ಬ್ರೇಕಿಂಗ್ ನ್ಯೂಸ್
29-06-21 10:11 pm Mangaluru Correspondent ಕ್ರೈಂ
ಪುತ್ತೂರು, ಜೂನ್ 29: ಕಡಬ ಪೊಲೀಸ್ ಠಾಣೆ ವ್ಯಾಪ್ತಿಯ ರಾಮಕುಂಜ ಬಳಿಯ ಆತೂರು ಎಂಬಲ್ಲಿ ಪೊಲೀಸ್ ಚೆಕ್ ಪೋಸ್ಟ್ ಹಾಕಿದ್ದನ್ನು ವಿರೋಧಿಸಿ ಗುಂಪೊಂದು ದಾಂಧಲೆ ನಡೆಸಿದ್ದು, ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಆತೂರು ಚೆಕ್ ಪೋಸ್ಟಿನಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಕಡಬ ಎಸ್ಐ ಮತ್ತು ಸಿಬಂದಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಉಪ್ಪಿನಂಗಡಿ ಕಡೆಯಿಂದ ವೇಗವಾಗಿ ಬಂದ ಟಾಟಾ ಏಸ್ ವಾಹನ (ಕೆಎ 21ಬಿ 6482) ಚೆಕ್ ಪೋಸ್ಟ್ ನಲ್ಲಿ ರಸ್ತೆ ದಾಟುತ್ತಿದ್ದ ಹ್ಯಾರಿಸ್ ಎಂಬಾತನಿಗೆ ಡಿಕ್ಕಿಯಾಗಿ ಪರಾರಿಯಾಗಿದೆ. ಚೆಕ್ ಪೋಸ್ಟ್ ನಲ್ಲಿ ವಾಹನ ನಿಲ್ಲಿಸದೆ ಮುಂದೆ ಹೋಗಿದ್ದರಿಂದ ವಾಹನ ಪಾದಚಾರಿಗೆ ಡಿಕ್ಕಿಯಾಗಿತ್ತು. ಗಾಯಗೊಂಡ ಹ್ಯಾರೀಸ್ ನನ್ನು ಕೂಡಲೇ ಕಡಬ ಎಸ್ಐ ತಮ್ಮ ವಾಹನದಲ್ಲಿ ಉಪ್ಪಿನಂಗಡಿಯ ಆಸ್ಪತ್ರೆಗೆ ಒಯ್ದಿದ್ದರು.

ಆನಂತರ ಸ್ವಲ್ಪ ಹೊತ್ತಿನಲ್ಲಿ ಆತೂರು ಚೆಕ್ ಪೋಸ್ಟ್ ನಲ್ಲಿ 50-60 ಮಂದಿ ಸೇರಿದ್ದು, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರ ಪೈಕಿ 10-15 ಜನ ಕಿಡಿಗೇಡಿಗಳು ಅಲ್ಲಿದ್ದ ಪೊಲೀಸರನ್ನು ಉದ್ದೇಶಿಸಿ, ನಿಂದಿಸಿದ್ದಾರೆ. ಬಳಿಕ ಇಲ್ಲಿ ರಸ್ತೆಗೆ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸಿದರೆ ನಮಗೆ ತೊಂದರೆಯಾಗುತ್ತದೆ. ಇಲ್ಲಿ ಯಾವುದೇ ಬ್ಯಾರಿಕೇಡ್ ಬೇಡ ಎಂದು ಅವುಗಳನ್ನು ಕಿತ್ತು ಹಾಕಿದ್ದಾರೆ.
ಅಲ್ಲದೆ, ಅಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಜಿನ್ನಪ್ಪ ಮತ್ತು ಸಿಬಂದಿ ಹರೀಶ್ ಕುಮಾರ್ ಮೇಲೆ ಮೈಗೆ ಕೈಹಾಕಿ ದೂಡಿ ಹಲ್ಲೆಗೆ ಯತ್ನಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಪೊಲೀಸರು ನಿಲ್ಲುವುದಕ್ಕಾಗಿ ಸ್ಥಳೀಯ ಸಾರ್ವಜನಿಕರು ನಿರ್ಮಿಸಿಕೊಟ್ಟಿದ್ದ ಚೆಕ್ ಪೋಸ್ಟ್ ಶೆಡ್ ಅನ್ನು ಧ್ವಂಸ ಮಾಡಿದ್ದು ಅಲ್ಲಿದ್ದ ಮೂರು ಪ್ಲಾಸ್ಟಿಕ್ ಚೇರ್ ಗಳನ್ನೂ ಪುಡಿ ಮಾಡಿದ್ದಾರೆ. ಅಲ್ಲದೆ, ಇಲ್ಲಿ ಚೆಕ್ ಪೋಸ್ಟ್ ಹಾಕಿದರೆ ನಿಮ್ಮನ್ನು ಮತ್ತು ನಿಮ್ಮ ಇಲಾಖಾ ಸಿಬಂದಿಯನ್ನು ಸುಮ್ಮನೆ ಬಿಡುವುದಿಲ್ಲ ಎಂದು ಆವಾಜ್ ಹಾಕಿ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಜಿನ್ನಪ್ಪ ಕಡಬ ಠಾಣೆಗೆ ದೂರು ನೀಡಿದ್ದು, 10ರಿಂದ 15 ಮಂದಿ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಮತ್ತು ದಾಂಧಲೆ ನಡೆಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.
Kadaba Dispute arises for placing Police Checkpost gang assaults Police personal .
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am