ಬ್ರೇಕಿಂಗ್ ನ್ಯೂಸ್
22-06-21 08:07 pm Satish, Bengaluru ಕ್ರೈಂ
ಬೆಂಗಳೂರು, ಜೂನ್ 22: ಟೆಕ್ಕಿಯೊಬ್ಬರು ಕೊರೊನಾ ಸೋಂಕಿನಿಂದ ತನ್ನ ಹೆಂಡತಿಯನ್ನು ಕಳೆದುಕೊಂಡಿರುವ ನಡುವಲ್ಲೇ ಆತನ ಸ್ವಂತ ಕುಟುಂಬಸ್ಥರೇ ಬೆನ್ನಿಗೆ ಚೂರಿ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರಾಜರಾಜೇಶ್ವರಿ ನಗರದ ಪ್ರವೀಣ್ ಹಾಗೂ ನಿಮಿತಾ ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಗಳಾಗಿದ್ದರು. ಈ ನಡುವೆ ನಿಮಿತಾ ಕಳೆದ ಏಪ್ರಿಲ್ 20ರಂದು ಕೊರೊನಾ ಸೋಂಕಿಗೆ ಒಳಗಾಗಿ ಉಸಿರಾಟದ ಸಮಸ್ಯೆಗೆ ಸಿಲುಕಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ 2ರಂದು ಮೃತಪಟ್ಟಿದ್ದರು.

ಆಬಳಿಕ ಮೇ 13ಕ್ಕೆ ಪತ್ನಿಯ ಸಾವಿನ ತಿಥಿ ಕಾರ್ಯ ಮಾಡಲು ಪತಿ ಪ್ರವೀಣ್ ಹಾಗೂ ಕುಟುಂಬಸ್ಥರು ಮುಂದಾಗಿದ್ದರು. ಈ ವೇಳೆ, ಪತ್ನಿಯ ಕುಟುಂಬಸ್ಥರು ನಿಮಿತಾ ಮೃತಪಟ್ಟ ಸಮಯ ಸರಿಯಿಲ್ಲ. ಅಪಶಕುನ ಇದೆ. ಮೂರು ತಿಂಗಳ ಕಾಲ ನೀನು ಮನೆಗೆ ಬರುವುದು ಬೇಡ ಎಂದು ಪ್ರವೀಣ್ ಅವರನ್ನು ನಿಮಿತಾ ಕುಟುಂಬಸ್ಥರು ಬೇರೆಡೆ ಕಳುಹಿಸಿದ್ದಾರೆ.
ಆದರೆ, ಪ್ರವೀಣ್ ಒಂದು ತಿಂಗಳು ಆಗುವಷ್ಟರಲ್ಲಿ ಮನೆಗೆ ಮರಳಿದ್ದಾರೆ. ಮನೆಗೆ ಬಂದು ನೋಡಿದಾಗ, ಪ್ರವೀಣ್ ಗೆ ಆಘಾತ ಕಾದಿತ್ತು. ಮನೆಯಲ್ಲಿದ್ದ ಆರು ಲಕ್ಷ ರೂ. ಮೌಲ್ಯದ ಪತ್ನಿಯ ಚಿನ್ನಾಭರಣ ಹಾಗೂ ಮೂರು ಲಕ್ಷ ರೂ. ನಗದು, ಕಾರನ್ನು ಸಂಬಂಧಿಕರು ದೋಚಿದ್ದು ಕಂಡುಬಂದಿದೆ. ಪತ್ನಿಯ ಬಾವ ಶಿವಪ್ಪ ಹಾಗೂ ಆಕೆಯ ಸೋದರಿಯರಾದ ಪ್ರೀತಿ, ಮಮತಾ, ಪಪ್ಪಚ್ಚಿ ಸೇರಿ ಚಿನ್ನಾಭರಣವನ್ನು ದೋಚಿದ್ದಾರೆ ಎಂದು ಪ್ರವೀಣ್ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಆರ್.ಆರ್. ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ಬದಲು ಎನ್ಸಿಆರ್ ದಾಖಲಿಸಿ ರಾಜಿಯಲ್ಲಿ ಮುಗಿಸಲು ನೋಡಿದ್ದಾರೆ. ದೂರಿನ ಬಗ್ಗೆ ಪೊಲೀಸರು ದಾಖಲೆಗಳನ್ನು ಪರಿಶೀಲಿಸದೇ ಆರೋಪಿಗಳ ಪರ ವಕಾಲತ್ತು ವಹಿಸುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ.
Bangalore Family loots Gold cash and car from Man who lost his wife due to Covid. A case has been registered at the R R Nagar Police Station.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am