ಬ್ರೇಕಿಂಗ್ ನ್ಯೂಸ್
22-06-21 01:05 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 22 : ಮೆಟ್ರೋ ಸಿಟಿ ಬೆಂಗಳೂರಿನಲ್ಲಿ ಮೋಸದ ಜಾಲ ಹೆಚ್ಚುತ್ತಲೇ ಬರುತ್ತಿದೆ. ಮನಿ ಡಬ್ಲಿಂಗ್ ಇನ್ವೆಸ್ಟ್ಮೆಂಟ್ ಅಂತ ಪುಂಗಿ ಬಿಟ್ಟು ಸಾಮಾನ್ಯ ಜನರಿಗೆ ಟೋಪಿ ಹಾಕುವ ಖದೀಮರು ಹುಟ್ಟಿಕೊಂಡಿದ್ದಾರೆ. ಶೇ. 25ರಷ್ಟು ಲಾಭಾಂಶದ ಆಮಿಷವೊಡ್ಡಿ ಎರಡು ಸಾವಿರಕ್ಕೂ ಅಧಿಕ ಜನರಿಗೆ ಮೋಸಗೈದ ಘಟನೆ ಬೆಳಕಿಗೆ ಬಂದಿದೆ.
ಆನ್ಲೈನ್ ಡಿಜಿಟೆಕ್ ಮಾರ್ಕ್ ಕಂಪನಿ ಹೆಸರಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ವಂಚಿಸಿದ ಡಿ.ಎಸ್.ರಂಗನಾಥ್ ಎಂಬಾತನನ್ನು ಬೆಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ನಿರ್ದಿಷ್ಟ ಕಚೇರಿ ಇಲ್ಲದೆ ಜಾಹೀರಾತು ಮೂಲಕ ವಂಚನೆ ಮಾಡುತ್ತಿದ್ದ ಎಂದು ದೂರಲಾಗಿದೆ.

ಶೇಕಡಾ 25ರಷ್ಟು ಲಾಭಾಂಶದ ಆಮಿಷವೊಡ್ಡಿ ಹೂಡಿಕೆ ಮಾಡಿಸಿಕೊಳ್ಳುತ್ತಿದ್ದರು. ಆರಂಭದಲ್ಲಿ 15 ಸಾವಿರ ಹೂಡಿಕೆ ಮಾಡಿ ಸದಸ್ಯತ್ವ ಪಡೀಬೇಕು. ಬಳಿಕ ವರ್ಷಕ್ಕೆ ಹೂಡಿಕೆ ಮಾಡುಲಿದ ಲೆಕ್ಕದಲ್ಲಿ ಲಾಭಾಂಶ ಪಡೆಯಬಹುದು ಎಂದು ಹೇಳುತ್ತಿದ್ದರು. 2021ರ ಡಿಸೆಂಬರ್ ನಲ್ಲಿ 1 ಲಕ್ಷ ಲಾಭಾಂಶ ನೀಡಿಕೆ, 2022ರಲ್ಲಿ 5 ಲಕ್ಷ ರೂಪಾಯಿ, 2023ರಲ್ಲಿ 12 ಲಕ್ಷ ರೂ, 2025ಕ್ಕೆ 25 ಲಕ್ಷ ರೂಪಾಯಿ ಲಾಭ ಎಂದು ಪುಂಗಿ ಬಿಟ್ಟು ವಂಚನೆ ಮಾಡಿದ್ದಾರೆ. ಇನ್ನು ಹೆಚ್ಚಿನ ಬಡ್ಡಿ ಬೇಕಾದರೆ 1 ಲಕ್ಷ ಹೂಡಿಕೆ ಮಾಡಲು ಹೇಳುತ್ತಿದ್ದರು.

ಸದಸ್ಯತ್ವ ಪಡೆದವರಿಗೆ ಯೂಸರ್ ನೇಮ್, ಪಾಸ್ ವರ್ಡ್ ನೀಡಲಾಗುತ್ತಿತ್ತು. ಆ ಮೂಲಕ ಚೈನ್ ಲಿಂಕ್ ಆಧಾರದಲ್ಲಿ ಹೂಡಿಕೆ ಮಾಡಲಾಗುತ್ತಿತ್ತು. ಹೂಡಿಕೆಯಾದ ಕೋಟ್ಯಾಂತರ ಹಣವನ್ನು ಕ್ರಿಪ್ಟೊ ಕರೆನ್ಸಿಯ ಟ್ರೋನ್ ಕಾಯಿನ್ ರೂಪದಲ್ಲಿ ತೋರಿಸಲಾಗುತ್ತಿತ್ತು. ಬಳಿಕ ಕಂಪೆನಿ ಹೆಸರಿನಲ್ಲಿ ಡಿಟಿಎಂ ಟೋಕನ್ ಎಂದು ರೂಪಿಸಿ ಸರ್ಕಾರಕ್ಕೆ ತೆರಿಗೆ ವಂಚನೆ ಮಾಡಲಾಗಿದೆ. ಈ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಅರೆಸ್ಟ್ ಆಗ ರಂಗನಾಥ್ ನನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Bangalore Man cheats two thousand people of Money Doubling online Digitech CEO arrested. He was arrested by the CCB Police, The accused has been identified as Ranganath.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm