ಬ್ರೇಕಿಂಗ್ ನ್ಯೂಸ್
22-06-21 01:05 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 22 : ಮೆಟ್ರೋ ಸಿಟಿ ಬೆಂಗಳೂರಿನಲ್ಲಿ ಮೋಸದ ಜಾಲ ಹೆಚ್ಚುತ್ತಲೇ ಬರುತ್ತಿದೆ. ಮನಿ ಡಬ್ಲಿಂಗ್ ಇನ್ವೆಸ್ಟ್ಮೆಂಟ್ ಅಂತ ಪುಂಗಿ ಬಿಟ್ಟು ಸಾಮಾನ್ಯ ಜನರಿಗೆ ಟೋಪಿ ಹಾಕುವ ಖದೀಮರು ಹುಟ್ಟಿಕೊಂಡಿದ್ದಾರೆ. ಶೇ. 25ರಷ್ಟು ಲಾಭಾಂಶದ ಆಮಿಷವೊಡ್ಡಿ ಎರಡು ಸಾವಿರಕ್ಕೂ ಅಧಿಕ ಜನರಿಗೆ ಮೋಸಗೈದ ಘಟನೆ ಬೆಳಕಿಗೆ ಬಂದಿದೆ.
ಆನ್ಲೈನ್ ಡಿಜಿಟೆಕ್ ಮಾರ್ಕ್ ಕಂಪನಿ ಹೆಸರಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ವಂಚಿಸಿದ ಡಿ.ಎಸ್.ರಂಗನಾಥ್ ಎಂಬಾತನನ್ನು ಬೆಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ನಿರ್ದಿಷ್ಟ ಕಚೇರಿ ಇಲ್ಲದೆ ಜಾಹೀರಾತು ಮೂಲಕ ವಂಚನೆ ಮಾಡುತ್ತಿದ್ದ ಎಂದು ದೂರಲಾಗಿದೆ.

ಶೇಕಡಾ 25ರಷ್ಟು ಲಾಭಾಂಶದ ಆಮಿಷವೊಡ್ಡಿ ಹೂಡಿಕೆ ಮಾಡಿಸಿಕೊಳ್ಳುತ್ತಿದ್ದರು. ಆರಂಭದಲ್ಲಿ 15 ಸಾವಿರ ಹೂಡಿಕೆ ಮಾಡಿ ಸದಸ್ಯತ್ವ ಪಡೀಬೇಕು. ಬಳಿಕ ವರ್ಷಕ್ಕೆ ಹೂಡಿಕೆ ಮಾಡುಲಿದ ಲೆಕ್ಕದಲ್ಲಿ ಲಾಭಾಂಶ ಪಡೆಯಬಹುದು ಎಂದು ಹೇಳುತ್ತಿದ್ದರು. 2021ರ ಡಿಸೆಂಬರ್ ನಲ್ಲಿ 1 ಲಕ್ಷ ಲಾಭಾಂಶ ನೀಡಿಕೆ, 2022ರಲ್ಲಿ 5 ಲಕ್ಷ ರೂಪಾಯಿ, 2023ರಲ್ಲಿ 12 ಲಕ್ಷ ರೂ, 2025ಕ್ಕೆ 25 ಲಕ್ಷ ರೂಪಾಯಿ ಲಾಭ ಎಂದು ಪುಂಗಿ ಬಿಟ್ಟು ವಂಚನೆ ಮಾಡಿದ್ದಾರೆ. ಇನ್ನು ಹೆಚ್ಚಿನ ಬಡ್ಡಿ ಬೇಕಾದರೆ 1 ಲಕ್ಷ ಹೂಡಿಕೆ ಮಾಡಲು ಹೇಳುತ್ತಿದ್ದರು.

ಸದಸ್ಯತ್ವ ಪಡೆದವರಿಗೆ ಯೂಸರ್ ನೇಮ್, ಪಾಸ್ ವರ್ಡ್ ನೀಡಲಾಗುತ್ತಿತ್ತು. ಆ ಮೂಲಕ ಚೈನ್ ಲಿಂಕ್ ಆಧಾರದಲ್ಲಿ ಹೂಡಿಕೆ ಮಾಡಲಾಗುತ್ತಿತ್ತು. ಹೂಡಿಕೆಯಾದ ಕೋಟ್ಯಾಂತರ ಹಣವನ್ನು ಕ್ರಿಪ್ಟೊ ಕರೆನ್ಸಿಯ ಟ್ರೋನ್ ಕಾಯಿನ್ ರೂಪದಲ್ಲಿ ತೋರಿಸಲಾಗುತ್ತಿತ್ತು. ಬಳಿಕ ಕಂಪೆನಿ ಹೆಸರಿನಲ್ಲಿ ಡಿಟಿಎಂ ಟೋಕನ್ ಎಂದು ರೂಪಿಸಿ ಸರ್ಕಾರಕ್ಕೆ ತೆರಿಗೆ ವಂಚನೆ ಮಾಡಲಾಗಿದೆ. ಈ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಅರೆಸ್ಟ್ ಆಗ ರಂಗನಾಥ್ ನನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Bangalore Man cheats two thousand people of Money Doubling online Digitech CEO arrested. He was arrested by the CCB Police, The accused has been identified as Ranganath.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm