ಬ್ರೇಕಿಂಗ್ ನ್ಯೂಸ್
22-06-21 01:05 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 22 : ಮೆಟ್ರೋ ಸಿಟಿ ಬೆಂಗಳೂರಿನಲ್ಲಿ ಮೋಸದ ಜಾಲ ಹೆಚ್ಚುತ್ತಲೇ ಬರುತ್ತಿದೆ. ಮನಿ ಡಬ್ಲಿಂಗ್ ಇನ್ವೆಸ್ಟ್ಮೆಂಟ್ ಅಂತ ಪುಂಗಿ ಬಿಟ್ಟು ಸಾಮಾನ್ಯ ಜನರಿಗೆ ಟೋಪಿ ಹಾಕುವ ಖದೀಮರು ಹುಟ್ಟಿಕೊಂಡಿದ್ದಾರೆ. ಶೇ. 25ರಷ್ಟು ಲಾಭಾಂಶದ ಆಮಿಷವೊಡ್ಡಿ ಎರಡು ಸಾವಿರಕ್ಕೂ ಅಧಿಕ ಜನರಿಗೆ ಮೋಸಗೈದ ಘಟನೆ ಬೆಳಕಿಗೆ ಬಂದಿದೆ.
ಆನ್ಲೈನ್ ಡಿಜಿಟೆಕ್ ಮಾರ್ಕ್ ಕಂಪನಿ ಹೆಸರಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ವಂಚಿಸಿದ ಡಿ.ಎಸ್.ರಂಗನಾಥ್ ಎಂಬಾತನನ್ನು ಬೆಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ನಿರ್ದಿಷ್ಟ ಕಚೇರಿ ಇಲ್ಲದೆ ಜಾಹೀರಾತು ಮೂಲಕ ವಂಚನೆ ಮಾಡುತ್ತಿದ್ದ ಎಂದು ದೂರಲಾಗಿದೆ.

ಶೇಕಡಾ 25ರಷ್ಟು ಲಾಭಾಂಶದ ಆಮಿಷವೊಡ್ಡಿ ಹೂಡಿಕೆ ಮಾಡಿಸಿಕೊಳ್ಳುತ್ತಿದ್ದರು. ಆರಂಭದಲ್ಲಿ 15 ಸಾವಿರ ಹೂಡಿಕೆ ಮಾಡಿ ಸದಸ್ಯತ್ವ ಪಡೀಬೇಕು. ಬಳಿಕ ವರ್ಷಕ್ಕೆ ಹೂಡಿಕೆ ಮಾಡುಲಿದ ಲೆಕ್ಕದಲ್ಲಿ ಲಾಭಾಂಶ ಪಡೆಯಬಹುದು ಎಂದು ಹೇಳುತ್ತಿದ್ದರು. 2021ರ ಡಿಸೆಂಬರ್ ನಲ್ಲಿ 1 ಲಕ್ಷ ಲಾಭಾಂಶ ನೀಡಿಕೆ, 2022ರಲ್ಲಿ 5 ಲಕ್ಷ ರೂಪಾಯಿ, 2023ರಲ್ಲಿ 12 ಲಕ್ಷ ರೂ, 2025ಕ್ಕೆ 25 ಲಕ್ಷ ರೂಪಾಯಿ ಲಾಭ ಎಂದು ಪುಂಗಿ ಬಿಟ್ಟು ವಂಚನೆ ಮಾಡಿದ್ದಾರೆ. ಇನ್ನು ಹೆಚ್ಚಿನ ಬಡ್ಡಿ ಬೇಕಾದರೆ 1 ಲಕ್ಷ ಹೂಡಿಕೆ ಮಾಡಲು ಹೇಳುತ್ತಿದ್ದರು.

ಸದಸ್ಯತ್ವ ಪಡೆದವರಿಗೆ ಯೂಸರ್ ನೇಮ್, ಪಾಸ್ ವರ್ಡ್ ನೀಡಲಾಗುತ್ತಿತ್ತು. ಆ ಮೂಲಕ ಚೈನ್ ಲಿಂಕ್ ಆಧಾರದಲ್ಲಿ ಹೂಡಿಕೆ ಮಾಡಲಾಗುತ್ತಿತ್ತು. ಹೂಡಿಕೆಯಾದ ಕೋಟ್ಯಾಂತರ ಹಣವನ್ನು ಕ್ರಿಪ್ಟೊ ಕರೆನ್ಸಿಯ ಟ್ರೋನ್ ಕಾಯಿನ್ ರೂಪದಲ್ಲಿ ತೋರಿಸಲಾಗುತ್ತಿತ್ತು. ಬಳಿಕ ಕಂಪೆನಿ ಹೆಸರಿನಲ್ಲಿ ಡಿಟಿಎಂ ಟೋಕನ್ ಎಂದು ರೂಪಿಸಿ ಸರ್ಕಾರಕ್ಕೆ ತೆರಿಗೆ ವಂಚನೆ ಮಾಡಲಾಗಿದೆ. ಈ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಅರೆಸ್ಟ್ ಆಗ ರಂಗನಾಥ್ ನನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Bangalore Man cheats two thousand people of Money Doubling online Digitech CEO arrested. He was arrested by the CCB Police, The accused has been identified as Ranganath.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm