ಬ್ರೇಕಿಂಗ್ ನ್ಯೂಸ್
24-06-21 01:28 pm Headline Karnataka News Network ಕ್ರೈಂ
Photo credits : ANI @ ANI
ಮುಂಬೈ, ಜೂನ್ 24: ಮುಂಬೈ ಸರಣಿ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಸೋದರ ಇಕ್ಬಾಲ್ ಕಸ್ಕರ್ನನ್ನು ಮುಂಬೈ ಪೊಲೀಸರು ಡ್ರಗ್ಸ್ ಕೇಸಲ್ಲಿ ಬಂಧಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಸಾವು ಮತ್ತು ಡ್ರಗ್ಸ್ ಪ್ರಕರಣದಲ್ಲಿ ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಇಕ್ಬಾಲ್ ಬಂಧಿಸಲಾಗಿದೆ.
ಮಾದಕ ದ್ರವ್ಯ ನಿಗ್ರಹ ದಳ(ಎನ್ಸಿಬಿ) ಪೊಲೀಸರು ಆರೋಪಿಯನ್ನು ಥಾಣೆಯಲ್ಲಿ ಬಂಧಿಸಿದ್ದಾರೆ. ನಂತರ ಎನ್ ಸಿಬಿ ಅಧಿಕಾರಿಗಳು ಬಲ್ಲಾರ್ಡ್ ಎಸ್ಟೇಟ್ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.
15 ಕೆಜಿ ಹಶೀಶ್ ಹೊಂದಿದ್ದ ಕಾರಣಕ್ಕೆ ಕಸ್ಕರ್ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ, ಹೆಚ್ಚಿನ ಮಾಹಿತಿಯನ್ನು ಅಧಿಕಾರಿಗಳು ಹಂಚಿಕೊಂಡಿಲ್ಲ. ದಾವೂದ್ ಇಬ್ರಾಹಿಂ ಗ್ಯಾಂಗ್ ಜೊತೆ ಸಂಪರ್ಕ ಹೊಂದಿರುವ ಪೆಡ್ಲರ್ ಪರ್ವೇಜ್ ಖಾನ್ ಅಲಿಯಾಸ್ ಚಿಂಕು ಹಾಗೂ ಡ್ರಗ್ ಪೆಡ್ಲರ್ ಹಾರೀಸ್ ಖಾನ್ ಮೂಲಕ ಡ್ರಗ್ಸ್ ದಂಧೆ ನಡೆಸಲಾಗುತ್ತಿತ್ತು.
ಅಲ್ಲದೆ, ಹಾರೀಸ್ ಖಾನ್ ಅಂಧೇರಿ, ಲೋಖಂಡವಾಲ, ಬಾಂದ್ರಾಗಳಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂದು ಪಿಟಿಐ ವರದಿ ಮಾಡಿದೆ. ಚಿಂಕು ಪಠಾಣ್ ಡ್ರಗ್ಸ್ ಕೇಸಿನಲ್ಲಿ ಹಾರೀಸ್ ಬಂಧನವಾಗಿದ್ದು, ಆತ ನೀಡಿದ್ದ ಸುಳಿವಿನ ಮೇರೆಗೆ ದಾವೂದ್ ಸೋದರನಿಗೆ ಬಲೆ ಬೀಸಲಾಗಿತ್ತು. ಬಾಲಿವುಡ್ ಮಂದಿ ಜೊತೆಗೆ ಹಾರೀಸ್ ನಿಕಟ ಸಂಪರ್ಕ ಹೊಂದಿದ್ದಲ್ಲದೆ, ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲೂ ಹೆಸರು ಕೇಳಿಬಂದಿತ್ತು.
Notorious underworld don and global terrorist Dawood Ibrahim’s younger brother Iqbal Kaskar was arrested by the Narcotics Control Bureau (NCB). Kaskar is accused of running the operations of Dawood Ibrahim in Mumbai for the past couple of decades.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm