ಬ್ರೇಕಿಂಗ್ ನ್ಯೂಸ್
09-07-21 11:19 pm Headline Karnataka News Network ಕ್ರೈಂ
ಚಿತ್ರದುರ್ಗ, ಜುಲೈ 09; ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಎಂದು ಆಕ್ರೋಶಗೊಂಡ ಮಗನೊಬ್ಬ ಕುಡಿದ ಅಮಲಿನಲ್ಲಿ ತಾಯಿಯನ್ನು ಕೊಲೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೊಳಕಾಲ್ಮೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು ಕೊಲೆಯಾದ ಮಹಿಳೆಯನ್ನು ರತ್ನಮ್ಮ(45) ಎಂದು ಗುರುತಿಸಲಾಗಿದೆ. 22 ವರ್ಷದ ಲೋಕೇಶ ತಾಯಿಯನ್ನು ಕೊಂದ ಆರೋಪಿ.
ಪ್ರತಿದಿನ ಕುಡಿದು ಮನೆಯಲ್ಲಿ ಜಗಳ ಮಾಡುತ್ತಿದ್ದ ಲೋಕೇಶ ಗುರುವಾರ ರಾತ್ರಿ ಕುಡಿದು ಮನೆಗೆ ಬಂದಿದ್ದಾನೆ. ರಾತ್ರಿ ಕೂಲಿ ಕೆಲಸ ಮುಗಿಸಿಕೊಂಡು ಸುಸ್ತಾಗಿದ್ದ ತಾಯಿ ರತ್ನಮ್ಮ ಊಟಕ್ಕೆ ಅನ್ನ ಮಾಡಿಟ್ಟು ವಿಶ್ರಾಂತಿ ಪಡೆಯುತ್ತಿದ್ದಳು.
ಕುಡಿದ ಅಮಲಿನಲ್ಲಿ ಮನೆಗೆ ಬಂದ ಲೋಕೇಶ ಊಟಕ್ಕೆ ಸಾಂಬರ್ ಮಾಡಿಲ್ಲ ಎಂದು ಆಕ್ರೋಶಗೊಂಡು ಮತ್ತಷ್ಟು ಮದ್ಯಪಾನ ಮಾಡಬೇಕು ಹಣ ಕೊಡು ಎಂದು ಪೀಡಿಸಿ, ತಾಯಿಯ ಜೊತೆ ಜಗಳವಾಡಿದ್ದಾನೆ. ಈ ವೇಳೆ ತಾಯಿಯ ಕೆನ್ನೆಗೆ ಹೊಡೆದಿದ್ದು, ಹೊಡೆತದ ರಭಸಕ್ಕೆ ರತ್ನಮ್ಮ ಮನೆಯ ಕಬ್ಬಿಣದ ಬಾಗಿಲಿಗೆ ಡಿಕ್ಕಿ ಹೊಡೆದು ಬಿದ್ದಿದ್ದಾಳೆ. ಬಿದ್ದ ಹೊಡೆತಕ್ಕೆ ತಲೆಯಿಂದ ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ವಿಷಯ ತಿಳಿದು ಅಕ್ಕ ಪಕ್ಕದ ಮೆನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮೊಳಕಾಲ್ಮೂರು ಪೊಲೀಸರು ಲೋಕೇಶನನ್ನು ಬಂಧಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Chitradurga 22 Year old son kills Mother for not lending money to Drink. The arrested has been identified as Lokesh.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm