ಬ್ರೇಕಿಂಗ್ ನ್ಯೂಸ್
09-07-21 11:19 pm Headline Karnataka News Network ಕ್ರೈಂ
ಚಿತ್ರದುರ್ಗ, ಜುಲೈ 09; ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಎಂದು ಆಕ್ರೋಶಗೊಂಡ ಮಗನೊಬ್ಬ ಕುಡಿದ ಅಮಲಿನಲ್ಲಿ ತಾಯಿಯನ್ನು ಕೊಲೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೊಳಕಾಲ್ಮೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು ಕೊಲೆಯಾದ ಮಹಿಳೆಯನ್ನು ರತ್ನಮ್ಮ(45) ಎಂದು ಗುರುತಿಸಲಾಗಿದೆ. 22 ವರ್ಷದ ಲೋಕೇಶ ತಾಯಿಯನ್ನು ಕೊಂದ ಆರೋಪಿ.
ಪ್ರತಿದಿನ ಕುಡಿದು ಮನೆಯಲ್ಲಿ ಜಗಳ ಮಾಡುತ್ತಿದ್ದ ಲೋಕೇಶ ಗುರುವಾರ ರಾತ್ರಿ ಕುಡಿದು ಮನೆಗೆ ಬಂದಿದ್ದಾನೆ. ರಾತ್ರಿ ಕೂಲಿ ಕೆಲಸ ಮುಗಿಸಿಕೊಂಡು ಸುಸ್ತಾಗಿದ್ದ ತಾಯಿ ರತ್ನಮ್ಮ ಊಟಕ್ಕೆ ಅನ್ನ ಮಾಡಿಟ್ಟು ವಿಶ್ರಾಂತಿ ಪಡೆಯುತ್ತಿದ್ದಳು.
ಕುಡಿದ ಅಮಲಿನಲ್ಲಿ ಮನೆಗೆ ಬಂದ ಲೋಕೇಶ ಊಟಕ್ಕೆ ಸಾಂಬರ್ ಮಾಡಿಲ್ಲ ಎಂದು ಆಕ್ರೋಶಗೊಂಡು ಮತ್ತಷ್ಟು ಮದ್ಯಪಾನ ಮಾಡಬೇಕು ಹಣ ಕೊಡು ಎಂದು ಪೀಡಿಸಿ, ತಾಯಿಯ ಜೊತೆ ಜಗಳವಾಡಿದ್ದಾನೆ. ಈ ವೇಳೆ ತಾಯಿಯ ಕೆನ್ನೆಗೆ ಹೊಡೆದಿದ್ದು, ಹೊಡೆತದ ರಭಸಕ್ಕೆ ರತ್ನಮ್ಮ ಮನೆಯ ಕಬ್ಬಿಣದ ಬಾಗಿಲಿಗೆ ಡಿಕ್ಕಿ ಹೊಡೆದು ಬಿದ್ದಿದ್ದಾಳೆ. ಬಿದ್ದ ಹೊಡೆತಕ್ಕೆ ತಲೆಯಿಂದ ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ವಿಷಯ ತಿಳಿದು ಅಕ್ಕ ಪಕ್ಕದ ಮೆನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮೊಳಕಾಲ್ಮೂರು ಪೊಲೀಸರು ಲೋಕೇಶನನ್ನು ಬಂಧಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Chitradurga 22 Year old son kills Mother for not lending money to Drink. The arrested has been identified as Lokesh.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am