ಬ್ರೇಕಿಂಗ್ ನ್ಯೂಸ್
11-07-21 10:40 pm Headline Karnataka News Network ಕ್ರೈಂ
ನವದೆಹಲಿ, ಜುಲೈ 11: ದಂಪತಿಯ ಜಗಳದಿಂದ 11 ತಿಂಗಳ ಹಸುಗೂಸೊಂದು ಪ್ರಾಣ ಕಳೆದುಕೊಂಡಿದೆ. ದಕ್ಷಿಣ ದೆಹಲಿಯಲ್ಲಿ ತನ್ನ ಗಂಡನ ಜೊತೆ ಜಗಳವಾಡಿಕೊಂಡ ಮಹಿಳೆಯೊಬ್ಬಳು ಕೋಪದಿಂದ ತನ್ನ ಮಗುವಿನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾಳೆ.
ದೆಹಲಿಯ ಬಳಿ ಇರುವ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಮಗುವನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮಗು ಸಾವನ್ನಪ್ಪಿತ್ತು. ಮಗುವಿನ ಸಾವಿಗೆ ನೀನೇ ಕಾರಣ ಎಂದು ಆಸ್ಪತ್ರೆಯ ಎದುರಲ್ಲೇ ತಂದೆ-ತಾಯಿಯಿಬ್ಬರೂ ಜಗಳವಾಡಿ, ಹೊಡೆದಾಡಿಕೊಂಡ ಘಟನೆಯೂ ನಡೆದಿದೆ.
ಏನಿದು ಘಟನೆ? ;
ಈ ದಂಪತಿಯ 11 ತಿಂಗಳ ಗಂಡು ಮಗುವಿಗೆ ಬಹಳ ಜ್ವರವಿತ್ತು. ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗು ಎಂದು ಮಗುವಿನ ತಾಯಿ ತನ್ನ ಗಂಡನಿಗೆ ಹೇಳಿದ್ದಳು. ಆದರೆ, ಆತ ತನ್ನ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಾಧ್ಯವಿಲ್ಲ ಎಂದು ಹೆಂಡತಿಯೊಂದಿಗೆ ಜಗಳವಾಡಿದ್ದ. ಅವರಿಬ್ಬರ ಜಗಳದ ನಡುವೆ ಮಗುವಿನ ಅನಾರೋಗ್ಯದ ವಿಚಾರವನ್ನೇ ಮರೆತು ಇಬ್ಬರೂ ಕಿತ್ತಾಡಿದ್ದಾರೆ. ಗಂಡನ ಮೇಲಿನ ಕೋಪವನ್ನು ಮಗುವಿನ ಮೇಲೆ ತೋರಿಸಿದ ಆಕೆ ನೀನು ನನ್ನ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗದಿದ್ದರೆ ನಾನೇ ಕೊಂದು ಹಾಕುತ್ತೇನೆ ಎಂದು ಮಗುವಿನ ಕುತ್ತಿಗೆಯನ್ನು ತನ್ನ ದುಪ್ಪಟ್ಟಾದಿಂದ ಸುತ್ತಿದ್ದಾಳೆ. ಹೀಗಾಗಿ, ಉಸಿರಾಟದ ತೊಂದರೆಯಿಂದ ಮಗು ಪ್ರಾಣ ಬಿಟ್ಟಿದೆ.
ಮಗುವಿನ ತಾಯಿ 26 ವರ್ಷದ ಜ್ಯೋತಿ ಹಾಗೂ ಆಕೆಯ ಗಂಡನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರೆದುರು ತಪ್ಪೊಪ್ಪಿಕೊಂಡಿರುವ ಜ್ಯೋತಿ, ನನ್ನ ಗಂಡನಿಗೆ ನನ್ನ ಮೇಲೆ ಪ್ರೀತಿ ಇರಲಿಲ್ಲ. ದಿನವೂ ಮನೆಗೆ ಬಂದು ಜಗಳವಾಡುತ್ತಿದ್ದ. ನನ್ನ ಮಗುವನ್ನೂ ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ ಎಂದು ಜ್ಯೋತಿ ಆರೋಪಿಸಿದ್ದಾಳೆ.
ಇನ್ನು, ಜ್ಯೋತಿಯ ತಂದೆ-ತಾಯಿ ಆ ಮಗುವನ್ನು ಜ್ಯೋತಿಯ ಗಂಡನೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ಮೃತ ಮಗುವಿನ ತಂದೆ ಅಲ್ಲಗಳೆದಿದ್ದಾನೆ. ಆ ಗ್ರಾಮದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A woman in Delhi allegedly strangled her 11-month-old infant after a fight with her husband, the police said. According to South Delhi Deputy Commissioner Atul Thakur, when police reached the crime scene at Fatehpur Beri area, the infant had already died at a hospital. When questioned, the child's parent accused each other of the murder. However, investigation revealed the boy's mother had strangled him with her stole.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am