ಬ್ರೇಕಿಂಗ್ ನ್ಯೂಸ್
22-06-21 08:07 pm Satish, Bengaluru ಕ್ರೈಂ
ಬೆಂಗಳೂರು, ಜೂನ್ 22: ಟೆಕ್ಕಿಯೊಬ್ಬರು ಕೊರೊನಾ ಸೋಂಕಿನಿಂದ ತನ್ನ ಹೆಂಡತಿಯನ್ನು ಕಳೆದುಕೊಂಡಿರುವ ನಡುವಲ್ಲೇ ಆತನ ಸ್ವಂತ ಕುಟುಂಬಸ್ಥರೇ ಬೆನ್ನಿಗೆ ಚೂರಿ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರಾಜರಾಜೇಶ್ವರಿ ನಗರದ ಪ್ರವೀಣ್ ಹಾಗೂ ನಿಮಿತಾ ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಗಳಾಗಿದ್ದರು. ಈ ನಡುವೆ ನಿಮಿತಾ ಕಳೆದ ಏಪ್ರಿಲ್ 20ರಂದು ಕೊರೊನಾ ಸೋಂಕಿಗೆ ಒಳಗಾಗಿ ಉಸಿರಾಟದ ಸಮಸ್ಯೆಗೆ ಸಿಲುಕಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ 2ರಂದು ಮೃತಪಟ್ಟಿದ್ದರು.

ಆಬಳಿಕ ಮೇ 13ಕ್ಕೆ ಪತ್ನಿಯ ಸಾವಿನ ತಿಥಿ ಕಾರ್ಯ ಮಾಡಲು ಪತಿ ಪ್ರವೀಣ್ ಹಾಗೂ ಕುಟುಂಬಸ್ಥರು ಮುಂದಾಗಿದ್ದರು. ಈ ವೇಳೆ, ಪತ್ನಿಯ ಕುಟುಂಬಸ್ಥರು ನಿಮಿತಾ ಮೃತಪಟ್ಟ ಸಮಯ ಸರಿಯಿಲ್ಲ. ಅಪಶಕುನ ಇದೆ. ಮೂರು ತಿಂಗಳ ಕಾಲ ನೀನು ಮನೆಗೆ ಬರುವುದು ಬೇಡ ಎಂದು ಪ್ರವೀಣ್ ಅವರನ್ನು ನಿಮಿತಾ ಕುಟುಂಬಸ್ಥರು ಬೇರೆಡೆ ಕಳುಹಿಸಿದ್ದಾರೆ.
ಆದರೆ, ಪ್ರವೀಣ್ ಒಂದು ತಿಂಗಳು ಆಗುವಷ್ಟರಲ್ಲಿ ಮನೆಗೆ ಮರಳಿದ್ದಾರೆ. ಮನೆಗೆ ಬಂದು ನೋಡಿದಾಗ, ಪ್ರವೀಣ್ ಗೆ ಆಘಾತ ಕಾದಿತ್ತು. ಮನೆಯಲ್ಲಿದ್ದ ಆರು ಲಕ್ಷ ರೂ. ಮೌಲ್ಯದ ಪತ್ನಿಯ ಚಿನ್ನಾಭರಣ ಹಾಗೂ ಮೂರು ಲಕ್ಷ ರೂ. ನಗದು, ಕಾರನ್ನು ಸಂಬಂಧಿಕರು ದೋಚಿದ್ದು ಕಂಡುಬಂದಿದೆ. ಪತ್ನಿಯ ಬಾವ ಶಿವಪ್ಪ ಹಾಗೂ ಆಕೆಯ ಸೋದರಿಯರಾದ ಪ್ರೀತಿ, ಮಮತಾ, ಪಪ್ಪಚ್ಚಿ ಸೇರಿ ಚಿನ್ನಾಭರಣವನ್ನು ದೋಚಿದ್ದಾರೆ ಎಂದು ಪ್ರವೀಣ್ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಆರ್.ಆರ್. ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ಬದಲು ಎನ್ಸಿಆರ್ ದಾಖಲಿಸಿ ರಾಜಿಯಲ್ಲಿ ಮುಗಿಸಲು ನೋಡಿದ್ದಾರೆ. ದೂರಿನ ಬಗ್ಗೆ ಪೊಲೀಸರು ದಾಖಲೆಗಳನ್ನು ಪರಿಶೀಲಿಸದೇ ಆರೋಪಿಗಳ ಪರ ವಕಾಲತ್ತು ವಹಿಸುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ.
Bangalore Family loots Gold cash and car from Man who lost his wife due to Covid. A case has been registered at the R R Nagar Police Station.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm