ಬ್ರೇಕಿಂಗ್ ನ್ಯೂಸ್
10-07-21 05:43 pm Headline Karnataka News Network ಕ್ರೈಂ
ಮೈಸೂರು, ಜುಲೈ 10: ಮಿಸ್ಡ್ ಕಾಲ್ ಮೂಲಕ ಪರಿಚಯವಾಗಿದ್ದ ಯುವತಿಯನ್ನು ಪ್ರೀತಿಯ ನಾಟಕವಾಡಿ, ಮದುವೆಯಾಗುವ ನೆಪದಲ್ಲಿ ಆಸೆ ತೀರಿಸಿಕೊಂಡ ಬಳಿಕ ಬೀದಿಗೆ ದೂಡಿದ ಪ್ರಕರಣ ನಂಜನಗೂಡು ತಾಲೂಕಿನಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಲಾವುದ್ದೀನ್ (26) ಎಂಬಾತ ಅತ್ಯಾಚಾರ ಆರೋಪಿಯಾಗಿದ್ದಾನೆ. ನಂಜನಗೂಡು ಪಟ್ಟಣದಲ್ಲಿ ಹೋಲ್ ಸೇಲ್ ಹಣ್ಣಿನ ವ್ಯಾಪಾರಿಯಾಗಿರುವ ಈತನಿಗೆ ಮಿಸ್ಡ್ ಕಾಲ್ ಮೂಲಕ ಯುವತಿಯೊಬ್ಬಳು ಪರಿಚಯವಾಗಿದ್ದಳು. ಇಬ್ಬರ ಮಿಸ್ಡ್ ಕಾಲ್ ಪರಿಚಯ ಬಳಿಕ ಪ್ರೀತಿಗೆ ತಿರುಗಿತ್ತು. ಕಳೆದ 5 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ವಿವಾಹವಾಗುವ ನಿರ್ಧಾರ ಮಾಡಿದ್ದರು.
ಈ ನಡುವೆ ಮದುವೆಯಾಗುವುದಾಗಿ ನಂಬಿಸಿದ್ದ ಸಲಾವುದ್ದೀನ್ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಪ್ರಿಯತಮನ ಮಾತನ್ನು ನಂಬಿದ ಯುವತಿ ಆತನಿಗೆ ಸಾಕಷ್ಟು ಹಣವನ್ನೂ ಕೊಟ್ಟಿದ್ದಳು ಎನ್ನಲಾಗ್ತಿದೆ.

ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಆಕೆಯಿಂದ ಹಣ ಪಡೆದ ಸಲಾವುದ್ದೀನ್, ಇದೀಗ ಮತ್ತೊಂದು ಯುವತಿಯೊಂದಿಗೆ ಮದುವೆಯಾಗಿ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
15 ದಿನಗಳ ಹಿಂದೆ ಸಲಾವುದ್ದೀನ್ ಮತ್ತೊಂದು ಹುಡುಗಿಯ ಜೊತೆ ಮದುವೆ ಮಾಡಿಕೊಂಡಿದ್ದಾನೆ. ದೈಹಿಕ ಸಂಪರ್ಕ ಬೆಳೆಸಿದ ಬಗ್ಗೆ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ಸಲಾವುದ್ದೀನ್ ಯುವತಿಗೆ ಬೆದರಿಕೆ ಹಾಕಿದ್ದನಂತೆ. ಈತನ ವಂಚನೆಯಿಂದ ನೊಂದ ಯುವತಿ ನಂಜನಗೂಡು ಪಟ್ಟಣ ಠಾಣೆ ಪೊಲೀಸರ ಮೊರೆ ಹೋಗಿದ್ದಾಳೆ.
ಯುವತಿ ಕೊಟ್ಟ ದೂರಿನ ಅನ್ವಯ ಪೊಲೀಸರು ಆರೋಪಿ ಸಲಾವುದ್ದೀನ್ನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿರುದ್ಧ ಅತ್ಯಾಚಾರ, ವಂಚನೆ, ಬೆದರಿಕೆ ಪ್ರಕರಣ ದಾಖಲಾಗಿದೆ.
Mysore girl cheated raped in the promise of Marriage accused arrested. The accused promised her of marriage and got married with another girl after having physical contact.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am