ಬ್ರೇಕಿಂಗ್ ನ್ಯೂಸ್
24-06-21 02:00 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 24:ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬನಿಗೆ ಗಾಳಿಪಟ ದಾರ ಸಿಕ್ಕಿಕೊಂಡು ಕತ್ತು ಸೀಳಿರುವ ಘಟನೆ ಆಡುಗೋಡಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಈ ಕುರಿತು ಆಸ್ಪತ್ರೆಯಿಂದ ವಿಡಿಯೋ ಮಾಡುವ ಮೂಲಕ ಯುವಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ. ಇನ್ನೇನು ಕುತ್ತಿಗೆ ಸೀಳಿ ತಲೆ ಬೇರ್ಪಡಬೇಕಿತ್ತು. ಚಾಣಾಕ್ಷತೆ ಮೆರೆದು ಜೀವ ಉಳಿಸಿಕೊಂಡಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ವಿಡಿಯೋ ಮಾಡಿದ್ದು, ಎಲ್ಲರಿಗೂ ನಮಸ್ಕಾರ, ನಾನು ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ಹೋಗುತ್ತಿದ್ದೆ. ಆಡುಗೋಡಿ ಪೊಲೀಸ್ ಠಾಣೆ ಮುಂದೆ ಹೋಗುತ್ತಿದ್ದೆ. ಗಾಳಿಪಟದ ದಾರವೊಂದು ಕುತ್ತಿಗೆಗೆ ಸಿಕ್ಕಿದೆ. ಕೂಡಲೇ ಎಚ್ಚೆತ್ತು ಕೈಯಿನಿಂದ ದಾರವನ್ನು ಎಳೆದೆ. ಅದರಿಂದ ನನ್ನ ಎರಡೂ ಬೆರಳು ತುಂಡಾಗುವಷ್ಟು ದಾರ ಕತ್ತರಿಸಿದೆ. ನಾನು ಸರ್ಕಾರಿ ಅಧಿಕಾರಿಗಳಲ್ಲಿ ಮನವಿ ಮಾಡಿಕೊಳ್ಳುವುದು ಇಷ್ಟೇ. ಬೆಂಗಳೂರಿನಲ್ಲಿ ಗಾಳಿಪಟ ಹಾರಿಸುವುದನ್ನು ನಿಷೇಧ ಮಾಡಿ. ಎಷ್ಟೋ ಪಕ್ಷಿಗಳು ಜೀವ ಕಳೆದುಕೊಳ್ಳುತ್ತಿವೆ. ಇದರ ಜತೆಗೆ ಇದೀಗ ಜನರು ಜೀವ ಕಳೆದುಕೊಳ್ಳುವಂತಾಗಿದೆ. ನಾನು ಸ್ವಲ್ಪ ಯಾಮಾರಿದ್ದರೆ ನನ್ನ ರುಂಡ ನೋಡಬೇಕಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿ ಬೆಂಗಳೂರಿನಲ್ಲಿ ಗಾಳಿಪಟ ಹಾರಿಸುವುದನ್ನು ನಿಷೇಧ ಮಾಡಿ ಎಂದು ಆತ ಮನವಿ ಮಾಡಿಕೊಂಡಿದ್ದಾನೆ. ಅಂದಹಾಗೆ ಈ ವ್ಯಕ್ತಿಯ ವಿವರ ಬಹಿರಂಗ ಪಡಿಸಿಲ್ಲ. ಆದರೆ ಈತ ಮಾಡಿರುವ ವಿಡಿಯೋ ಮಾತ್ರ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ಬೆಂಗಳೂರಿನಲ್ಲಿ ಗಾಳಿಪಟದ ದಾರಗಳು ಪಕ್ಷಿಗಳ ಜೀವಕ್ಕೂ ಅಪಾಯ ತಂದೊಡ್ಡಿವೆ. ಇತ್ತೀಚೆಗೆ ದಾರಕ್ಕೆ ನವಿಲು ಸಿಲುಕಿ ಮೂರು ದಿನ ಒದ್ದಾಡಿತ್ತು. ಬಳಿಕ ವನ್ಯ ಜೀವಿ ಸಂರಕ್ಷಕರು ಅದನ್ನು ರಕ್ಷಿಸಿದ್ದರು. ಅನೇಕ ಹದ್ದುಗಳು ಬೆಂಗಳೂರಿನಲ್ಲಿ ಜೀವ ಕಳೆದುಕೊಂಡಿವೆ. ಪಾರಿವಾಳಗಳೂ ಕೂಡ ಗಾಳಿಪಟ ದಾರಕ್ಕೆ ಸಿಲುಕಿ ಒದ್ದಾಡಿ ಜೀವ ಕಳೆದುಕೊಂಡಿವೆ. ಬೆಂಗಳೂರಿನಲ್ಲಿ ಗಾಳಿಪಟ ಹಾರಿಸುವುದನ್ನು ನಿಷೇಧಿಸುವ ನಿಟ್ಟಿನಲ್ಲಿ ಬಿಬಿಎಂಪಿ ಅಧಿಕಾರಿಗಳು ಚಿಂತನೆ ಮಾಡಬೇಕಿದೆ.
A Two-wheeler rider was seriously injured when his neck was cut by a thread used to fly kites. The incident took place in Bangalore. The video of this has gone viral on social media.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm