ಬ್ರೇಕಿಂಗ್ ನ್ಯೂಸ್
13-07-21 11:33 am Udupi Correspondent ಕ್ರೈಂ
ಉಡುಪಿ, ಜುಲೈ 13: ಅಪಾರ್ಟ್ಮೆಂಟ್ ಮನೆಯಲ್ಲಿ ನೆಲೆಸಿದ್ದ ಮಹಿಳೆಯೊಬ್ಬರನ್ನು ಕುತ್ತಿಗೆ ಬಿಗಿದು ಕೊಲೆಗೈದ ಘಟನೆ ಬ್ರಹ್ಮಾವರದಲ್ಲಿ ನಡೆದಿದ್ದು ಹಣ ಮತ್ತು ಚಿನ್ನಕ್ಕಾಗಿ ಕೊಲೆ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಕೊಲೆಯಾದ ಮಹಿಳೆ ಗಂಗೊಳ್ಳಿಯ ನಾಯಕವಾಡಿ ಜನತಾ ಕಾಲನಿ ನಿವಾಸಿ ವಿಶಾಲ ಗಾಣಿಗ(35) ಎಂಬವರಾಗಿದ್ದು ಕುತ್ತಿಗೆಗೆ ವಯರ್ ಬಿಗಿದು ಕೊಲೆ ಮಾಡಿರುವುದು ತನಿಖೆಯಲ್ಲಿ ಕಂಡುಬಂದಿದೆ. ಕೊಲೆಯಾದ ಮಹಿಳೆ ಕೆಲವು ದಿನಗಳ ಹಿಂದೆಯಷ್ಟೆ ವಿದೇಶದಿಂದ ಆಗಮಿಸಿದ್ದರು ಎನ್ನಲಾಗಿದೆ.
ಪತಿ ರಾಮಕೃಷ್ಣ ಜತೆ ವಿದೇಶದಲ್ಲಿದ್ದ ವಿಶಾಲಾ ಅವರು, 10 ದಿನಗಳ ಹಿಂದಷ್ಟೇ ಮಗು ಜತೆ ಊರಿಗೆ ಬಂದಿದ್ದರು. ದಂಪತಿ ಉಪ್ಪಿನಕೋಟೆಯ ಅಪಾರ್ಟ್ಮೆಂಟ್ನಲ್ಲಿ ಫ್ಲಾಟ್ ಹೊಂದಿದ್ದು, ಊರಿಗೆ ಬಂದಾಗ ಇಲ್ಲಿರುತ್ತಿದ್ದರು. ಈ ಬಾರಿ ತಂದೆ- ತಾಯಿ ಜತೆ ವಿಶಾಲಾ ಫ್ಲ್ಯಾಟ್ನಲ್ಲಿ ಇದ್ದರು. ಸೋಮವಾರ ಮಧ್ಯಾಹ್ನ ವಿಶಾಲಾ ತಂದೆ, ತಾಯಿ ಹಾಗೂ ಮಗು ಜತೆ ರಿಕ್ಷಾದಲ್ಲಿ ನಾಯಕವಾಡಿಯ ಮನೆಗೆ ತೆರಳಿದ್ದರು. ನಂತರ ಬ್ಯಾಂಕ್ನಲ್ಲಿ ಕೆಲಸವಿದೆ ಎಂದು ಮಹಿಳೆ ಒಬ್ಬರೇ ಹಿಂತಿರುಗಿದ್ದರು. ಸಾಯಂಕಾಲ 3 ಗಂಟೆಯಾದರೂ ಮಗಳು ಹಿಂದಿರುಗದ ಕಾರಣ, ತಂದೆ ಫ್ಲ್ಯಾಟ್ಗೆ ತೆರಳಿ ನೋಡಿದಾಗ ಬೀಗ ಹಾಕಿದ್ದು ಕಂಡುಬಂದಿದೆ. ಬಳಿಕ ಬೇರೊಂದು ಕೀಯಿಂದ ಬೀಗ ತೆರೆದು ನೋಡಿದಾಗ ವಿಶಾಲಾ ಬೆಡ್ ರೂಮಿನಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


'


ಕೂಡಲೇ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಹೆತ್ತವರ ಬಳಿ ಮಾಹಿತಿ ಸಂಗ್ರಹಿಸಿದ್ದಾರೆ. ಅವರಿಗೆ ಬೇರಾವುದೇ ಮಾಹಿತಿ ಇರಲಿಲ್ಲ. ಆಟೋದಲ್ಲಿ ಮನೆಗೆ ಹಿಂತಿರುಗಿ ಬಂದಿದ್ದಳು ಎನ್ನೋ ವಿಚಾರವನ್ನು ತಿಳಿಸಿದ್ದರು. ಅದರಂತೆ, ಆಕೆ ಪ್ರಯಾಣಿಸಿದ್ದ ಆಟೋರಿಕ್ಷಾ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಿದೇಶದಲ್ಲಿ ನೆಲೆಸಿದ್ದ ಮಹಿಳೆಯ ಬಳಿ ಸಾಕಷ್ಟು ಹಣ ಮತ್ತು ಚಿನ್ನ ಇರಬಹುದೆಂದು ಆಟೋ ಚಾಲಕನೇ ಕೃತ್ಯ ಎಸಗಿದ್ದಾನೆಯೇ, ಬೇರಾವುದೇ ಕೈವಾಡ ಇರಬಹುದೇ ಎನ್ನುವ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Video:
35-year-old woman found murdered in her apartment at Brahmavar in Udupi. The deceased has been identified as Vishala Ganiga (35). As per primary sources, although the killing happened on Sunday, the news broke out on Monday.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm