ಬ್ರೇಕಿಂಗ್ ನ್ಯೂಸ್
12-07-21 12:58 pm Headline Karnataka News Network ಕ್ರೈಂ
ಪಾಟ್ನಾ, ಜುಲೈ 12: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಅಲ್ ಖೈದಾ ಉಗ್ರ ಸಂಘಟನೆ ಜೊತೆ ನಂಟು ಹೊಂದಿರುವ ಇಬ್ಬರು ಶಂಕಿತರನ್ನು ಬಂಧಿಸಿರುವ ಬೆನ್ನಲ್ಲೇ ಬಿಹಾರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳು ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ.
"ಬಿಹಾರದ ಎಲ್ಲಾ ಸೂಕ್ಷ್ಮ ಪ್ರದೇಶಗಳು ಹಾಗೂ ರಾಜ್ಯದ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ," ಬಿಹಾರ ಪೊಲೀಸ್ ಮತ್ತು ಸಿಐಡಿ ವಿಶೇಷ ತಂಡದ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಉಗ್ರರ ಬಂಧನದ ಹಿನ್ನೆಲೆ ರಾಜ್ಯದಲ್ಲೂ ಶಂಕಿತರ ಮೇಲೆ ಹದ್ದಿನ ಕಣ್ಣು ಇರಿಸಲಾಗಿದೆ. ಭಾನುವಾರವಷ್ಟೇ ಉತ್ತರ ಪ್ರದೇಶದಲ್ಲಿ ಆತ್ಮಾಹುತಿ ಬಾಂದ್ ದಾಳಿಗೆ ಸಂಚು ರೂಪಿಸಿದ್ದರು ಎನ್ನಲಾದ ಇಬ್ಬರು ಅಲ್ ಖೈದಾ ಸಂಘಟನೆ ಶಂಕಿತರನ್ನು ಭಯೋತ್ಪಾದನಾ ನಿಗ್ರಹ ಪಡೆ ಬಂಧಿಸುವಲ್ಲಿ ಯಶಸ್ವಿಯಾಗಿತ್ತು.

ಉತ್ತರ ಪ್ರದೇಶದಲ್ಲಿ ಉಗ್ರ ದಾಳಿ ಸುಳಿವು ಸಿಕ್ಕ ಹಿನ್ನೆಲೆ ಭಯೋತ್ಪಾದನಾ ನಿಗ್ರಹ ದಳದ ಸಿಬ್ಬಂದಿ ಲಕ್ನೋದ ಹಲವು ಪ್ರದೇಶಗಳಲ್ಲಿ ಒಂದು ವಾರದಿಂದ ತೀವ್ರ ತಪಾಸಣೆ ನಡೆಸಿದ್ದರು. ಎಟಿಎಸ್ ಐಜಿ ಜಿ ಕೆ ಗೋಸ್ವಾಮಿ ನೇತೃತ್ವದ ತಂಡವು ಕಕೋರಿ ಪ್ರದೇಶದ ನಿವಾಸದಲ್ಲಿ ಅಡಗಿ ಕುಳಿತಿದ್ದ ಇಬ್ಬರು ಶಂಕಿತರನ್ನು ಬಂಧಿಸಿದ್ದು, ಸಜೀವ ಬಾಂಬ್ ಅನ್ನು ನಿಷ್ಕ್ರಿಯಗೊಳಿಸಿದ್ದರು. 6 ರಿಂದ 7 ಕೆಜಿ ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದರು.


"ಮಿನಾಜ್ ಅಹ್ಮದ್ ಮತ್ತು ನಾಸಿರುದ್ದೀನ್ ಎಂದು ಬಂಧಿತರನ್ನು ಗುರುತಿಸಲಾಗಿದೆ. ಇಬ್ಬರೂ ಲಕ್ನೋದ ಕಕೋರಿ ಪ್ರದೇಶದ ನಿವಾಸಿಗಳಾಗಿದ್ದು, ಅಲ್ ಖೈದಾ ಅನ್ಸಾರ್ ಖಜ್ವಾತ್ ಉಲ್ ಹಿಂದ್ ಸಂಘಟನೆಯ ಆತ್ಮಾಹುತಿ ದಾಳಿಯ ಸದಸ್ಯರಾಗಿದ್ದಾರೆ, ಉಳಿದ ಉಗ್ರರ ಸೆರೆಗೆ ಬಲೆ ಬೀಸಲಾಗಿದೆ,'' ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಲಕ್ನೋ ಸೇರಿದಂತೆ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಹರ್ದೋಯಿ, ಸೀತಾಪುರ್, ಬಾರಾಬಂಕಿ, ಉನ್ನಾವೋ ಹಾಗೂ ರಾಯ್ ಬರೇಲಿ ಜಿಲ್ಲೆಗಳಲ್ಲಿ ತೀವ್ರ ನಿಗಾವಹಿಸಲಾಗಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ.
Uttar Pradesh Anti-Terrorist Squad (ATS) nabbed two suspected Al Qaeda terrorists in Lucknow on Sunday. An IED explosive, a pistol, and a pressure cooker bomb were also recovered during the raids, according to top officials. Bihar is now on High alert after the arrest of two terrorists.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm