ಬ್ರೇಕಿಂಗ್ ನ್ಯೂಸ್
22-06-21 02:53 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 22: ಟ್ರಕ್ ನಲ್ಲಿ ತುಂಬಿಕೊಂಡು ಬರುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಂಗಳೂರಿನ ಎನ್ ಸಿಬಿ ಅಧಿಕಾರಿಗಳು ಪತ್ತೆಹಚ್ಚಿದ್ದು ನಾಲ್ವರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಹೈದರಾಬಾದ್ ನಿಂದ ಬೆಂಗಳೂರಿಗೆ ತರಲಾಗುತ್ತಿದ್ದ ಎರಡು ಸಾವಿರ ಕೇಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗೇರು ಬೀಜ ಸಾಗಿಸುತ್ತಿದ್ದ ಲಾರಿಯಲ್ಲಿ ಬಾಕ್ಸ್ ಗಳ ಎಡೆಯಲ್ಲಿ ಗಾಂಜಾವನ್ನು ತುಂಬಿಸಲಾಗಿತ್ತು. ಬೆಂಗಳೂರು ಎನ್ ಸಿಬಿ ವಲಯ ನಿರ್ದೇಶಕ ಅಮಿತ್ ಘವಾಟೆ ಈ ಬಗ್ಗೆ ಹೇಳಿಕೆ ನೀಡಿದ್ದು, 15 ಕೋಟಿ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಇಷ್ಟು ಭಾರೀ ಪ್ರಮಾಣದಲ್ಲಿ ಗಾಂಜಾ (ಮರಿಜುವಾನಾ) ಸಂಗ್ರಹವನ್ನು ಪತ್ತೆ ಮಾಡಲಾಗಿದೆ. ಗೇರು ಬೀಜಗಳ ಚೀಲಗಳ ಮಧ್ಯೆ ಎರಡು ಕೇಜಿಯಷ್ಟು ಗಾಂಜಾವನ್ನು ಪ್ಲಾಸ್ಟಿಕ್ ಪ್ಯಾಕ್ ಮಾಡಿ ತುಂಬಿಸಲಾಗಿತ್ತು. ಲಾರಿಯಲ್ಲಿ ಪೂರ್ತಿ ಪರಿಶೀಲನೆ ನಡೆಸಿದಾಗ, ಈ ರೀತಿಯ 1080 ಪ್ಲಾಸ್ಟಿಕ್ ಚೀಲಗಳಲ್ಲಿ ಗಾಂಜಾ ಅಡಗಿಸಿಟ್ಟಿರುವುದು ಪತ್ತೆಯಾಗಿದೆ ಎಂದು ಘವಾಟೆ ತಿಳಿಸಿದ್ದಾರೆ.

ಭಾರೀ ಗಾತ್ರದ ಟ್ರಕ್ಕಿನಲ್ಲಿ ಗಾಂಜಾ ತುಂಬಿಸಿಕೊಂಡು ಪುಣೆ, ಮುಂಬೈಗೆ ಸಾಗಿಸುವ ದಂಧೆ ಇದೆ. ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಮತ್ತು ಹೈದರಾಬಾದಿನ ಎನ್ ಸಿಬಿ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಹೈದರಾಬಾದಿನ ಪೆಡ್ಡಾ ಅಂಬರಪೇಟ್ ಟೋಲ್ ಪ್ಲಾಜಾದಲ್ಲಿ ಅಧಿಕಾರಿಗಳು ಟ್ರಕ್ಕನ್ನು ಅಡ್ಡಹಾಕಿ ಪರಿಶೀಲಿಸಿದಾಗ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ. ಬಂಧಿತರನ್ನು ಮಹಾರಾಷ್ಟ್ರದ ಉಸ್ಮನಾಬಾದ್ ಜಿಲ್ಲೆಯ ಕೆ.ಕಾಳೆ, ಎಸ್. ಕಾಳೆ, ಸಿ.ಕಾಳೆ ಮತ್ತು ಬಿ.ಧೋವಲ್ಕರ್ ಎಂದು ಗುರುತಿಸಿದ್ದಾಗಿ ಅಮಿತ್ ಘವಾಟೆ ತಿಳಿಸಿದ್ದಾರೆ.
ನಕ್ಸಲ್ ಪೀಡಿತ ಪ್ರದೇಶದಲ್ಲಿ ಗಾಂಜಾ ಬೆಳೆ
ಆಂಧ್ರಪ್ರದೇಶ ಮತ್ತು ಒಡಿಶಾ ಗಡಿಭಾಗದ ಮಾವೋವಾದಿ ನಕ್ಸಲ್ ಪೀಡಿತ ಪ್ರದೇಶದಲ್ಲಿ ಗಾಂಜಾ ಬೆಳೆಯಲಾಗುತ್ತಿದೆ. ಇದೇ ಭಾಗದಿಂದ ಇಡೀ ದೇಶಾದ್ಯಂತ ಗಾಂಜಾ ಪೂರೈಕೆಯಾಗುತ್ತಿದೆ. ರಾಜಧಾನಿ ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ನಗರಗಳಿಗೆ ಅಕ್ರಮವಾಗಿ ಸರಬರಾಜು ಆಗುತ್ತದೆ. ಇದೇ ಗಾಂಜಾ ಶ್ರೀಲಂಕಾಕ್ಕೂ ರವಾನೆ
Bangalore Two thousand kilos of Ganja found in Truck. The drugs were packed in around 1080 gunny bags.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm