ಬ್ರೇಕಿಂಗ್ ನ್ಯೂಸ್
11-07-21 02:08 pm Bengaluru Correspondent ಕ್ರೈಂ
ಬೆಂಗಳೂರು, ಜು. 11: ದಾದಾಗಿರಿ ಮಾಡಿಕೊಂಡು ಜನ ಸಾಮಾನ್ಯರ ನೆಮ್ಮದಿಗೆ ಭಂಗ ತರುತ್ತಿದ್ದ ರೌಡಿಗಳಿಗೆ ಬೆಂಗಳೂರು ಪೊಲೀಸರು ಶಾಕ್ ಕೊಟ್ಟಿದ್ದಾರೆ. ಬೆಂಗಳೂರಿನ ಎಲ್ಲಾ ವಿಭಾಗದ ರೌಡಿ ಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ರೌಡಿ ಚಟುವಟಿಕೆಯಲ್ಲಿ ಸಕ್ರಿಯವಾಗಿರುವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲಾಗಿದೆ.
ಬೆಂಳೂರಿನಲ್ಲಿ ಬರೋಬ್ಬರಿ 2144 ರೌಡಿಗಳ ನಿವಾಸಗಳ ಮೇಲೆ ದಾಳಿ ನಡೆದಿದೆ. ಮಾತ್ರವಲ್ಲ ಈ ರೌಡಿ ಚಟುವಟಿಕೆಗೂ ಹಾಗೂ ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೂ ಸಿಸಿಬಿ ಪೊಲೀಸರು ದಾಳಿ ನೆಡಸಿ ಪಾತಕ ಲೋಕದೊಂದಿಗೆ ಬಳೆದಿದ್ದ ಸಂಪರ್ಕ ಕಾಲವನ್ನು ಕಡಿತ ಮಾಡಿದ್ದಾರೆ. ಬಾಲ ಬಿಚ್ಚಿದರೆ ಪರಿಣಾಮ ನೆಟ್ಟಗಿರಲ್ಲ ಎಂಬ ಸಂದೇಶವನ್ನು ಬೆಂಗಳೂರು ಪೊಲೀಸರು ರವಾನಿಸಿದ್ದಾರೆ.





ರೌಡಿ ಸಾಮ್ರಾಜ್ಯಕ್ಕೆ ಎಚ್ಚರಿಕೆ :
ನಗರದಲ್ಲಿ ಅಪರಾಧ ಚಟುವಟಿಕೆ ನಿಗ್ರಹ ಮಾಡುವ ನಿಟ್ಟಿನಲ್ಲಿ ಎಲ್ಲಾ ವಿಭಾಗದಲ್ಲೂ ರೌಡಿ ಹಾಗೂ ಕ್ರಿಮಿನಲ್ ಹಿನ್ನೆಲೆಯುಳ್ಳವರ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. 2144 ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ಮಾಡಿ ಕೆಲವರಿಂದ ಮಹತ್ವದ ದಾಖಲೆ, ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವತ್ತೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೂ ದಾಳಿ ನಡೆದಿದೆ. ಜೈಲಿನಲ್ಲಿರುವ ಹಾಗೂ ಬೆಂಗಳೂರಿನಲ್ಲಿ ದಾಳಿಗೆ ಒಳಗಾದ ರೌಡಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ದಾಳಿಗೆ ಸಂಬಂಧಿಸಿದಂತೆ 31 ಮಂದಿಯ ಮೇಲೆ ಗೂಂಡಾ ಕಾಯ್ದೆ ಅಡಿ ಕೇಸು ದಾಖಲಿಸಲಾಗಿದೆ. ಮುಚ್ಚಳಿಕೆ ಉಲ್ಲಂಘನೆ ಮಾಡಿದ ರೌಡಿಗಳಿಂದ ದಂಡ ಕಟ್ಟಿಸಿಕೊಳ್ಳಲಾಗುತ್ತಿದೆ. ಒಟ್ಟಾರೆ 490 ರೌಡಿ ಶೀಟರ್ ಗಳ ಮೇಲೆ ಕೇಸು ದಾಖಲಿಸಿದ್ದು, ಒಟ್ಟು 561 ಪ್ರಕರಣ ದಾಖಲಿಸಲಾಗಿದೆ. ಕೆಲವು ರೌಡಿ ಶೀಟರ್ ಗಳನ್ನು ಗಡಿಪಾರು ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ರಾಜಧಾನಿಯ ಎಲ್ಲಾ ವಿಭಾಗದಲ್ಲೂ ರೌಡಿಗಳಿಗೆ ನಡುಕ
ಬೆಂಗಳೂರಿನ ಅತಿದೊಡ್ಡ ರೌಡಿ ಸಾಮ್ರಾಜ್ಯ ಹೊಂದಿರುವ ಉತ್ತರ ವಿಭಾಗದ 292 ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ಮಾಡಿ 230 ರೌಡಿ ಶೀಟರ್ ಗಳನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಲಾಗಿದೆ. ಅದರಲ್ಲೂ ಕ್ರಿಮಿನಲ್ ಹಿನ್ನೆಲೆಯುಳ್ಳವರ ವಿರುದ್ಧ ಕೇಸು ದಾಖಲಿಸಿ ಜೈಲಿಗೆ ರವಾನಿಸಲಾಗಿದೆ. ಅದೇ ರೀತಿ ದಕ್ಷಿಣ ವಿಭಾಗ ಸೇರಿದಂತೆ ಬೆಂಗಳೂರಿನ ಏಳು ಉಪ ವಿಭಾಗದಲ್ಲೂ ದಾಳಿ ನಡೆಸಲಾಗಿದೆ. ರೌಡಿ ಹಿನ್ನೆಲೆಯುಳ್ಳವರ ಅಪರಾಧ ಚಟುವಟಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರು ರೌಡಿಗಳ ಎಡೆ ಮುರಿಕಟ್ಟಲು ಸೂಚಿಸಿದ್ದರು.
Bengaluru cops raid over 2000 houses of Criminals 561 rowdy sheeters booked.At the same time, the city police also carried out massive search operations and raided residences of rowdies and habitual offenders. “We have recovered a huge number of lethal weapons and rounded up several habitual offenders. Enquiries are being conducted,” said a senior police officer.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am