ಬ್ರೇಕಿಂಗ್ ನ್ಯೂಸ್
30-06-21 04:15 pm Headline Karnataka News Network ಕ್ರೈಂ
Photo credits : ANI @ ANI
ಭುವನೇಶ್ವರ್, ಜೂನ್ 30: ಪೋರ್ಜರಿ ದಾಖಲೆಗಳನ್ನು ಬಳಸ್ಕೊಂಡು ಲಕ್ಷಾಂತರ ಸಿಮ್ ಕಾರ್ಡ್ ಏಕ್ಟಿವೇಟ್ ಮಾಡಿ ಕ್ರಿಮಿನಲ್ ಚಟುವಟಿಕೆಗೆ ಪೂರೈಕೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದು ಖಾಸಗಿ ಟೆಲಿಕಾಂ ಕಂಪನಿಯ ಏಳು ಮಂದಿಯನ್ನು ಬಂಧಿಸಿದ್ದಾರೆ.
ಜಾಲಕ್ಕೆ ಸಂಬಂಧಿಸಿ 16,147 ಏಕ್ಟಿವ್ ಸಿಮ್ ಕಾರ್ಡ್ ಹಾಗೂ 110 ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಮಹೇಶ್ವರ್ ಬಾರಿಕ್(38), ರಜನಿಜಾಂತ ಪಾಣಿಗ್ರಹಿ(30), ಸುಬ್ರತ್ ಕುಮಾರ್ ಪಾಣಿಗ್ರಹಿ(24), ಸುಕಾಂತ ಕುಮಾರ್ ದಾಸ್ (30), ಸ್ರೀನಿಬಾಶ್ ಘಡಾಯಿ(21), ರಾಜೇಶ್ ಕುಮಾರ್ ಸೇಥಿ (29), ಮಂಗಲಮಾಯ ಮಿಶ್ರಾ (27) ಎಂದು ಗುರುತಿಸಲಾಗಿದೆ.


ಸಿಮ್ ಪಡೆಯಲು ಬರುವ ಅಸಲಿ ಗ್ರಾಹಕರದ್ದೇ ಐಡಿ ದಾಖಲೆ ಪ್ರತಿಗಳನ್ನು ಮತ್ತು ಫೋಟೊಗಳನ್ನು ಪೋರ್ಜರಿ ಮಾಡಿ ನಕಲಿಯಾಗಿ ಸಿಮ್ ಕಾರ್ಡ್ ತಯಾರಿಸುತ್ತಿದ್ದರು. ಲಕ್ಷಾಂತರ ಸಿಮ್ ಕಾರ್ಡ್ ಗಳನ್ನು ನಕಲಿ ಜಾಲದಲ್ಲಿ ಏಕ್ಟಿವೇಟ್ ಮಾಡಿ, ಅವುಗಳನ್ನು ವ್ಯವಸ್ಥಿತವಾಗಿ ಒಡಿಶಾ ಹೊರಭಾಗಕ್ಕೆ ಮಾರಾಟ ಮಾಡಲಾಗುತ್ತಿತ್ತು.
ಒಡಿಶಾ ಹೊರಭಾಗಕ್ಕೆ ಯಾವುದೇ ವಿಳಾಸ ದಾಖಲೆ ಪಡೆಯದೆ ಸಿಮ್ ಗಳನ್ನು ಮಾರಾಟ ಮಾಡುತ್ತಿದ್ದರು. ಹೀಗಾಗಿ ಸಿಮ್ ಪಡೆದವರನ್ನು ಟ್ರೇಸ್ ಮಾಡುವುದು ಸಾಧ್ಯವಿಲ್ಲ. ನಕಲಿ ಸಿಮ್ ಬಳಸಿಕೊಂಡು ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಪೊಲೀಸರು ಅಭಿಪ್ರಾಯ ಪಟ್ಟಿದ್ದಾರೆ.
ಈ ಗ್ಯಾಂಗ್ ಎರಡು ಲಕ್ಷಕ್ಕೂ ಹೆಚ್ಚು ನಕಲಿ ಸಿಮ್ ಗಳನ್ನು ಮಾರಾಟ ಮಾಡಿರುವ ಅಂದಾಜಿದೆ. ದೇಶದ ಭದ್ರತೆಗೆ ಇದೊಂದು ಅಪಾಯಕಾರಿ ಆಗಬಲ್ಲ ನಡೆಯಾಗಿದ್ದು ನಕಲಿ ಸಿಮ್ ಬಳಸಿ ಭದ್ರತೆಗೆ ಸವಾಲಾಗುವ ರೀತಿಯ ಅಪರಾಧ ಕೃತ್ಯಗಳನ್ನು ಎಸಗುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Commissioner of Police, Bhubaneswar-Cuttack, S K Priyadarsi said the pre-activated SIMs were sold outside the state.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am