ಬ್ರೇಕಿಂಗ್ ನ್ಯೂಸ್
10-07-21 05:43 pm Headline Karnataka News Network ಕ್ರೈಂ
ಮೈಸೂರು, ಜುಲೈ 10: ಮಿಸ್ಡ್ ಕಾಲ್ ಮೂಲಕ ಪರಿಚಯವಾಗಿದ್ದ ಯುವತಿಯನ್ನು ಪ್ರೀತಿಯ ನಾಟಕವಾಡಿ, ಮದುವೆಯಾಗುವ ನೆಪದಲ್ಲಿ ಆಸೆ ತೀರಿಸಿಕೊಂಡ ಬಳಿಕ ಬೀದಿಗೆ ದೂಡಿದ ಪ್ರಕರಣ ನಂಜನಗೂಡು ತಾಲೂಕಿನಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಲಾವುದ್ದೀನ್ (26) ಎಂಬಾತ ಅತ್ಯಾಚಾರ ಆರೋಪಿಯಾಗಿದ್ದಾನೆ. ನಂಜನಗೂಡು ಪಟ್ಟಣದಲ್ಲಿ ಹೋಲ್ ಸೇಲ್ ಹಣ್ಣಿನ ವ್ಯಾಪಾರಿಯಾಗಿರುವ ಈತನಿಗೆ ಮಿಸ್ಡ್ ಕಾಲ್ ಮೂಲಕ ಯುವತಿಯೊಬ್ಬಳು ಪರಿಚಯವಾಗಿದ್ದಳು. ಇಬ್ಬರ ಮಿಸ್ಡ್ ಕಾಲ್ ಪರಿಚಯ ಬಳಿಕ ಪ್ರೀತಿಗೆ ತಿರುಗಿತ್ತು. ಕಳೆದ 5 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ವಿವಾಹವಾಗುವ ನಿರ್ಧಾರ ಮಾಡಿದ್ದರು.
ಈ ನಡುವೆ ಮದುವೆಯಾಗುವುದಾಗಿ ನಂಬಿಸಿದ್ದ ಸಲಾವುದ್ದೀನ್ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಪ್ರಿಯತಮನ ಮಾತನ್ನು ನಂಬಿದ ಯುವತಿ ಆತನಿಗೆ ಸಾಕಷ್ಟು ಹಣವನ್ನೂ ಕೊಟ್ಟಿದ್ದಳು ಎನ್ನಲಾಗ್ತಿದೆ.

ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಆಕೆಯಿಂದ ಹಣ ಪಡೆದ ಸಲಾವುದ್ದೀನ್, ಇದೀಗ ಮತ್ತೊಂದು ಯುವತಿಯೊಂದಿಗೆ ಮದುವೆಯಾಗಿ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
15 ದಿನಗಳ ಹಿಂದೆ ಸಲಾವುದ್ದೀನ್ ಮತ್ತೊಂದು ಹುಡುಗಿಯ ಜೊತೆ ಮದುವೆ ಮಾಡಿಕೊಂಡಿದ್ದಾನೆ. ದೈಹಿಕ ಸಂಪರ್ಕ ಬೆಳೆಸಿದ ಬಗ್ಗೆ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ಸಲಾವುದ್ದೀನ್ ಯುವತಿಗೆ ಬೆದರಿಕೆ ಹಾಕಿದ್ದನಂತೆ. ಈತನ ವಂಚನೆಯಿಂದ ನೊಂದ ಯುವತಿ ನಂಜನಗೂಡು ಪಟ್ಟಣ ಠಾಣೆ ಪೊಲೀಸರ ಮೊರೆ ಹೋಗಿದ್ದಾಳೆ.
ಯುವತಿ ಕೊಟ್ಟ ದೂರಿನ ಅನ್ವಯ ಪೊಲೀಸರು ಆರೋಪಿ ಸಲಾವುದ್ದೀನ್ನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿರುದ್ಧ ಅತ್ಯಾಚಾರ, ವಂಚನೆ, ಬೆದರಿಕೆ ಪ್ರಕರಣ ದಾಖಲಾಗಿದೆ.
Mysore girl cheated raped in the promise of Marriage accused arrested. The accused promised her of marriage and got married with another girl after having physical contact.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am