ಬ್ರೇಕಿಂಗ್ ನ್ಯೂಸ್
04-07-21 05:20 pm Mangaluru Correspondent ಕ್ರೈಂ
ಮಂಗಳೂರು, ಜುಲೈ 4: ಯುವಕನೊಬ್ಬ ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿ, ಲಕ್ಷಾಂತರ ರೂಪಾಯಿ ಕಳಕೊಂಡ ಘಟನೆ ನಡೆದಿದ್ದು ಆರೋಪಿ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಚೀಚಗದ್ದೆ ಇಬ್ರಾಹಿಂ ಎಂಬವರ ಪುತ್ರ ಅಬ್ದುಲ್ ನಾಸೀರ್ ಹೈಟೆಕ್ ಹನಿಟ್ರ್ಯಾಪ್ಗೆ ಒಳಗಾದ ಯುವಕ. ಅಬ್ದುಲ್ ನಾಸೀರ್ಗೆ ಸಾಮಾಜಿಕ ಜಾಲತಾಣದಲ್ಲಿ ಕಾರ್ಕಳ ಮೂಲದ ತನಿಶಾ ಎಂಬಾಕೆಯ ಪರಿಚಯವಾಗಿತ್ತು.
ಪರಿಚಯವಾದ ಕೆಲವೇ ದಿನಗಳಲ್ಲಿ ಅಬ್ದುಲ್ ನಾಸೀರ್ ಯುವತಿಯ ಬಲೆಗೆ ಬಿದ್ದಿದ್ದಾನೆ. ಪ್ರೀತಿ, ಪ್ರೇಮದ ನೆಪದಲ್ಲಿ ಅರೆನಗ್ನ ಸ್ಥಿತಿಯ ವಿಡಿಯೋಗಳನ್ನು ಕಳಿಸಲು ಕೋರಿದ್ದಳು. ವಿಡಿಯೋ ಕಾಲ್ ಮೂಲಕ ಅರೆನಗ್ನವಾಗುತ್ತಿದ್ದ ಅಬ್ದುಲ್ ನಾಸೀರ್ ವಿಡಿಯೋಗಳನ್ನು ಸ್ಕ್ರೀನ್ ರೆಕಾರ್ಡರ್ ಮೂಲಕ ತನಿಶಾ ದಾಖಲಿಸಿಕೊಂಡಿದ್ದು, ಆನಂತರ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾಳೆ. 30 ಲಕ್ಷ ಹಣ ನೀಡಬೇಕು. ಇಲ್ಲದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಳು.
ದಿನ ಕಳೆಯುತ್ತಿದ್ದಂತೆ ಯುವತಿ ಮತ್ತು ಆಕೆಯ ಸಹಚರರು ಸೇರಿ ಬೆದರಿಕೆ ಹಾಕಿದ್ದಾರೆ. ಕೊನೆಗೆ ಯುವಕ ಅಬ್ದುಲ್ ನಾಸೀರ್ ಪುತ್ತೂರು ಗ್ರಾಮಾಂತರ ಠಾಣೆಯ ಮೆಟ್ಟಿಲೇರಿದ್ದಾನೆ. ಪುತ್ತೂರು ಪೊಲೀಸರು ತನಿಶಾಳನ್ನು ಬಂಧಿಸಿದ್ದು, ಆಕೆಯ ಆರು ಮಂದಿ ಸಹಚರರಿಗಾಗಿ ಹುಡುಕಾಟ ನಡೆಸಿದ್ದಾರೆ.
ನೆಟ್ಟಣಿಗೆ ಮುಡ್ನೂರು ಚೀಚಗದ್ದೆಯ ಹನೀಫ್ ಯಾನೆ ಕೆಎಂವೈ ಹನೀಫ್, ಕೊಟ್ಯಾಡಿಯ ಮಹಮ್ಮದ್ ಕುಂಞ, ಕೊಟ್ಯಾಡಿಯ ಶಾಫಿ, ಸವಣೂರಿನ ಅಝರ್, ಸಯಿದ್ ಮೋನು ಮತ್ತು ನಾಸೀರ್ ಎಂಬವರು ಆರೋಪಿಗಳೆಂದು ದೂರಿನಲ್ಲಿ ಹೇಳಿದ್ದು ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಏಪ್ರಿಲ್ 12ರ ಬಳಿಕ ಈ ರೀತಿ ಪೀಡಿಸುವ ಕಾರ್ಯ ನಡೆದಿದ್ದು, ಯುವಕ ನಾಸೀರ್ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾನೆ. ಬಳಿಕ ಅಧಿಕಾರಿಗಳ ಸೂಚನೆಯಂತೆ ನಾಸೀರ್, ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು.
A youth from Nettanige Mudnoor of the taluk here has filed a complaint with the police against seven people accusing them of fleecing lacs of rupees from him through honey-trapping. Police have arrested a woman in this connection. The 25-year-old complainant, a resident Cheechagadde of Nettanige Mudnur village has filed a complaint with police that he lost Rs 30 lac due to honey-trap. The complainant is a salesman by profession.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm