ಬ್ರೇಕಿಂಗ್ ನ್ಯೂಸ್
22-06-21 02:53 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 22: ಟ್ರಕ್ ನಲ್ಲಿ ತುಂಬಿಕೊಂಡು ಬರುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಂಗಳೂರಿನ ಎನ್ ಸಿಬಿ ಅಧಿಕಾರಿಗಳು ಪತ್ತೆಹಚ್ಚಿದ್ದು ನಾಲ್ವರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಹೈದರಾಬಾದ್ ನಿಂದ ಬೆಂಗಳೂರಿಗೆ ತರಲಾಗುತ್ತಿದ್ದ ಎರಡು ಸಾವಿರ ಕೇಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗೇರು ಬೀಜ ಸಾಗಿಸುತ್ತಿದ್ದ ಲಾರಿಯಲ್ಲಿ ಬಾಕ್ಸ್ ಗಳ ಎಡೆಯಲ್ಲಿ ಗಾಂಜಾವನ್ನು ತುಂಬಿಸಲಾಗಿತ್ತು. ಬೆಂಗಳೂರು ಎನ್ ಸಿಬಿ ವಲಯ ನಿರ್ದೇಶಕ ಅಮಿತ್ ಘವಾಟೆ ಈ ಬಗ್ಗೆ ಹೇಳಿಕೆ ನೀಡಿದ್ದು, 15 ಕೋಟಿ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಇಷ್ಟು ಭಾರೀ ಪ್ರಮಾಣದಲ್ಲಿ ಗಾಂಜಾ (ಮರಿಜುವಾನಾ) ಸಂಗ್ರಹವನ್ನು ಪತ್ತೆ ಮಾಡಲಾಗಿದೆ. ಗೇರು ಬೀಜಗಳ ಚೀಲಗಳ ಮಧ್ಯೆ ಎರಡು ಕೇಜಿಯಷ್ಟು ಗಾಂಜಾವನ್ನು ಪ್ಲಾಸ್ಟಿಕ್ ಪ್ಯಾಕ್ ಮಾಡಿ ತುಂಬಿಸಲಾಗಿತ್ತು. ಲಾರಿಯಲ್ಲಿ ಪೂರ್ತಿ ಪರಿಶೀಲನೆ ನಡೆಸಿದಾಗ, ಈ ರೀತಿಯ 1080 ಪ್ಲಾಸ್ಟಿಕ್ ಚೀಲಗಳಲ್ಲಿ ಗಾಂಜಾ ಅಡಗಿಸಿಟ್ಟಿರುವುದು ಪತ್ತೆಯಾಗಿದೆ ಎಂದು ಘವಾಟೆ ತಿಳಿಸಿದ್ದಾರೆ.

ಭಾರೀ ಗಾತ್ರದ ಟ್ರಕ್ಕಿನಲ್ಲಿ ಗಾಂಜಾ ತುಂಬಿಸಿಕೊಂಡು ಪುಣೆ, ಮುಂಬೈಗೆ ಸಾಗಿಸುವ ದಂಧೆ ಇದೆ. ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಮತ್ತು ಹೈದರಾಬಾದಿನ ಎನ್ ಸಿಬಿ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಹೈದರಾಬಾದಿನ ಪೆಡ್ಡಾ ಅಂಬರಪೇಟ್ ಟೋಲ್ ಪ್ಲಾಜಾದಲ್ಲಿ ಅಧಿಕಾರಿಗಳು ಟ್ರಕ್ಕನ್ನು ಅಡ್ಡಹಾಕಿ ಪರಿಶೀಲಿಸಿದಾಗ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ. ಬಂಧಿತರನ್ನು ಮಹಾರಾಷ್ಟ್ರದ ಉಸ್ಮನಾಬಾದ್ ಜಿಲ್ಲೆಯ ಕೆ.ಕಾಳೆ, ಎಸ್. ಕಾಳೆ, ಸಿ.ಕಾಳೆ ಮತ್ತು ಬಿ.ಧೋವಲ್ಕರ್ ಎಂದು ಗುರುತಿಸಿದ್ದಾಗಿ ಅಮಿತ್ ಘವಾಟೆ ತಿಳಿಸಿದ್ದಾರೆ.
ನಕ್ಸಲ್ ಪೀಡಿತ ಪ್ರದೇಶದಲ್ಲಿ ಗಾಂಜಾ ಬೆಳೆ
ಆಂಧ್ರಪ್ರದೇಶ ಮತ್ತು ಒಡಿಶಾ ಗಡಿಭಾಗದ ಮಾವೋವಾದಿ ನಕ್ಸಲ್ ಪೀಡಿತ ಪ್ರದೇಶದಲ್ಲಿ ಗಾಂಜಾ ಬೆಳೆಯಲಾಗುತ್ತಿದೆ. ಇದೇ ಭಾಗದಿಂದ ಇಡೀ ದೇಶಾದ್ಯಂತ ಗಾಂಜಾ ಪೂರೈಕೆಯಾಗುತ್ತಿದೆ. ರಾಜಧಾನಿ ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ನಗರಗಳಿಗೆ ಅಕ್ರಮವಾಗಿ ಸರಬರಾಜು ಆಗುತ್ತದೆ. ಇದೇ ಗಾಂಜಾ ಶ್ರೀಲಂಕಾಕ್ಕೂ ರವಾನೆ
Bangalore Two thousand kilos of Ganja found in Truck. The drugs were packed in around 1080 gunny bags.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm