ಬ್ರೇಕಿಂಗ್ ನ್ಯೂಸ್
24-06-21 02:00 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 24:ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬನಿಗೆ ಗಾಳಿಪಟ ದಾರ ಸಿಕ್ಕಿಕೊಂಡು ಕತ್ತು ಸೀಳಿರುವ ಘಟನೆ ಆಡುಗೋಡಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಈ ಕುರಿತು ಆಸ್ಪತ್ರೆಯಿಂದ ವಿಡಿಯೋ ಮಾಡುವ ಮೂಲಕ ಯುವಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ. ಇನ್ನೇನು ಕುತ್ತಿಗೆ ಸೀಳಿ ತಲೆ ಬೇರ್ಪಡಬೇಕಿತ್ತು. ಚಾಣಾಕ್ಷತೆ ಮೆರೆದು ಜೀವ ಉಳಿಸಿಕೊಂಡಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ವಿಡಿಯೋ ಮಾಡಿದ್ದು, ಎಲ್ಲರಿಗೂ ನಮಸ್ಕಾರ, ನಾನು ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ಹೋಗುತ್ತಿದ್ದೆ. ಆಡುಗೋಡಿ ಪೊಲೀಸ್ ಠಾಣೆ ಮುಂದೆ ಹೋಗುತ್ತಿದ್ದೆ. ಗಾಳಿಪಟದ ದಾರವೊಂದು ಕುತ್ತಿಗೆಗೆ ಸಿಕ್ಕಿದೆ. ಕೂಡಲೇ ಎಚ್ಚೆತ್ತು ಕೈಯಿನಿಂದ ದಾರವನ್ನು ಎಳೆದೆ. ಅದರಿಂದ ನನ್ನ ಎರಡೂ ಬೆರಳು ತುಂಡಾಗುವಷ್ಟು ದಾರ ಕತ್ತರಿಸಿದೆ. ನಾನು ಸರ್ಕಾರಿ ಅಧಿಕಾರಿಗಳಲ್ಲಿ ಮನವಿ ಮಾಡಿಕೊಳ್ಳುವುದು ಇಷ್ಟೇ. ಬೆಂಗಳೂರಿನಲ್ಲಿ ಗಾಳಿಪಟ ಹಾರಿಸುವುದನ್ನು ನಿಷೇಧ ಮಾಡಿ. ಎಷ್ಟೋ ಪಕ್ಷಿಗಳು ಜೀವ ಕಳೆದುಕೊಳ್ಳುತ್ತಿವೆ. ಇದರ ಜತೆಗೆ ಇದೀಗ ಜನರು ಜೀವ ಕಳೆದುಕೊಳ್ಳುವಂತಾಗಿದೆ. ನಾನು ಸ್ವಲ್ಪ ಯಾಮಾರಿದ್ದರೆ ನನ್ನ ರುಂಡ ನೋಡಬೇಕಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿ ಬೆಂಗಳೂರಿನಲ್ಲಿ ಗಾಳಿಪಟ ಹಾರಿಸುವುದನ್ನು ನಿಷೇಧ ಮಾಡಿ ಎಂದು ಆತ ಮನವಿ ಮಾಡಿಕೊಂಡಿದ್ದಾನೆ. ಅಂದಹಾಗೆ ಈ ವ್ಯಕ್ತಿಯ ವಿವರ ಬಹಿರಂಗ ಪಡಿಸಿಲ್ಲ. ಆದರೆ ಈತ ಮಾಡಿರುವ ವಿಡಿಯೋ ಮಾತ್ರ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ಬೆಂಗಳೂರಿನಲ್ಲಿ ಗಾಳಿಪಟದ ದಾರಗಳು ಪಕ್ಷಿಗಳ ಜೀವಕ್ಕೂ ಅಪಾಯ ತಂದೊಡ್ಡಿವೆ. ಇತ್ತೀಚೆಗೆ ದಾರಕ್ಕೆ ನವಿಲು ಸಿಲುಕಿ ಮೂರು ದಿನ ಒದ್ದಾಡಿತ್ತು. ಬಳಿಕ ವನ್ಯ ಜೀವಿ ಸಂರಕ್ಷಕರು ಅದನ್ನು ರಕ್ಷಿಸಿದ್ದರು. ಅನೇಕ ಹದ್ದುಗಳು ಬೆಂಗಳೂರಿನಲ್ಲಿ ಜೀವ ಕಳೆದುಕೊಂಡಿವೆ. ಪಾರಿವಾಳಗಳೂ ಕೂಡ ಗಾಳಿಪಟ ದಾರಕ್ಕೆ ಸಿಲುಕಿ ಒದ್ದಾಡಿ ಜೀವ ಕಳೆದುಕೊಂಡಿವೆ. ಬೆಂಗಳೂರಿನಲ್ಲಿ ಗಾಳಿಪಟ ಹಾರಿಸುವುದನ್ನು ನಿಷೇಧಿಸುವ ನಿಟ್ಟಿನಲ್ಲಿ ಬಿಬಿಎಂಪಿ ಅಧಿಕಾರಿಗಳು ಚಿಂತನೆ ಮಾಡಬೇಕಿದೆ.
A Two-wheeler rider was seriously injured when his neck was cut by a thread used to fly kites. The incident took place in Bangalore. The video of this has gone viral on social media.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm