ಬ್ರೇಕಿಂಗ್ ನ್ಯೂಸ್
30-06-21 05:58 pm Mangalore Correspondent ಕ್ರೈಂ
ಮಂಗಳೂರು, ಜೂನ್ 30: ಗಾಂಜಾ ಬೆಳೆಯಲ್ಲೇ ಅತ್ಯಂತ ಹೆಚ್ಚು ಬೆಲೆಬಾಳುವ ಹೈಡ್ರೋವೀಡ್ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮಂಗಳೂರಿನ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಹೊರವಲಯದ ದೇರಳಕಟ್ಟೆ ಬಳಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ನಗರದ ಪ್ರತಿಷ್ಟಿತ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ಮೆಡಿಕಲ್ ವಿದ್ಯಾರ್ಥಿನಿ ಮಿನು ರಶ್ಮಿ ಮತ್ತು ಕಾಸರಗೋಡಿನ ಮಂಗಲ್ಪಾಡಿ ನಿವಾಸಿ ಅಜ್ಮಲ್ ಎಂಬವರನ್ನು ಬಂಧಿಸಿದ್ದಾರೆ. ಇವರ ಬಳಿಯಿದ್ದ ಸುಮಾರು 30 ಲಕ್ಷದಿಂದ ಒಂದು ಕೋಟಿ ಬೆಲೆಬಾಳುವ ಒಂದು ಕೆಜಿ 250 ಗ್ರಾಮ್ ಹೈಡ್ರೋವೀಡ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಮಿನು ರಶ್ಮಿ ಮೂಲತಃ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯ್ಲ್ ನಿವಾಸಿಯಾಗಿದ್ದು ಮಂಗಳೂರಿನ ಶ್ರೀನಿವಾಸ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ. ಆದರೆ, ಇದೇ ವೇಳೆ ಮಂಗಲ್ಪಾಡಿ ನಿವಾಸಿ ಅಜ್ಮಲ್ ಜೊತೆ ಒಡನಾಟ ಹೊಂದಿದ್ದಳು. ಎರಡು ದಿನಗಳ ಹಿಂದೆ ತಮಿಳುನಾಡಿನಿಂದ ರೈಲಿನಲ್ಲಿ ಮಂಗಳೂರಿಗೆ ಬಂದು ಅಜ್ಮಲ್ ಜೊತೆಗೆ ಕಾರಿನಲ್ಲಿ ದೇರಳಕಟ್ಟೆಗೆ ತೆರಳುತ್ತಿದ್ದಳು. ಕಾರಿನಲ್ಲಿ ಹೈಡ್ರೋವೀಡ್ ಗಾಂಜಾ ಇರುವ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು.



ಪ್ರಕರಣದಲ್ಲಿ ಕಾಸರಗೋಡು ಮೂಲದ ವೈದ್ಯ ಡಾ.ನದೀರ್ ಪ್ರಮುಖ ಆರೋಪಿಯಾಗಿದ್ದು ಆತನ ಸ್ನೇಹಿತರಿಗೆ ನೀಡುವಂತೆ ಮಿನು ರಶ್ಮಿಗೆ ಸೂಚನೆ ನೀಡಲಾಗಿತ್ತು. ಅದರಂತೆ, ಗಾಂಜಾ ಸಾಗಾಟ ಮಾಡುತ್ತಿದ್ದರೆಂದು ತಿಳಿದುಬಂದಿದೆ. ಡಾ. ನದೀರ್ ಸದ್ಯಕ್ಕೆ ದುಬೈನಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೈಡ್ರೋವೀಡ್ ಗಾಂಜಾ ಸಾಧಾರಣ ಗಾಂಜಾಕ್ಕಿಂತ ಹತ್ತು ಪಟ್ಟು ಹೆಚ್ಚು ಅಮಲು ಬರಿಸುವ ಪದಾರ್ಥವಾಗಿದ್ದು ಇವನ್ನು ಅತಿ ಹೆಚ್ಚು ದರಕ್ಕೆ ಮಾರಾಟ ಮಾಡಲಾಗುತ್ತದೆ. ಯುರೋಪ್ ರಾಷ್ಟ್ರಗಳಲ್ಲಿ ಇದನ್ನು ನಿಯಮಿತ ಉಷ್ಣತೆಯಲ್ಲಿ ಬೆಳೆಯಲಾಗುತ್ತಿದ್ದು ಅಕ್ರಮವಾಗಿ ಭಾರತಕ್ಕೆ ತಂದು ಮಾರಾಟ ಮಾಡಲಾಗುತ್ತದೆ.
ಗಾಂಜಾ ಪತ್ತೆ ಬಗ್ಗೆ ಮಂಗಳೂರಿನ ಇಕಾನಮಿಕ್ ಅಂಡ್ ನಾರ್ಕೋಟಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
The Mangalore CCB Police have arrested two among one Doctor who was peddling Hydroweed Drugs worth 30 lakhs to 1 core via the internet.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 08:23 pm
HK News Desk
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm