ಬ್ರೇಕಿಂಗ್ ನ್ಯೂಸ್
10-07-21 05:43 pm Headline Karnataka News Network ಕ್ರೈಂ
ಮೈಸೂರು, ಜುಲೈ 10: ಮಿಸ್ಡ್ ಕಾಲ್ ಮೂಲಕ ಪರಿಚಯವಾಗಿದ್ದ ಯುವತಿಯನ್ನು ಪ್ರೀತಿಯ ನಾಟಕವಾಡಿ, ಮದುವೆಯಾಗುವ ನೆಪದಲ್ಲಿ ಆಸೆ ತೀರಿಸಿಕೊಂಡ ಬಳಿಕ ಬೀದಿಗೆ ದೂಡಿದ ಪ್ರಕರಣ ನಂಜನಗೂಡು ತಾಲೂಕಿನಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಲಾವುದ್ದೀನ್ (26) ಎಂಬಾತ ಅತ್ಯಾಚಾರ ಆರೋಪಿಯಾಗಿದ್ದಾನೆ. ನಂಜನಗೂಡು ಪಟ್ಟಣದಲ್ಲಿ ಹೋಲ್ ಸೇಲ್ ಹಣ್ಣಿನ ವ್ಯಾಪಾರಿಯಾಗಿರುವ ಈತನಿಗೆ ಮಿಸ್ಡ್ ಕಾಲ್ ಮೂಲಕ ಯುವತಿಯೊಬ್ಬಳು ಪರಿಚಯವಾಗಿದ್ದಳು. ಇಬ್ಬರ ಮಿಸ್ಡ್ ಕಾಲ್ ಪರಿಚಯ ಬಳಿಕ ಪ್ರೀತಿಗೆ ತಿರುಗಿತ್ತು. ಕಳೆದ 5 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ವಿವಾಹವಾಗುವ ನಿರ್ಧಾರ ಮಾಡಿದ್ದರು.
ಈ ನಡುವೆ ಮದುವೆಯಾಗುವುದಾಗಿ ನಂಬಿಸಿದ್ದ ಸಲಾವುದ್ದೀನ್ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಪ್ರಿಯತಮನ ಮಾತನ್ನು ನಂಬಿದ ಯುವತಿ ಆತನಿಗೆ ಸಾಕಷ್ಟು ಹಣವನ್ನೂ ಕೊಟ್ಟಿದ್ದಳು ಎನ್ನಲಾಗ್ತಿದೆ.

ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಆಕೆಯಿಂದ ಹಣ ಪಡೆದ ಸಲಾವುದ್ದೀನ್, ಇದೀಗ ಮತ್ತೊಂದು ಯುವತಿಯೊಂದಿಗೆ ಮದುವೆಯಾಗಿ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
15 ದಿನಗಳ ಹಿಂದೆ ಸಲಾವುದ್ದೀನ್ ಮತ್ತೊಂದು ಹುಡುಗಿಯ ಜೊತೆ ಮದುವೆ ಮಾಡಿಕೊಂಡಿದ್ದಾನೆ. ದೈಹಿಕ ಸಂಪರ್ಕ ಬೆಳೆಸಿದ ಬಗ್ಗೆ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ಸಲಾವುದ್ದೀನ್ ಯುವತಿಗೆ ಬೆದರಿಕೆ ಹಾಕಿದ್ದನಂತೆ. ಈತನ ವಂಚನೆಯಿಂದ ನೊಂದ ಯುವತಿ ನಂಜನಗೂಡು ಪಟ್ಟಣ ಠಾಣೆ ಪೊಲೀಸರ ಮೊರೆ ಹೋಗಿದ್ದಾಳೆ.
ಯುವತಿ ಕೊಟ್ಟ ದೂರಿನ ಅನ್ವಯ ಪೊಲೀಸರು ಆರೋಪಿ ಸಲಾವುದ್ದೀನ್ನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿರುದ್ಧ ಅತ್ಯಾಚಾರ, ವಂಚನೆ, ಬೆದರಿಕೆ ಪ್ರಕರಣ ದಾಖಲಾಗಿದೆ.
Mysore girl cheated raped in the promise of Marriage accused arrested. The accused promised her of marriage and got married with another girl after having physical contact.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm