ಬ್ರೇಕಿಂಗ್ ನ್ಯೂಸ್
22-06-21 02:53 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 22: ಟ್ರಕ್ ನಲ್ಲಿ ತುಂಬಿಕೊಂಡು ಬರುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಂಗಳೂರಿನ ಎನ್ ಸಿಬಿ ಅಧಿಕಾರಿಗಳು ಪತ್ತೆಹಚ್ಚಿದ್ದು ನಾಲ್ವರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಹೈದರಾಬಾದ್ ನಿಂದ ಬೆಂಗಳೂರಿಗೆ ತರಲಾಗುತ್ತಿದ್ದ ಎರಡು ಸಾವಿರ ಕೇಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗೇರು ಬೀಜ ಸಾಗಿಸುತ್ತಿದ್ದ ಲಾರಿಯಲ್ಲಿ ಬಾಕ್ಸ್ ಗಳ ಎಡೆಯಲ್ಲಿ ಗಾಂಜಾವನ್ನು ತುಂಬಿಸಲಾಗಿತ್ತು. ಬೆಂಗಳೂರು ಎನ್ ಸಿಬಿ ವಲಯ ನಿರ್ದೇಶಕ ಅಮಿತ್ ಘವಾಟೆ ಈ ಬಗ್ಗೆ ಹೇಳಿಕೆ ನೀಡಿದ್ದು, 15 ಕೋಟಿ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಇಷ್ಟು ಭಾರೀ ಪ್ರಮಾಣದಲ್ಲಿ ಗಾಂಜಾ (ಮರಿಜುವಾನಾ) ಸಂಗ್ರಹವನ್ನು ಪತ್ತೆ ಮಾಡಲಾಗಿದೆ. ಗೇರು ಬೀಜಗಳ ಚೀಲಗಳ ಮಧ್ಯೆ ಎರಡು ಕೇಜಿಯಷ್ಟು ಗಾಂಜಾವನ್ನು ಪ್ಲಾಸ್ಟಿಕ್ ಪ್ಯಾಕ್ ಮಾಡಿ ತುಂಬಿಸಲಾಗಿತ್ತು. ಲಾರಿಯಲ್ಲಿ ಪೂರ್ತಿ ಪರಿಶೀಲನೆ ನಡೆಸಿದಾಗ, ಈ ರೀತಿಯ 1080 ಪ್ಲಾಸ್ಟಿಕ್ ಚೀಲಗಳಲ್ಲಿ ಗಾಂಜಾ ಅಡಗಿಸಿಟ್ಟಿರುವುದು ಪತ್ತೆಯಾಗಿದೆ ಎಂದು ಘವಾಟೆ ತಿಳಿಸಿದ್ದಾರೆ.
ಭಾರೀ ಗಾತ್ರದ ಟ್ರಕ್ಕಿನಲ್ಲಿ ಗಾಂಜಾ ತುಂಬಿಸಿಕೊಂಡು ಪುಣೆ, ಮುಂಬೈಗೆ ಸಾಗಿಸುವ ದಂಧೆ ಇದೆ. ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಮತ್ತು ಹೈದರಾಬಾದಿನ ಎನ್ ಸಿಬಿ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಹೈದರಾಬಾದಿನ ಪೆಡ್ಡಾ ಅಂಬರಪೇಟ್ ಟೋಲ್ ಪ್ಲಾಜಾದಲ್ಲಿ ಅಧಿಕಾರಿಗಳು ಟ್ರಕ್ಕನ್ನು ಅಡ್ಡಹಾಕಿ ಪರಿಶೀಲಿಸಿದಾಗ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ. ಬಂಧಿತರನ್ನು ಮಹಾರಾಷ್ಟ್ರದ ಉಸ್ಮನಾಬಾದ್ ಜಿಲ್ಲೆಯ ಕೆ.ಕಾಳೆ, ಎಸ್. ಕಾಳೆ, ಸಿ.ಕಾಳೆ ಮತ್ತು ಬಿ.ಧೋವಲ್ಕರ್ ಎಂದು ಗುರುತಿಸಿದ್ದಾಗಿ ಅಮಿತ್ ಘವಾಟೆ ತಿಳಿಸಿದ್ದಾರೆ.
ನಕ್ಸಲ್ ಪೀಡಿತ ಪ್ರದೇಶದಲ್ಲಿ ಗಾಂಜಾ ಬೆಳೆ
ಆಂಧ್ರಪ್ರದೇಶ ಮತ್ತು ಒಡಿಶಾ ಗಡಿಭಾಗದ ಮಾವೋವಾದಿ ನಕ್ಸಲ್ ಪೀಡಿತ ಪ್ರದೇಶದಲ್ಲಿ ಗಾಂಜಾ ಬೆಳೆಯಲಾಗುತ್ತಿದೆ. ಇದೇ ಭಾಗದಿಂದ ಇಡೀ ದೇಶಾದ್ಯಂತ ಗಾಂಜಾ ಪೂರೈಕೆಯಾಗುತ್ತಿದೆ. ರಾಜಧಾನಿ ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ನಗರಗಳಿಗೆ ಅಕ್ರಮವಾಗಿ ಸರಬರಾಜು ಆಗುತ್ತದೆ. ಇದೇ ಗಾಂಜಾ ಶ್ರೀಲಂಕಾಕ್ಕೂ ರವಾನೆ
Bangalore Two thousand kilos of Ganja found in Truck. The drugs were packed in around 1080 gunny bags.
15-06-25 09:29 pm
Bangalore Correspondent
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
15-06-25 10:29 pm
HK News Desk
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
15-06-25 11:04 pm
Mangalore Correspondent
Kadri Kaibattal, Mangalore Rain, Landslide: ಕ...
15-06-25 09:50 pm
Mangalore Rain, School Holiday: ರೆಡ್ ಅಲರ್ಟ್ ಮ...
15-06-25 09:35 pm
Mangalore Heavy Rains, Dinesh Gundu Rao: ಮಳೆ...
15-06-25 03:20 pm
Mangalore Rain, Compound Wall Collapsed Video...
15-06-25 12:12 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm