ಬ್ರೇಕಿಂಗ್ ನ್ಯೂಸ್
06-07-21 05:13 pm Source: kannada.drivespark ಕ್ರೈಂ
ಸೂರತ್, ಜುಲೈ 06: ದೇಶದಲ್ಲಿ ವಾಹನ ಕಳ್ಳತನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಬಾಡಿಗೆ ನೀಡುವ ನೆಪದಲ್ಲಿ ಕಾರುಗಳನ್ನು ಪಡೆದು 200ಕ್ಕೂ ಹೆಚ್ಚು ಕಾರುಗಳನ್ನು ಕಳುವು ಮಾಡಿದ್ದ ಖದೀಮ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾನೆ.
ಸೂರತ್ ನಗರದ ಆರ್ಥಿಕ ಅಪರಾಧ ಘಟಕದ ಪೊಲೀಸರು ರೂ.4.5 ಕೋಟಿ ಮೌಲ್ಯದ 200 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಈವರೆಗೆ ಈ ಖದೀಮ 264 ಕಾರುಗಳನ್ನು ಕಳುವು ಮಾಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಇದುವರೆಗೂ 200 ಕಾರುಗಳನ್ನು ಮಾತ್ರ ವಶಪಡಿಸಿಕೊಂಡಿದ್ದಾರೆ. ಒಂದು ತಿಂಗಳೊಳಗೆ ಈ ಕಾರುಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಕಳುವಾಗಿರುವ ಇತರ ಕಾರುಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಬಂಧಿತನನ್ನು ಕೇತುಲ್ ಪರ್ಮಾರ್ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಎರಡು ದಿನಗಳಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಕೇತುಲ್ ಪರ್ಮಾರ್ ತಾನು ಕದ್ದ ಕಾರುಗಳನ್ನು ದೇಶದ ಹಲವು ರಾಜ್ಯಗಳಲ್ಲಿ ಮಾರಾಟ ಮಾಡಿದ್ದಾನೆ. ಆತನ ವಿರುದ್ದ ನಂಬಿಕೆ ದ್ರೋಹ, ಮೋಸ, ನಕಲಿ ದಾಖಲೆ ಸೃಷ್ಟಿಸುವಿಕೆ ಸೇರಿದಂತೆ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ತಕ್ಷಣವೇ ಪೊಲೀಸರು ಕ್ರಮ ಕೈಗೊಂಡ ಕಾರಣಕ್ಕೆ ಹಲವು ಕಾರುಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಕೇತುಲ್ ಪರ್ಮಾರ್ ತಾನು ಕದ್ದ ಕಾರುಗಳನ್ನು ಅವುಗಳ ನಿಜವಾದ ಬೆಲೆಗಿಂತ ಅರ್ಧಕ್ಕಿಂತ ಕಡಿಮೆ ಬೆಲೆಗೆ ಮಾರಾಟ ಮಾಡಿದ್ದಾನೆ. ಪೊಲೀಸರು ವಶಕ್ಕೆ ಪಡೆದಿರುವ ಕಾರುಗಳ ಪೈಕಿ 22 ಕಾರುಗಳನ್ನು ಅವುಗಳ ಮಾಲೀಕರಿಗೆ ಹಸ್ತಾಂತರಿಸಲಾಗಿದೆ. ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಿ ಉಳಿದ ಕಾರುಗಳನ್ನು ಅವುಗಳ ಮಾಲೀಕರಿಗೆ ಹಸ್ತಾಂತರಿಸಲು ಪೊಲೀಸರು ನಿರ್ಧರಿಸಿದ್ದಾರೆ. ನ್ಯಾಯಾಲಯವು ಅನುಮತಿ ನೀಡಿದ ನಂತರ ಎಲ್ಲಾ ಕಾರುಗಳನ್ನು ಅವುಗಳ ಮಾಲೀಕರಿಗೆ ಹಿಂದಿರುಗಿಸಲಾಗುವುದು ಎಂದು ಸೂರತ್ ನಗರ ಪೊಲೀಸರು ತಿಳಿಸಿದ್ದಾರೆ.

ಭಥೇನಾ ನಿವಾಸಿಯಾದ ಅಮರ್ ಪಟೇಲ್ ಎಂಬುವವರು ಕಾರುಗಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 5ರಂದು ದೂರು ದಾಖಲಿಸಿದ್ದರು. ಪರ್ಮಾರ್ ಹಾಗೂ ಪಟೇಲ್ ಇಬ್ಬರೂ ಹಲವು ವರ್ಷಗಳಿಂದ ಕ್ಯಾಬ್ ಸೇವೆ ನೀಡುತ್ತಿದ್ದರು. ಕೆಲ ತಿಂಗಳುಗಳ ಹಿಂದೆ ಪಟೇಲ್ ಅವರನ್ನು ಭೇಟಿಯಾಗಿದ್ದ ಪರ್ಮಾರ್ ತನಗೆ ಕ್ಯಾಬ್'ಗಳನ್ನು ಒದಗಿಸಲು ಗುತ್ತಿಗೆ ದೊರೆತಿದೆ. ಈ ಹಿನ್ನೆಲೆಯಲ್ಲಿ ಕೆಲವು ಕಾರುಗಳ ಅಗತ್ಯವಿದೆ ಎಂದು ತಿಳಿಸಿದ್ದ.

ಆತನ ಮಾತನ್ನು ನಂಬಿದ್ದ ಪಟೇಲ್ ತಮ್ಮ ಹಾಗೂ ತಮ್ಮ ಸ್ನೇಹಿತರ ಕಾರುಗಳನ್ನು ಪರ್ಮಾರ್'ಗೆ ನೀಡಿದ್ದರು. ಎಲ್ಲರಿಗೂ ಆರಂಭದಲ್ಲಿ ಕೆಲವು ತಿಂಗಳವರೆಗೆ ಪ್ರತಿ ತಿಂಗಳು ರೂ.20,000 ಬಾಡಿಗೆ ನೀಡಿದ್ದ. ನಂತರ ಬಾಡಿಗೆ ನೀಡುವುದನ್ನು ನಿಲ್ಲಿಸಿದ ಪರ್ಮಾರ್ ಕಾರುಗಳೊಂದಿಗೆ ಪರಾರಿಯಾಗಿದ್ದ. ಈಗ ಕೇತುಲ್ ಪರ್ಮಾರ್ ಮಾತ್ರ ಸಿಕ್ಕಿ ಬಿದ್ದಿದ್ದು ತಲೆ ಮರೆಸಿ ಕೊಂಡಿರುವ ಮತ್ತಷ್ಟು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
(Kannada Copy of Kannada Drivespark)
Surat’s Economic Offenses Cell (EOC) wing of the city police has recovered 200 cars worth Rs 4.5 crore. The vehicles were sold by a person who used to hire these vehicles as taxis. A total of 264 cars were stolen till now.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am