ಬ್ರೇಕಿಂಗ್ ನ್ಯೂಸ್
19-06-21 02:12 pm Headline Karnataka News Network ಕ್ರೈಂ
ಮಂಡ್ಯ, ಜೂನ್ 19: ಮುಖ್ಯಮಂತ್ರಿ ಯಡ್ಡಿಯೂರಪ್ಪ ಅವರ ಪಿಎ ಅಂತ ಹೇಳಿಕೊಂಡು ಯುವಕನೊಬ್ಬ ಧರ್ಮಸ್ಥಳದ ಕೆಎಸ್ಆರ್ಟಿಸಿ ಚಾಲಕನಿಂದ ಹಣ ಪಡೆದು ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಧರ್ಮಸ್ಥಳ ಕೆಎಸ್ಸಾರ್ಟಿಸಿ ಡಿಪೋದಲ್ಲಿ ಬಸ್ ಚಾಲಕನಾಗಿರುವ, ಮಂಡ್ಯ ಜಿಲ್ಲೆಯ ಕೀಲಾರ ಗ್ರಾಮದ ಪುರುಷೋತ್ತಮ್ ಎಂಬಾತ ವಂಚನೆಗೊಳಗಾದ ವ್ಯಕ್ತಿ. ಧರ್ಮಸ್ಥಳ ಡಿಪೋದಲ್ಲಿ ಚಾಲಕನಾಗಿದ್ದ ವೇಳೆ ಶೈಲೇಶ್ ಎಂಬ ಯುವಕ ಪರಿಚಯವಾಗಿದ್ದ. ಧರ್ಮಸ್ಥಳದ ಹೋಟೆಲ್ ಒಂದರಲ್ಲಿ ಪರಿಚಯವಾಗಿದ್ದು ಸಿಎಂ ಯಡ್ಡಿಯೂರಪ್ಪ ನನಗೆ ತುಂಬಾ ಹತ್ತಿರದವರು ಅಂತ ತನ್ನ ಮೊಬೈಲಿನಲ್ಲಿ ಫೋಟೋ ತೋರಿಸಿ ನಂಬಿಸಿದ್ದಾನೆ. ಅಲ್ಲದೆ, ಯಡ್ಡಿಯೂರಪ್ಪ ಚುನಾವಣೆ ಸಂದರ್ಭ ಹಣ ಹಂಚಲು ನನಗೇ ಹಣ ಕೊಟ್ಟಿದ್ದರು ಅಂತ ಕಂತೆ ಕಂತೆ ನೋಟಿನ ಫೋಟೋವನ್ನೂ ತೋರಿಸಿ ಶೈಲೇಶ್ ನಂಬಿಕೆ ಹುಟ್ಟಿಸಿದ್ದಾನೆ. ಮುಖ್ಯಮಂತ್ರಿ ಬಳಿ ಹೇಳಿಸಿ ಏನು ಬೇಕಾದ್ರೂ ಕೆಲಸ ಮಾಡಿಸ್ತೀನಿ ಅಂತ ಹೇಳಿದ್ದಾನೆ.

ಇದನ್ನು ನಂಬಿದ ಚಾಲಕ ಪುರುಷೋತ್ತಮ್, ತನ್ನನ್ನು ಧರ್ಮಸ್ಥಳ ಡಿಪೋದಿಂದ ಮಂಡ್ಯಕ್ಕೆ ವರ್ಗಾವಣೆ ಮಾಡಿಸಲು ಹೇಳಿದ್ದಾನೆ. ನಿನ್ನ ಕೆಲಸ ಮಾಡಿಕೊಡುವುದಾಗಿ ಹೇಳಿದ ಶೈಲೇಶ್, ಅದಕ್ಕೆ ಅಧಿಕಾರಿಗಳಿಗೆ ಒಂದಿಷ್ಟು ಕೊಡಬೇಕಾಗುತ್ತೆ ಅಂತ ಹೇಳಿ ಹಣದ ಬೇಡಿಕೆ ಇಟ್ಟಿದ್ದಾನೆ. ಆತನ ಮಾತನ್ನು ನಂಬಿದ ಚಾಲಕ ಪುರುಷೋತ್ತಮ್, 98 ಸಾವಿರ ರೂ. ಹಣವನ್ನು ನೀಡಿದ್ದಾನೆ. ಆದರೆ, ಶೈಲೇಶ್ ಹಣ ಪಡೆದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ.
ಹಣ ಕಳೆದುಕೊಂಡ ಚಾಲಕ ಪುರುಷೋತ್ತಮ್ ಈ ಬಗ್ಗೆ ಮಂಡ್ಯದಲ್ಲಿ ದೂರು ದಾಖಲಿಸಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದು ಆರೋಪಿಯ ಹುಡುಕಾಟ ನಡೆದಿದೆ.
Mandya Man poses himself as CM Yediyurappas PA cheats KSRTC Driver telling him that he would make his transfer from Dharmasthala Depo to Mandya and flees with Rs. 98,000. A case has been registered at the Mandya Police Station.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am