ಬ್ರೇಕಿಂಗ್ ನ್ಯೂಸ್
09-07-21 05:40 pm Mangalore Correspondent ಕ್ರೈಂ
ಮಂಗಳೂರು, ಜುಲೈ 9: ಪಿಎಚ್ ಡಿ ವಿದ್ಯಾರ್ಥಿನಿಯೊಬ್ಬರ ಪ್ರಬಂಧ ಅಂಗೀಕಾರಕ್ಕಾಗಿ ಲಂಚ ಕೇಳಿದ ಆರೋಪದಲ್ಲಿ ಲೋಕಾಯುಕ್ತದಿಂದ ಬಂಧಿಸಲ್ಪಟ್ಟಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಶಾಸ್ತ್ರ ವಿಭಾಗದ ಸಹಾಯಕ ಪ್ರೊಫೆಸರ್ ಡಾ.ಅನಿತಾ ರವಿಶಂಕರ್ ಗೆ ಲೋಕಾಯುಕ್ತ ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿದೆ.
ಪಿಹೆಚ್ಡಿ ವಿದ್ಯಾರ್ಥಿನಿ ಪ್ರೇಮ ಡಿ'ಸೋಜ ಎಂಬವರಿಂದ ಅವರ ಪ್ರಬಂಧ ಅಂಗೀಕಾರ ಆಗಬೇಕಾದರೆ ಮೈಸೂರಿನಿಂದ ಆಗಮಿಸುವ ಮೌಲ್ಯ ಮಾಪಕರ ಖರ್ಚು ಸೇರಿ ರೂ. 16,800 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. 2012ರ ಡಿಸೆಂಬರ್ 4 ರಂದು ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ರೂ. 5,000 ಮುಂಗಡ ಹಣ ಸ್ವೀಕರಿಸುತ್ತಿದ್ದಾಗಲೇ ಪ್ರೊಫೆಸರ್ ಅನಿತಾ ರವಿಶಂಕರ್ ಅವರನ್ನು ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ಉಮೇಶ್ ಜಿ. ಶೇಟ್ ಮತ್ತು ಸಿಬ್ಬಂದಿ ಬಂಧಿಸಿದ್ದರು.

ಸದ್ರಿ ಆರೋಪಿ ಮೊದಲು ರೂ. 10,000, ನಂತರ ರೂ.4,000, ಮತ್ತು ಬಳಿಕ ರೂ. 16,800 ನೀಡುವಂತೆ ವಿದ್ಯಾರ್ಥಿನಿ ಬಳಿ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು. ಲೋಕಾಯುಕ್ತ ಸಂಸ್ಥೆಯ ಪರವಾಗಿ ಒಟ್ಟು 9 ಸಾಕ್ಷಿದಾರರನ್ನು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳ ಪಡಿಸಲಾಗಿತ್ತು.
ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ಅವರ ವಾದವನ್ನು ಪುರಸ್ಕರಿಸಿ, ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದಿದ್ದು ಆರೋಪಿಗೆ ಶಿಕ್ಷೆ ವಿಧಿಸಿದೆ. ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ಶಿಕ್ಷೆ ಪ್ರಕಟಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹ ಕಾಯಿದೆಯ ಕಲಂ 7ರ ಅಡಿ ಯಲ್ಲಿ ಎಸಗಿದ ಅಪರಾಧಕ್ಕೆ ಆರೋಪಿಗೆ 2 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ, ಕಲಂ 13 (1) (ಡಿ) ಯಲ್ಲಿ ಎಸಗಿದ ಅಪರಾಧಕ್ಕೆ 3 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ, ಆರೋಪಿ ದಂಡ ತೆರಲು ತಪ್ಪಿದಲ್ಲಿ ತಲಾ ಒಂದು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.
Mangalore university Professor takes Bribes to earn students pass PhD court sentences, Anitha Ravishankar, to a five-year jail term.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm