ಬ್ರೇಕಿಂಗ್ ನ್ಯೂಸ್
01-09-20 01:34 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 1: ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಲ್ಪಟ್ಟಿರುವ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಈಗ ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ರಿಯಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.
ಈಗಾಗ್ಲೇ ಹಲವು ದಿನಗಳಿಂದ ಸುಶಾಂತ್ ಸಾವಿನ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಿಬಿಐ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸುತ್ತಿದ್ದಾರೆ. ಇದರ ನಡುವೆ ಆಕೆಗೆ ಹೊಸ ತಲೆನೋವು ಶುರುವಾಗಿದ್ದು ಡ್ರಗ್ಸ್ ಜಾಲದಲ್ಲೂ ವಿಚಾರಣೆ ಎದುರಿಸುವಂತಾಗಿದೆ. ಇತ್ತ ಕರ್ನಾಟಕದಲ್ಲಿ ಡ್ರಗ್ಸ್ ಜಾಲದಲ್ಲಿ ಸ್ಯಾಂಡಲ್ ವುಡ್ ನಂಟು ಬಹಿರಂಗ ಆಗಿರುವಾಗಲೇ ಬಾಲಿವುಡ್ ಅಂಗಳದಲ್ಲಿಯೂ ಡ್ರಗ್ಸ್ ಜಾಲದ ಬಗ್ಗೆ ತನಿಖೆ ಶುರುವಾಗಿದ್ದು ವಿಶೇಷ.

ಈ ಹಿಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತನಿಖೆಯಲ್ಲಿ ರಿಯಾ ವಾಟ್ಸಪ್ ಸಂದೇಶಗಳು, ಡ್ರಗ್ಸ್ ಕುರಿತಂತೆ ರಿಯಾ ಮೆಸೇಜ್ ಮಾಡಿರುವುದು ತಿಳಿದುಬಂದಿತ್ತು. ಡಾರ್ಕ್ ನೆಟ್ ವೆಬ್ ಸೈಟಿನಲ್ಲಿ ರಿಯಾ ಖಾಸಗಿಯಾಗಿ ಸಂಪರ್ಕ ಹೊಂದಿದ್ದುದೂ ಪತ್ತೆಯಾಗಿತ್ತು. ಈ ಮಾಹಿತಿ ಆಧರಿಸಿ, ಮಾದಕ ವಸ್ತು ನಿಯಂತ್ರಣ ಬ್ಯೂರೋ ತನಿಖೆ ಆರಂಭಿಸಿತ್ತು. ಪ್ರಾಥಮಿಕ ಮಾಹಿತಿ ಕಲೆಹಾಕಿರುವ ಅಧಿಕಾರಿಗಳು ಈಗ ರಿಯಾ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಇದೇ ವೇಳೆ, ಸಿಬಿಐ ಅಧಿಕಾರಿಗಳು ಸುಶಾಂತ್ ಸ್ನೇಹಿತರು ಮತ್ತು ಮ್ಯಾನೇಜರ್ಗಳನ್ನೂ ತನಿಖೆಗೆ ಒಳಪಡಿಸುತ್ತಿದ್ದಾರೆ. ಸುಶಾಂತ್ ಜೊತೆಗಿದ್ದ ಸಿದ್ಧಾರ್ಥ್ ಪಿಟಾನಿ, ಮ್ಯಾನೇಜರ್ ಶ್ರುತಿ ಮೋದಿ, ಸ್ಯಾಮ್ಯುವೆಲ್ ಮಿರಾಂಡ, ಅಕೌಂಟೆಂಟ್ ರಜತ್ ಮೇವಾಟಿ, ಮನೆ ಕೆಲಸದವರನ್ನೂ ಅಧಿಕಾರಿಗಳು ವಿಚಾರಣೆಗೆ ನಡೆಸುತ್ತಿದ್ದಾರೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am