ಬ್ರೇಕಿಂಗ್ ನ್ಯೂಸ್
04-07-21 05:20 pm Mangaluru Correspondent ಕ್ರೈಂ
ಮಂಗಳೂರು, ಜುಲೈ 4: ಯುವಕನೊಬ್ಬ ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿ, ಲಕ್ಷಾಂತರ ರೂಪಾಯಿ ಕಳಕೊಂಡ ಘಟನೆ ನಡೆದಿದ್ದು ಆರೋಪಿ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಚೀಚಗದ್ದೆ ಇಬ್ರಾಹಿಂ ಎಂಬವರ ಪುತ್ರ ಅಬ್ದುಲ್ ನಾಸೀರ್ ಹೈಟೆಕ್ ಹನಿಟ್ರ್ಯಾಪ್ಗೆ ಒಳಗಾದ ಯುವಕ. ಅಬ್ದುಲ್ ನಾಸೀರ್ಗೆ ಸಾಮಾಜಿಕ ಜಾಲತಾಣದಲ್ಲಿ ಕಾರ್ಕಳ ಮೂಲದ ತನಿಶಾ ಎಂಬಾಕೆಯ ಪರಿಚಯವಾಗಿತ್ತು.
ಪರಿಚಯವಾದ ಕೆಲವೇ ದಿನಗಳಲ್ಲಿ ಅಬ್ದುಲ್ ನಾಸೀರ್ ಯುವತಿಯ ಬಲೆಗೆ ಬಿದ್ದಿದ್ದಾನೆ. ಪ್ರೀತಿ, ಪ್ರೇಮದ ನೆಪದಲ್ಲಿ ಅರೆನಗ್ನ ಸ್ಥಿತಿಯ ವಿಡಿಯೋಗಳನ್ನು ಕಳಿಸಲು ಕೋರಿದ್ದಳು. ವಿಡಿಯೋ ಕಾಲ್ ಮೂಲಕ ಅರೆನಗ್ನವಾಗುತ್ತಿದ್ದ ಅಬ್ದುಲ್ ನಾಸೀರ್ ವಿಡಿಯೋಗಳನ್ನು ಸ್ಕ್ರೀನ್ ರೆಕಾರ್ಡರ್ ಮೂಲಕ ತನಿಶಾ ದಾಖಲಿಸಿಕೊಂಡಿದ್ದು, ಆನಂತರ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾಳೆ. 30 ಲಕ್ಷ ಹಣ ನೀಡಬೇಕು. ಇಲ್ಲದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಳು.
ದಿನ ಕಳೆಯುತ್ತಿದ್ದಂತೆ ಯುವತಿ ಮತ್ತು ಆಕೆಯ ಸಹಚರರು ಸೇರಿ ಬೆದರಿಕೆ ಹಾಕಿದ್ದಾರೆ. ಕೊನೆಗೆ ಯುವಕ ಅಬ್ದುಲ್ ನಾಸೀರ್ ಪುತ್ತೂರು ಗ್ರಾಮಾಂತರ ಠಾಣೆಯ ಮೆಟ್ಟಿಲೇರಿದ್ದಾನೆ. ಪುತ್ತೂರು ಪೊಲೀಸರು ತನಿಶಾಳನ್ನು ಬಂಧಿಸಿದ್ದು, ಆಕೆಯ ಆರು ಮಂದಿ ಸಹಚರರಿಗಾಗಿ ಹುಡುಕಾಟ ನಡೆಸಿದ್ದಾರೆ.
ನೆಟ್ಟಣಿಗೆ ಮುಡ್ನೂರು ಚೀಚಗದ್ದೆಯ ಹನೀಫ್ ಯಾನೆ ಕೆಎಂವೈ ಹನೀಫ್, ಕೊಟ್ಯಾಡಿಯ ಮಹಮ್ಮದ್ ಕುಂಞ, ಕೊಟ್ಯಾಡಿಯ ಶಾಫಿ, ಸವಣೂರಿನ ಅಝರ್, ಸಯಿದ್ ಮೋನು ಮತ್ತು ನಾಸೀರ್ ಎಂಬವರು ಆರೋಪಿಗಳೆಂದು ದೂರಿನಲ್ಲಿ ಹೇಳಿದ್ದು ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಏಪ್ರಿಲ್ 12ರ ಬಳಿಕ ಈ ರೀತಿ ಪೀಡಿಸುವ ಕಾರ್ಯ ನಡೆದಿದ್ದು, ಯುವಕ ನಾಸೀರ್ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾನೆ. ಬಳಿಕ ಅಧಿಕಾರಿಗಳ ಸೂಚನೆಯಂತೆ ನಾಸೀರ್, ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು.
A youth from Nettanige Mudnoor of the taluk here has filed a complaint with the police against seven people accusing them of fleecing lacs of rupees from him through honey-trapping. Police have arrested a woman in this connection. The 25-year-old complainant, a resident Cheechagadde of Nettanige Mudnur village has filed a complaint with police that he lost Rs 30 lac due to honey-trap. The complainant is a salesman by profession.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm