ಬ್ರೇಕಿಂಗ್ ನ್ಯೂಸ್
11-07-21 10:40 pm Headline Karnataka News Network ಕ್ರೈಂ
ನವದೆಹಲಿ, ಜುಲೈ 11: ದಂಪತಿಯ ಜಗಳದಿಂದ 11 ತಿಂಗಳ ಹಸುಗೂಸೊಂದು ಪ್ರಾಣ ಕಳೆದುಕೊಂಡಿದೆ. ದಕ್ಷಿಣ ದೆಹಲಿಯಲ್ಲಿ ತನ್ನ ಗಂಡನ ಜೊತೆ ಜಗಳವಾಡಿಕೊಂಡ ಮಹಿಳೆಯೊಬ್ಬಳು ಕೋಪದಿಂದ ತನ್ನ ಮಗುವಿನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾಳೆ.
ದೆಹಲಿಯ ಬಳಿ ಇರುವ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಮಗುವನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮಗು ಸಾವನ್ನಪ್ಪಿತ್ತು. ಮಗುವಿನ ಸಾವಿಗೆ ನೀನೇ ಕಾರಣ ಎಂದು ಆಸ್ಪತ್ರೆಯ ಎದುರಲ್ಲೇ ತಂದೆ-ತಾಯಿಯಿಬ್ಬರೂ ಜಗಳವಾಡಿ, ಹೊಡೆದಾಡಿಕೊಂಡ ಘಟನೆಯೂ ನಡೆದಿದೆ.
ಏನಿದು ಘಟನೆ? ;
ಈ ದಂಪತಿಯ 11 ತಿಂಗಳ ಗಂಡು ಮಗುವಿಗೆ ಬಹಳ ಜ್ವರವಿತ್ತು. ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗು ಎಂದು ಮಗುವಿನ ತಾಯಿ ತನ್ನ ಗಂಡನಿಗೆ ಹೇಳಿದ್ದಳು. ಆದರೆ, ಆತ ತನ್ನ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಾಧ್ಯವಿಲ್ಲ ಎಂದು ಹೆಂಡತಿಯೊಂದಿಗೆ ಜಗಳವಾಡಿದ್ದ. ಅವರಿಬ್ಬರ ಜಗಳದ ನಡುವೆ ಮಗುವಿನ ಅನಾರೋಗ್ಯದ ವಿಚಾರವನ್ನೇ ಮರೆತು ಇಬ್ಬರೂ ಕಿತ್ತಾಡಿದ್ದಾರೆ. ಗಂಡನ ಮೇಲಿನ ಕೋಪವನ್ನು ಮಗುವಿನ ಮೇಲೆ ತೋರಿಸಿದ ಆಕೆ ನೀನು ನನ್ನ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗದಿದ್ದರೆ ನಾನೇ ಕೊಂದು ಹಾಕುತ್ತೇನೆ ಎಂದು ಮಗುವಿನ ಕುತ್ತಿಗೆಯನ್ನು ತನ್ನ ದುಪ್ಪಟ್ಟಾದಿಂದ ಸುತ್ತಿದ್ದಾಳೆ. ಹೀಗಾಗಿ, ಉಸಿರಾಟದ ತೊಂದರೆಯಿಂದ ಮಗು ಪ್ರಾಣ ಬಿಟ್ಟಿದೆ.
ಮಗುವಿನ ತಾಯಿ 26 ವರ್ಷದ ಜ್ಯೋತಿ ಹಾಗೂ ಆಕೆಯ ಗಂಡನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರೆದುರು ತಪ್ಪೊಪ್ಪಿಕೊಂಡಿರುವ ಜ್ಯೋತಿ, ನನ್ನ ಗಂಡನಿಗೆ ನನ್ನ ಮೇಲೆ ಪ್ರೀತಿ ಇರಲಿಲ್ಲ. ದಿನವೂ ಮನೆಗೆ ಬಂದು ಜಗಳವಾಡುತ್ತಿದ್ದ. ನನ್ನ ಮಗುವನ್ನೂ ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ ಎಂದು ಜ್ಯೋತಿ ಆರೋಪಿಸಿದ್ದಾಳೆ.
ಇನ್ನು, ಜ್ಯೋತಿಯ ತಂದೆ-ತಾಯಿ ಆ ಮಗುವನ್ನು ಜ್ಯೋತಿಯ ಗಂಡನೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ಮೃತ ಮಗುವಿನ ತಂದೆ ಅಲ್ಲಗಳೆದಿದ್ದಾನೆ. ಆ ಗ್ರಾಮದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A woman in Delhi allegedly strangled her 11-month-old infant after a fight with her husband, the police said. According to South Delhi Deputy Commissioner Atul Thakur, when police reached the crime scene at Fatehpur Beri area, the infant had already died at a hospital. When questioned, the child's parent accused each other of the murder. However, investigation revealed the boy's mother had strangled him with her stole.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm