ಬ್ರೇಕಿಂಗ್ ನ್ಯೂಸ್
09-07-21 01:46 pm Mangalore Correspondent ಕ್ರೈಂ
ಮಂಗಳೂರು, ಜುಲೈ 9: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ವಿವಿಧ ಕಾಲೇಜುಗಳ ಪ್ರೊಫೆಸರ್ ಮತ್ತು ಉಪನ್ಯಾಸಕರನ್ನು ಒಳಗೊಂಡ ಟೆಲಿಗ್ರಾಮ್ ಗ್ರೂಪಿನಲ್ಲಿ ಕೊಡಗು ಮೂಲದ ಪ್ರೊಫೆಸರ್ ಒಬ್ಬರು ಅಶ್ಲೀಲ ವಿಡಿಯೋ ಪೋಸ್ಟ್ ಮಾಡಿರುವ ಘಟನೆ ನಡೆದಿದ್ದು, ವಿವಿಯಿಂದ ತನಿಖೆಗೆ ಆದೇಶ ಮಾಡಲಾಗಿದೆ.
ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ವಿಚಾರದಲ್ಲಿ ಮಂಗಳೂರು ವಿವಿಯಿಂದ ಗ್ರೂಪ್ ರಚಿಸಲಾಗಿತ್ತು. ವಾಟ್ಸಪ್ ಮಾದರಿಯದ್ದೇ ಟೆಲಿಗ್ರಾಮ್ ಏಪ್ ನಲ್ಲಿ ಗ್ರೂಪ್ ರಚಿಸಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ವ್ಯಾಪ್ತಿಯ ವಿವಿಧ ಕಾಲೇಜುಗಳ ಸಾವಿರಕ್ಕಿಂತಲೂ ಹೆಚ್ಚು ಸದಸ್ಯರನ್ನು ಸೇರಿಸಲಾಗಿತ್ತು. ಗ್ರೂಪಿನಲ್ಲಿ ಕೊಡಗು ಮೂಲದ ಇಂಗ್ಲಿಷ್ ಪ್ರೊಫೆಸರ್ ಒಬ್ಬರು ಬುಧವಾರ ಸಂಜೆ ಅಶ್ಲೀಲ ವಿಡಿಯೋ ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದ್ದು, ವಿವಾದಕ್ಕೆ ಕಾರಣವಾಗಿದೆ.



ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಂಗಳೂರು ವಿವಿ ರಿಜಿಸ್ಟ್ರಾರ್ ಪ್ರೊ.ಪಿ.ಎಲ್.ಧರ್ಮ, ವಿಡಿಯೋ ಅಪ್ಲೋಡ್ ಮಾಡಿದ್ದು ಕೊಡಗಿನ ಪ್ರೊಫೆಸರ್ ನಂಬರಿನಿಂದ ಆಗಿತ್ತು. ಆದರೆ, ಇದನ್ನು ಉದ್ದೇಶಪೂರ್ವಕ ಹಾಕಲಾಗಿತ್ತೇ ಅಥವಾ ಇನ್ನಿತರ ತಾಂತ್ರಿಕ ಕಾರಣಗಳಿಂದ ಗ್ರೂಪಿಗೆ ಪೋಸ್ಟ್ ಆಗಿತ್ತೇ ಎನ್ನುವುದು ತನಿಖೆಯಲ್ಲಿ ತಿಳಿದುಬರಬೇಕು. ಈ ಬಗ್ಗೆ ಸೈಬರ್ ತಜ್ಞರಿಂದ ತನಿಖೆ ನಡೆಸಲಿದ್ದೇವೆ. ತಜ್ಞರ ವರದಿ ಆಧರಿಸಿ, ಪ್ರೊಫೆಸರ್ ಬಳಿ ವಿವರಣೆ ಕೇಳಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಅಲ್ಲದೆ, ಕಾಲೇಜಿನ ಪಾದ್ರಿಯೊಬ್ಬರ ಹೆಸರು ಈ ವಿಚಾರದಲ್ಲಿ ಉಲ್ಲೇಖ ಆಗಿತ್ತು ಎನ್ನಲಾಗಿದೆ. ಪೋಸ್ಟ್ ಬಗ್ಗೆ ಆಕ್ರೋಶ ಕೇಳಿಬರುತ್ತಿದ್ದಂತೆ ಬಳಿಕ ಡಿಲೀಟ್ ಮಾಡಲಾಗಿತ್ತು. ಆದರೆ, ಅಷ್ಟರಲ್ಲಿ ಅದರ ಸ್ಕ್ರೀನ್ ಶಾಟ್ ಬೇರೆ ಗ್ರೂಪ್ ಗಳಲ್ಲಿ ಹರಿದಾಡಿದೆ. ಶಿಕ್ಷಕನ ಹುದ್ದೆಯಲ್ಲಿರುವ ಮಂದಿಯಿಂದ ಈ ರೀತಿಯ ವರ್ತನೆ ನಿರೀಕ್ಷೆ ಮಾಡುವಂಥದ್ದಲ್ಲ. ತಪ್ಪಿತಸ್ಥರ ವಿರುದ್ಧ ಶಿಕ್ಷೆಯಾಗಬೇಕು ಎಂದು ಗ್ರೂಪ್ ಸದಸ್ಯರೊಬ್ಬರು ಹೇಳಿಕೊಂಡಿದ್ದಾರೆ. ಇತರೇ ಗ್ರೂಪ್ ಸದಸ್ಯರು ಕೂಡ ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.
A Professor from Kodagu has shared obscene videos on the Mangalore University Telegram grouo. A probe has been ordered over the professor over the dirty act.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am