ಬ್ರೇಕಿಂಗ್ ನ್ಯೂಸ್
30-06-21 05:58 pm Mangalore Correspondent ಕ್ರೈಂ
ಮಂಗಳೂರು, ಜೂನ್ 30: ಗಾಂಜಾ ಬೆಳೆಯಲ್ಲೇ ಅತ್ಯಂತ ಹೆಚ್ಚು ಬೆಲೆಬಾಳುವ ಹೈಡ್ರೋವೀಡ್ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮಂಗಳೂರಿನ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಹೊರವಲಯದ ದೇರಳಕಟ್ಟೆ ಬಳಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ನಗರದ ಪ್ರತಿಷ್ಟಿತ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ಮೆಡಿಕಲ್ ವಿದ್ಯಾರ್ಥಿನಿ ಮಿನು ರಶ್ಮಿ ಮತ್ತು ಕಾಸರಗೋಡಿನ ಮಂಗಲ್ಪಾಡಿ ನಿವಾಸಿ ಅಜ್ಮಲ್ ಎಂಬವರನ್ನು ಬಂಧಿಸಿದ್ದಾರೆ. ಇವರ ಬಳಿಯಿದ್ದ ಸುಮಾರು 30 ಲಕ್ಷದಿಂದ ಒಂದು ಕೋಟಿ ಬೆಲೆಬಾಳುವ ಒಂದು ಕೆಜಿ 250 ಗ್ರಾಮ್ ಹೈಡ್ರೋವೀಡ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಮಿನು ರಶ್ಮಿ ಮೂಲತಃ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯ್ಲ್ ನಿವಾಸಿಯಾಗಿದ್ದು ಮಂಗಳೂರಿನ ಶ್ರೀನಿವಾಸ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ. ಆದರೆ, ಇದೇ ವೇಳೆ ಮಂಗಲ್ಪಾಡಿ ನಿವಾಸಿ ಅಜ್ಮಲ್ ಜೊತೆ ಒಡನಾಟ ಹೊಂದಿದ್ದಳು. ಎರಡು ದಿನಗಳ ಹಿಂದೆ ತಮಿಳುನಾಡಿನಿಂದ ರೈಲಿನಲ್ಲಿ ಮಂಗಳೂರಿಗೆ ಬಂದು ಅಜ್ಮಲ್ ಜೊತೆಗೆ ಕಾರಿನಲ್ಲಿ ದೇರಳಕಟ್ಟೆಗೆ ತೆರಳುತ್ತಿದ್ದಳು. ಕಾರಿನಲ್ಲಿ ಹೈಡ್ರೋವೀಡ್ ಗಾಂಜಾ ಇರುವ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು.



ಪ್ರಕರಣದಲ್ಲಿ ಕಾಸರಗೋಡು ಮೂಲದ ವೈದ್ಯ ಡಾ.ನದೀರ್ ಪ್ರಮುಖ ಆರೋಪಿಯಾಗಿದ್ದು ಆತನ ಸ್ನೇಹಿತರಿಗೆ ನೀಡುವಂತೆ ಮಿನು ರಶ್ಮಿಗೆ ಸೂಚನೆ ನೀಡಲಾಗಿತ್ತು. ಅದರಂತೆ, ಗಾಂಜಾ ಸಾಗಾಟ ಮಾಡುತ್ತಿದ್ದರೆಂದು ತಿಳಿದುಬಂದಿದೆ. ಡಾ. ನದೀರ್ ಸದ್ಯಕ್ಕೆ ದುಬೈನಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೈಡ್ರೋವೀಡ್ ಗಾಂಜಾ ಸಾಧಾರಣ ಗಾಂಜಾಕ್ಕಿಂತ ಹತ್ತು ಪಟ್ಟು ಹೆಚ್ಚು ಅಮಲು ಬರಿಸುವ ಪದಾರ್ಥವಾಗಿದ್ದು ಇವನ್ನು ಅತಿ ಹೆಚ್ಚು ದರಕ್ಕೆ ಮಾರಾಟ ಮಾಡಲಾಗುತ್ತದೆ. ಯುರೋಪ್ ರಾಷ್ಟ್ರಗಳಲ್ಲಿ ಇದನ್ನು ನಿಯಮಿತ ಉಷ್ಣತೆಯಲ್ಲಿ ಬೆಳೆಯಲಾಗುತ್ತಿದ್ದು ಅಕ್ರಮವಾಗಿ ಭಾರತಕ್ಕೆ ತಂದು ಮಾರಾಟ ಮಾಡಲಾಗುತ್ತದೆ.
ಗಾಂಜಾ ಪತ್ತೆ ಬಗ್ಗೆ ಮಂಗಳೂರಿನ ಇಕಾನಮಿಕ್ ಅಂಡ್ ನಾರ್ಕೋಟಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
The Mangalore CCB Police have arrested two among one Doctor who was peddling Hydroweed Drugs worth 30 lakhs to 1 core via the internet.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am