ಬ್ರೇಕಿಂಗ್ ನ್ಯೂಸ್
22-06-21 05:30 pm Mangalore Correspondent ಕ್ರೈಂ
ಮಂಗಳೂರು, ಜೂ.22: ಫೇಸ್ ಬುಕ್ ಮೂಲಕ ಪರಿಚಯವಾದ ಆಗಂತುಕ ವ್ಯಕ್ತಿಯೊಬ್ಬರಿಗೆ 1.15 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದೂರು ನೀಡಿರುವ ವ್ಯಕ್ತಿಯ ಫೇಸ್ ಬುಕ್ ಖಾತೆಗೆ 'ನೆಲ್ಸನ್ ಮಾರ್ಕ್' ಹೆಸರಿನ ಅಪರಿಚಿತ ವ್ಯಕ್ತಿಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಬಳಿಕ ಆತ ಫೇಸ್ ಬುಕ್ ಮುಖಾಂತರ ಸಂದೇಶ ವಿನಿಮಯ ಮಾಡುತ್ತಿದ್ದ. ಅದೇ ಸಂದರ್ಭ ಆತ ಇವರ ವಾಟ್ಸ್ ಆ್ಯಪ್ ನಂಬರ್ ಪಡೆದುಕೊಂಡು, ನೀವು ನನ್ನ ಒಳ್ಳೆಯ ಸ್ನೇಹಿತ, ನಿಮಗೆ ನಾನು ಸ್ವಲ್ಪ ಹಣವನ್ನು ಕೊಡಲು ಇಚ್ಛಿಸುತ್ತೇನೆ ಎಂದು ನಂಬಿಸಿ ಬ್ಯಾಂಕ್ ಖಾತೆ ವಿವರ ಪಡೆದುಕೊಂಡಿದ್ದ.

ಬಳಿಕ ನಿಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಜಮೆ ಮಾಡಿರುವುದಾಗಿ ತಿಳಿಸಿ, ಒಂದು ಡೆಪಾಸಿಟ್ ಸ್ಲಿಪ್ ಕಳುಹಿಸಿಕೊಟ್ಟಿರುವುದಾಗಿ ನಂಬಿಸಿದ್ದಾನೆ. ಆದರೆ, ಹಣ ಪಡೆಯಬೇಕಾದಲ್ಲಿ ಆದಾಯ ತೆರಿಗೆಯನ್ನು ನೀವು ಪಾವತಿಸಬೇಕೆಂದು ತಿಳಿಸಿದ್ದಾನೆ. ಅದನ್ನು ನಂಬಿ, ಆರೋಪಿ ಕಳುಹಿಸಿಕೊಟ್ಟ ದೆಹಲಿಯ ಇಂಡಿಯನ್ ಬ್ಯಾಂಕ್ ನ ಖಾತೆಗೆ 2021 ಏಪ್ರಿಲ್ 21 ರಂದು ಹಂತ ಹಂತವಾಗಿ 1,15,000 ರೂ. ಡೆಪಾಸಿಟ್ ಮಾಡಿದ್ದಾರೆ.
ಯಾರೋ ಗುರುತು ಪರಿಚಯ ಇಲ್ಲದ ವ್ಯಕ್ತಿಯ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿ ಕಷ್ಟಪಟ್ಟು ದುಡಿದ ಹಣವನ್ನು ನಿಮಿಷದಲ್ಲೇ ಕಳೆದುಕೊಂಡಿದ್ದಾರೆ. ಈ ಬಗ್ಗೆ ಪಾಂಡೇಶ್ವರದ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
Mangalore Man loses 1.15 lakhs on Facebook by accepting unknown friend requests. A case has been registered at the cybercrime police station in Pandeshwar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm