಚಾಲಕ ಪುರುಷೋತ್ತಮ್ ಈ ಬಗ್ಗೆ ಮಂಡ್ಯದಲ್ಲಿ ದೂರು ದಾಖಲಿಸಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದು ಆರೋಪಿಯ ಹುಡುಕಾಟ ನಡೆದಿದೆ.
Mandya Man poses himself as CM Yediyurappas PA cheats KSRTC Driver telling him that he would make his transfer from Dharmasthala Depo to Mandya and flees with Rs. 98,000. A case has been registered at the Mandya Police Station.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm