ಬ್ರೇಕಿಂಗ್ ನ್ಯೂಸ್
04-07-21 05:20 pm Mangaluru Correspondent ಕ್ರೈಂ
ಮಂಗಳೂರು, ಜುಲೈ 4: ಯುವಕನೊಬ್ಬ ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿ, ಲಕ್ಷಾಂತರ ರೂಪಾಯಿ ಕಳಕೊಂಡ ಘಟನೆ ನಡೆದಿದ್ದು ಆರೋಪಿ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಚೀಚಗದ್ದೆ ಇಬ್ರಾಹಿಂ ಎಂಬವರ ಪುತ್ರ ಅಬ್ದುಲ್ ನಾಸೀರ್ ಹೈಟೆಕ್ ಹನಿಟ್ರ್ಯಾಪ್ಗೆ ಒಳಗಾದ ಯುವಕ. ಅಬ್ದುಲ್ ನಾಸೀರ್ಗೆ ಸಾಮಾಜಿಕ ಜಾಲತಾಣದಲ್ಲಿ ಕಾರ್ಕಳ ಮೂಲದ ತನಿಶಾ ಎಂಬಾಕೆಯ ಪರಿಚಯವಾಗಿತ್ತು.
ಪರಿಚಯವಾದ ಕೆಲವೇ ದಿನಗಳಲ್ಲಿ ಅಬ್ದುಲ್ ನಾಸೀರ್ ಯುವತಿಯ ಬಲೆಗೆ ಬಿದ್ದಿದ್ದಾನೆ. ಪ್ರೀತಿ, ಪ್ರೇಮದ ನೆಪದಲ್ಲಿ ಅರೆನಗ್ನ ಸ್ಥಿತಿಯ ವಿಡಿಯೋಗಳನ್ನು ಕಳಿಸಲು ಕೋರಿದ್ದಳು. ವಿಡಿಯೋ ಕಾಲ್ ಮೂಲಕ ಅರೆನಗ್ನವಾಗುತ್ತಿದ್ದ ಅಬ್ದುಲ್ ನಾಸೀರ್ ವಿಡಿಯೋಗಳನ್ನು ಸ್ಕ್ರೀನ್ ರೆಕಾರ್ಡರ್ ಮೂಲಕ ತನಿಶಾ ದಾಖಲಿಸಿಕೊಂಡಿದ್ದು, ಆನಂತರ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾಳೆ. 30 ಲಕ್ಷ ಹಣ ನೀಡಬೇಕು. ಇಲ್ಲದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಳು.
ದಿನ ಕಳೆಯುತ್ತಿದ್ದಂತೆ ಯುವತಿ ಮತ್ತು ಆಕೆಯ ಸಹಚರರು ಸೇರಿ ಬೆದರಿಕೆ ಹಾಕಿದ್ದಾರೆ. ಕೊನೆಗೆ ಯುವಕ ಅಬ್ದುಲ್ ನಾಸೀರ್ ಪುತ್ತೂರು ಗ್ರಾಮಾಂತರ ಠಾಣೆಯ ಮೆಟ್ಟಿಲೇರಿದ್ದಾನೆ. ಪುತ್ತೂರು ಪೊಲೀಸರು ತನಿಶಾಳನ್ನು ಬಂಧಿಸಿದ್ದು, ಆಕೆಯ ಆರು ಮಂದಿ ಸಹಚರರಿಗಾಗಿ ಹುಡುಕಾಟ ನಡೆಸಿದ್ದಾರೆ.
ನೆಟ್ಟಣಿಗೆ ಮುಡ್ನೂರು ಚೀಚಗದ್ದೆಯ ಹನೀಫ್ ಯಾನೆ ಕೆಎಂವೈ ಹನೀಫ್, ಕೊಟ್ಯಾಡಿಯ ಮಹಮ್ಮದ್ ಕುಂಞ, ಕೊಟ್ಯಾಡಿಯ ಶಾಫಿ, ಸವಣೂರಿನ ಅಝರ್, ಸಯಿದ್ ಮೋನು ಮತ್ತು ನಾಸೀರ್ ಎಂಬವರು ಆರೋಪಿಗಳೆಂದು ದೂರಿನಲ್ಲಿ ಹೇಳಿದ್ದು ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಏಪ್ರಿಲ್ 12ರ ಬಳಿಕ ಈ ರೀತಿ ಪೀಡಿಸುವ ಕಾರ್ಯ ನಡೆದಿದ್ದು, ಯುವಕ ನಾಸೀರ್ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾನೆ. ಬಳಿಕ ಅಧಿಕಾರಿಗಳ ಸೂಚನೆಯಂತೆ ನಾಸೀರ್, ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು.
A youth from Nettanige Mudnoor of the taluk here has filed a complaint with the police against seven people accusing them of fleecing lacs of rupees from him through honey-trapping. Police have arrested a woman in this connection. The 25-year-old complainant, a resident Cheechagadde of Nettanige Mudnur village has filed a complaint with police that he lost Rs 30 lac due to honey-trap. The complainant is a salesman by profession.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm