ಬ್ರೇಕಿಂಗ್ ನ್ಯೂಸ್
22-06-21 02:53 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 22: ಟ್ರಕ್ ನಲ್ಲಿ ತುಂಬಿಕೊಂಡು ಬರುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಂಗಳೂರಿನ ಎನ್ ಸಿಬಿ ಅಧಿಕಾರಿಗಳು ಪತ್ತೆಹಚ್ಚಿದ್ದು ನಾಲ್ವರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಹೈದರಾಬಾದ್ ನಿಂದ ಬೆಂಗಳೂರಿಗೆ ತರಲಾಗುತ್ತಿದ್ದ ಎರಡು ಸಾವಿರ ಕೇಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗೇರು ಬೀಜ ಸಾಗಿಸುತ್ತಿದ್ದ ಲಾರಿಯಲ್ಲಿ ಬಾಕ್ಸ್ ಗಳ ಎಡೆಯಲ್ಲಿ ಗಾಂಜಾವನ್ನು ತುಂಬಿಸಲಾಗಿತ್ತು. ಬೆಂಗಳೂರು ಎನ್ ಸಿಬಿ ವಲಯ ನಿರ್ದೇಶಕ ಅಮಿತ್ ಘವಾಟೆ ಈ ಬಗ್ಗೆ ಹೇಳಿಕೆ ನೀಡಿದ್ದು, 15 ಕೋಟಿ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಇಷ್ಟು ಭಾರೀ ಪ್ರಮಾಣದಲ್ಲಿ ಗಾಂಜಾ (ಮರಿಜುವಾನಾ) ಸಂಗ್ರಹವನ್ನು ಪತ್ತೆ ಮಾಡಲಾಗಿದೆ. ಗೇರು ಬೀಜಗಳ ಚೀಲಗಳ ಮಧ್ಯೆ ಎರಡು ಕೇಜಿಯಷ್ಟು ಗಾಂಜಾವನ್ನು ಪ್ಲಾಸ್ಟಿಕ್ ಪ್ಯಾಕ್ ಮಾಡಿ ತುಂಬಿಸಲಾಗಿತ್ತು. ಲಾರಿಯಲ್ಲಿ ಪೂರ್ತಿ ಪರಿಶೀಲನೆ ನಡೆಸಿದಾಗ, ಈ ರೀತಿಯ 1080 ಪ್ಲಾಸ್ಟಿಕ್ ಚೀಲಗಳಲ್ಲಿ ಗಾಂಜಾ ಅಡಗಿಸಿಟ್ಟಿರುವುದು ಪತ್ತೆಯಾಗಿದೆ ಎಂದು ಘವಾಟೆ ತಿಳಿಸಿದ್ದಾರೆ.

ಭಾರೀ ಗಾತ್ರದ ಟ್ರಕ್ಕಿನಲ್ಲಿ ಗಾಂಜಾ ತುಂಬಿಸಿಕೊಂಡು ಪುಣೆ, ಮುಂಬೈಗೆ ಸಾಗಿಸುವ ದಂಧೆ ಇದೆ. ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಮತ್ತು ಹೈದರಾಬಾದಿನ ಎನ್ ಸಿಬಿ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಹೈದರಾಬಾದಿನ ಪೆಡ್ಡಾ ಅಂಬರಪೇಟ್ ಟೋಲ್ ಪ್ಲಾಜಾದಲ್ಲಿ ಅಧಿಕಾರಿಗಳು ಟ್ರಕ್ಕನ್ನು ಅಡ್ಡಹಾಕಿ ಪರಿಶೀಲಿಸಿದಾಗ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ. ಬಂಧಿತರನ್ನು ಮಹಾರಾಷ್ಟ್ರದ ಉಸ್ಮನಾಬಾದ್ ಜಿಲ್ಲೆಯ ಕೆ.ಕಾಳೆ, ಎಸ್. ಕಾಳೆ, ಸಿ.ಕಾಳೆ ಮತ್ತು ಬಿ.ಧೋವಲ್ಕರ್ ಎಂದು ಗುರುತಿಸಿದ್ದಾಗಿ ಅಮಿತ್ ಘವಾಟೆ ತಿಳಿಸಿದ್ದಾರೆ.
ನಕ್ಸಲ್ ಪೀಡಿತ ಪ್ರದೇಶದಲ್ಲಿ ಗಾಂಜಾ ಬೆಳೆ
ಆಂಧ್ರಪ್ರದೇಶ ಮತ್ತು ಒಡಿಶಾ ಗಡಿಭಾಗದ ಮಾವೋವಾದಿ ನಕ್ಸಲ್ ಪೀಡಿತ ಪ್ರದೇಶದಲ್ಲಿ ಗಾಂಜಾ ಬೆಳೆಯಲಾಗುತ್ತಿದೆ. ಇದೇ ಭಾಗದಿಂದ ಇಡೀ ದೇಶಾದ್ಯಂತ ಗಾಂಜಾ ಪೂರೈಕೆಯಾಗುತ್ತಿದೆ. ರಾಜಧಾನಿ ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ನಗರಗಳಿಗೆ ಅಕ್ರಮವಾಗಿ ಸರಬರಾಜು ಆಗುತ್ತದೆ. ಇದೇ ಗಾಂಜಾ ಶ್ರೀಲಂಕಾಕ್ಕೂ ರವಾನೆ
Bangalore Two thousand kilos of Ganja found in Truck. The drugs were packed in around 1080 gunny bags.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm