ಬ್ರೇಕಿಂಗ್ ನ್ಯೂಸ್
30-06-21 04:15 pm Headline Karnataka News Network ಕ್ರೈಂ
Photo credits : ANI @ ANI
ಭುವನೇಶ್ವರ್, ಜೂನ್ 30: ಪೋರ್ಜರಿ ದಾಖಲೆಗಳನ್ನು ಬಳಸ್ಕೊಂಡು ಲಕ್ಷಾಂತರ ಸಿಮ್ ಕಾರ್ಡ್ ಏಕ್ಟಿವೇಟ್ ಮಾಡಿ ಕ್ರಿಮಿನಲ್ ಚಟುವಟಿಕೆಗೆ ಪೂರೈಕೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದು ಖಾಸಗಿ ಟೆಲಿಕಾಂ ಕಂಪನಿಯ ಏಳು ಮಂದಿಯನ್ನು ಬಂಧಿಸಿದ್ದಾರೆ.
ಜಾಲಕ್ಕೆ ಸಂಬಂಧಿಸಿ 16,147 ಏಕ್ಟಿವ್ ಸಿಮ್ ಕಾರ್ಡ್ ಹಾಗೂ 110 ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಮಹೇಶ್ವರ್ ಬಾರಿಕ್(38), ರಜನಿಜಾಂತ ಪಾಣಿಗ್ರಹಿ(30), ಸುಬ್ರತ್ ಕುಮಾರ್ ಪಾಣಿಗ್ರಹಿ(24), ಸುಕಾಂತ ಕುಮಾರ್ ದಾಸ್ (30), ಸ್ರೀನಿಬಾಶ್ ಘಡಾಯಿ(21), ರಾಜೇಶ್ ಕುಮಾರ್ ಸೇಥಿ (29), ಮಂಗಲಮಾಯ ಮಿಶ್ರಾ (27) ಎಂದು ಗುರುತಿಸಲಾಗಿದೆ.
ಸಿಮ್ ಪಡೆಯಲು ಬರುವ ಅಸಲಿ ಗ್ರಾಹಕರದ್ದೇ ಐಡಿ ದಾಖಲೆ ಪ್ರತಿಗಳನ್ನು ಮತ್ತು ಫೋಟೊಗಳನ್ನು ಪೋರ್ಜರಿ ಮಾಡಿ ನಕಲಿಯಾಗಿ ಸಿಮ್ ಕಾರ್ಡ್ ತಯಾರಿಸುತ್ತಿದ್ದರು. ಲಕ್ಷಾಂತರ ಸಿಮ್ ಕಾರ್ಡ್ ಗಳನ್ನು ನಕಲಿ ಜಾಲದಲ್ಲಿ ಏಕ್ಟಿವೇಟ್ ಮಾಡಿ, ಅವುಗಳನ್ನು ವ್ಯವಸ್ಥಿತವಾಗಿ ಒಡಿಶಾ ಹೊರಭಾಗಕ್ಕೆ ಮಾರಾಟ ಮಾಡಲಾಗುತ್ತಿತ್ತು.
ಒಡಿಶಾ ಹೊರಭಾಗಕ್ಕೆ ಯಾವುದೇ ವಿಳಾಸ ದಾಖಲೆ ಪಡೆಯದೆ ಸಿಮ್ ಗಳನ್ನು ಮಾರಾಟ ಮಾಡುತ್ತಿದ್ದರು. ಹೀಗಾಗಿ ಸಿಮ್ ಪಡೆದವರನ್ನು ಟ್ರೇಸ್ ಮಾಡುವುದು ಸಾಧ್ಯವಿಲ್ಲ. ನಕಲಿ ಸಿಮ್ ಬಳಸಿಕೊಂಡು ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಪೊಲೀಸರು ಅಭಿಪ್ರಾಯ ಪಟ್ಟಿದ್ದಾರೆ.
ಈ ಗ್ಯಾಂಗ್ ಎರಡು ಲಕ್ಷಕ್ಕೂ ಹೆಚ್ಚು ನಕಲಿ ಸಿಮ್ ಗಳನ್ನು ಮಾರಾಟ ಮಾಡಿರುವ ಅಂದಾಜಿದೆ. ದೇಶದ ಭದ್ರತೆಗೆ ಇದೊಂದು ಅಪಾಯಕಾರಿ ಆಗಬಲ್ಲ ನಡೆಯಾಗಿದ್ದು ನಕಲಿ ಸಿಮ್ ಬಳಸಿ ಭದ್ರತೆಗೆ ಸವಾಲಾಗುವ ರೀತಿಯ ಅಪರಾಧ ಕೃತ್ಯಗಳನ್ನು ಎಸಗುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Commissioner of Police, Bhubaneswar-Cuttack, S K Priyadarsi said the pre-activated SIMs were sold outside the state.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm