ಬ್ರೇಕಿಂಗ್ ನ್ಯೂಸ್
22-06-21 05:30 pm Mangalore Correspondent ಕ್ರೈಂ
ಮಂಗಳೂರು, ಜೂ.22: ಫೇಸ್ ಬುಕ್ ಮೂಲಕ ಪರಿಚಯವಾದ ಆಗಂತುಕ ವ್ಯಕ್ತಿಯೊಬ್ಬರಿಗೆ 1.15 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದೂರು ನೀಡಿರುವ ವ್ಯಕ್ತಿಯ ಫೇಸ್ ಬುಕ್ ಖಾತೆಗೆ 'ನೆಲ್ಸನ್ ಮಾರ್ಕ್' ಹೆಸರಿನ ಅಪರಿಚಿತ ವ್ಯಕ್ತಿಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಬಳಿಕ ಆತ ಫೇಸ್ ಬುಕ್ ಮುಖಾಂತರ ಸಂದೇಶ ವಿನಿಮಯ ಮಾಡುತ್ತಿದ್ದ. ಅದೇ ಸಂದರ್ಭ ಆತ ಇವರ ವಾಟ್ಸ್ ಆ್ಯಪ್ ನಂಬರ್ ಪಡೆದುಕೊಂಡು, ನೀವು ನನ್ನ ಒಳ್ಳೆಯ ಸ್ನೇಹಿತ, ನಿಮಗೆ ನಾನು ಸ್ವಲ್ಪ ಹಣವನ್ನು ಕೊಡಲು ಇಚ್ಛಿಸುತ್ತೇನೆ ಎಂದು ನಂಬಿಸಿ ಬ್ಯಾಂಕ್ ಖಾತೆ ವಿವರ ಪಡೆದುಕೊಂಡಿದ್ದ.
ಬಳಿಕ ನಿಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಜಮೆ ಮಾಡಿರುವುದಾಗಿ ತಿಳಿಸಿ, ಒಂದು ಡೆಪಾಸಿಟ್ ಸ್ಲಿಪ್ ಕಳುಹಿಸಿಕೊಟ್ಟಿರುವುದಾಗಿ ನಂಬಿಸಿದ್ದಾನೆ. ಆದರೆ, ಹಣ ಪಡೆಯಬೇಕಾದಲ್ಲಿ ಆದಾಯ ತೆರಿಗೆಯನ್ನು ನೀವು ಪಾವತಿಸಬೇಕೆಂದು ತಿಳಿಸಿದ್ದಾನೆ. ಅದನ್ನು ನಂಬಿ, ಆರೋಪಿ ಕಳುಹಿಸಿಕೊಟ್ಟ ದೆಹಲಿಯ ಇಂಡಿಯನ್ ಬ್ಯಾಂಕ್ ನ ಖಾತೆಗೆ 2021 ಏಪ್ರಿಲ್ 21 ರಂದು ಹಂತ ಹಂತವಾಗಿ 1,15,000 ರೂ. ಡೆಪಾಸಿಟ್ ಮಾಡಿದ್ದಾರೆ.
ಯಾರೋ ಗುರುತು ಪರಿಚಯ ಇಲ್ಲದ ವ್ಯಕ್ತಿಯ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿ ಕಷ್ಟಪಟ್ಟು ದುಡಿದ ಹಣವನ್ನು ನಿಮಿಷದಲ್ಲೇ ಕಳೆದುಕೊಂಡಿದ್ದಾರೆ. ಈ ಬಗ್ಗೆ ಪಾಂಡೇಶ್ವರದ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
Mangalore Man loses 1.15 lakhs on Facebook by accepting unknown friend requests. A case has been registered at the cybercrime police station in Pandeshwar.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm