ಬ್ರೇಕಿಂಗ್ ನ್ಯೂಸ್
19-06-21 02:12 pm Headline Karnataka News Network ಕ್ರೈಂ
ಮಂಡ್ಯ, ಜೂನ್ 19: ಮುಖ್ಯಮಂತ್ರಿ ಯಡ್ಡಿಯೂರಪ್ಪ ಅವರ ಪಿಎ ಅಂತ ಹೇಳಿಕೊಂಡು ಯುವಕನೊಬ್ಬ ಧರ್ಮಸ್ಥಳದ ಕೆಎಸ್ಆರ್ಟಿಸಿ ಚಾಲಕನಿಂದ ಹಣ ಪಡೆದು ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಧರ್ಮಸ್ಥಳ ಕೆಎಸ್ಸಾರ್ಟಿಸಿ ಡಿಪೋದಲ್ಲಿ ಬಸ್ ಚಾಲಕನಾಗಿರುವ, ಮಂಡ್ಯ ಜಿಲ್ಲೆಯ ಕೀಲಾರ ಗ್ರಾಮದ ಪುರುಷೋತ್ತಮ್ ಎಂಬಾತ ವಂಚನೆಗೊಳಗಾದ ವ್ಯಕ್ತಿ. ಧರ್ಮಸ್ಥಳ ಡಿಪೋದಲ್ಲಿ ಚಾಲಕನಾಗಿದ್ದ ವೇಳೆ ಶೈಲೇಶ್ ಎಂಬ ಯುವಕ ಪರಿಚಯವಾಗಿದ್ದ. ಧರ್ಮಸ್ಥಳದ ಹೋಟೆಲ್ ಒಂದರಲ್ಲಿ ಪರಿಚಯವಾಗಿದ್ದು ಸಿಎಂ ಯಡ್ಡಿಯೂರಪ್ಪ ನನಗೆ ತುಂಬಾ ಹತ್ತಿರದವರು ಅಂತ ತನ್ನ ಮೊಬೈಲಿನಲ್ಲಿ ಫೋಟೋ ತೋರಿಸಿ ನಂಬಿಸಿದ್ದಾನೆ. ಅಲ್ಲದೆ, ಯಡ್ಡಿಯೂರಪ್ಪ ಚುನಾವಣೆ ಸಂದರ್ಭ ಹಣ ಹಂಚಲು ನನಗೇ ಹಣ ಕೊಟ್ಟಿದ್ದರು ಅಂತ ಕಂತೆ ಕಂತೆ ನೋಟಿನ ಫೋಟೋವನ್ನೂ ತೋರಿಸಿ ಶೈಲೇಶ್ ನಂಬಿಕೆ ಹುಟ್ಟಿಸಿದ್ದಾನೆ. ಮುಖ್ಯಮಂತ್ರಿ ಬಳಿ ಹೇಳಿಸಿ ಏನು ಬೇಕಾದ್ರೂ ಕೆಲಸ ಮಾಡಿಸ್ತೀನಿ ಅಂತ ಹೇಳಿದ್ದಾನೆ.
ಇದನ್ನು ನಂಬಿದ ಚಾಲಕ ಪುರುಷೋತ್ತಮ್, ತನ್ನನ್ನು ಧರ್ಮಸ್ಥಳ ಡಿಪೋದಿಂದ ಮಂಡ್ಯಕ್ಕೆ ವರ್ಗಾವಣೆ ಮಾಡಿಸಲು ಹೇಳಿದ್ದಾನೆ. ನಿನ್ನ ಕೆಲಸ ಮಾಡಿಕೊಡುವುದಾಗಿ ಹೇಳಿದ ಶೈಲೇಶ್, ಅದಕ್ಕೆ ಅಧಿಕಾರಿಗಳಿಗೆ ಒಂದಿಷ್ಟು ಕೊಡಬೇಕಾಗುತ್ತೆ ಅಂತ ಹೇಳಿ ಹಣದ ಬೇಡಿಕೆ ಇಟ್ಟಿದ್ದಾನೆ. ಆತನ ಮಾತನ್ನು ನಂಬಿದ ಚಾಲಕ ಪುರುಷೋತ್ತಮ್, 98 ಸಾವಿರ ರೂ. ಹಣವನ್ನು ನೀಡಿದ್ದಾನೆ. ಆದರೆ, ಶೈಲೇಶ್ ಹಣ ಪಡೆದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ.
ಹಣ ಕಳೆದುಕೊಂಡ ಚಾಲಕ ಪುರುಷೋತ್ತಮ್ ಈ ಬಗ್ಗೆ ಮಂಡ್ಯದಲ್ಲಿ ದೂರು ದಾಖಲಿಸಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದು ಆರೋಪಿಯ ಹುಡುಕಾಟ ನಡೆದಿದೆ.
Mandya Man poses himself as CM Yediyurappas PA cheats KSRTC Driver telling him that he would make his transfer from Dharmasthala Depo to Mandya and flees with Rs. 98,000. A case has been registered at the Mandya Police Station.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm