ಬ್ರೇಕಿಂಗ್ ನ್ಯೂಸ್
10-07-21 05:43 pm Headline Karnataka News Network ಕ್ರೈಂ
ಮೈಸೂರು, ಜುಲೈ 10: ಮಿಸ್ಡ್ ಕಾಲ್ ಮೂಲಕ ಪರಿಚಯವಾಗಿದ್ದ ಯುವತಿಯನ್ನು ಪ್ರೀತಿಯ ನಾಟಕವಾಡಿ, ಮದುವೆಯಾಗುವ ನೆಪದಲ್ಲಿ ಆಸೆ ತೀರಿಸಿಕೊಂಡ ಬಳಿಕ ಬೀದಿಗೆ ದೂಡಿದ ಪ್ರಕರಣ ನಂಜನಗೂಡು ತಾಲೂಕಿನಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಲಾವುದ್ದೀನ್ (26) ಎಂಬಾತ ಅತ್ಯಾಚಾರ ಆರೋಪಿಯಾಗಿದ್ದಾನೆ. ನಂಜನಗೂಡು ಪಟ್ಟಣದಲ್ಲಿ ಹೋಲ್ ಸೇಲ್ ಹಣ್ಣಿನ ವ್ಯಾಪಾರಿಯಾಗಿರುವ ಈತನಿಗೆ ಮಿಸ್ಡ್ ಕಾಲ್ ಮೂಲಕ ಯುವತಿಯೊಬ್ಬಳು ಪರಿಚಯವಾಗಿದ್ದಳು. ಇಬ್ಬರ ಮಿಸ್ಡ್ ಕಾಲ್ ಪರಿಚಯ ಬಳಿಕ ಪ್ರೀತಿಗೆ ತಿರುಗಿತ್ತು. ಕಳೆದ 5 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ವಿವಾಹವಾಗುವ ನಿರ್ಧಾರ ಮಾಡಿದ್ದರು.
ಈ ನಡುವೆ ಮದುವೆಯಾಗುವುದಾಗಿ ನಂಬಿಸಿದ್ದ ಸಲಾವುದ್ದೀನ್ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಪ್ರಿಯತಮನ ಮಾತನ್ನು ನಂಬಿದ ಯುವತಿ ಆತನಿಗೆ ಸಾಕಷ್ಟು ಹಣವನ್ನೂ ಕೊಟ್ಟಿದ್ದಳು ಎನ್ನಲಾಗ್ತಿದೆ.
ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಆಕೆಯಿಂದ ಹಣ ಪಡೆದ ಸಲಾವುದ್ದೀನ್, ಇದೀಗ ಮತ್ತೊಂದು ಯುವತಿಯೊಂದಿಗೆ ಮದುವೆಯಾಗಿ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
15 ದಿನಗಳ ಹಿಂದೆ ಸಲಾವುದ್ದೀನ್ ಮತ್ತೊಂದು ಹುಡುಗಿಯ ಜೊತೆ ಮದುವೆ ಮಾಡಿಕೊಂಡಿದ್ದಾನೆ. ದೈಹಿಕ ಸಂಪರ್ಕ ಬೆಳೆಸಿದ ಬಗ್ಗೆ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ಸಲಾವುದ್ದೀನ್ ಯುವತಿಗೆ ಬೆದರಿಕೆ ಹಾಕಿದ್ದನಂತೆ. ಈತನ ವಂಚನೆಯಿಂದ ನೊಂದ ಯುವತಿ ನಂಜನಗೂಡು ಪಟ್ಟಣ ಠಾಣೆ ಪೊಲೀಸರ ಮೊರೆ ಹೋಗಿದ್ದಾಳೆ.
ಯುವತಿ ಕೊಟ್ಟ ದೂರಿನ ಅನ್ವಯ ಪೊಲೀಸರು ಆರೋಪಿ ಸಲಾವುದ್ದೀನ್ನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿರುದ್ಧ ಅತ್ಯಾಚಾರ, ವಂಚನೆ, ಬೆದರಿಕೆ ಪ್ರಕರಣ ದಾಖಲಾಗಿದೆ.
Mysore girl cheated raped in the promise of Marriage accused arrested. The accused promised her of marriage and got married with another girl after having physical contact.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm