ಬ್ರೇಕಿಂಗ್ ನ್ಯೂಸ್
13-07-21 11:33 am Udupi Correspondent ಕ್ರೈಂ
ಉಡುಪಿ, ಜುಲೈ 13: ಅಪಾರ್ಟ್ಮೆಂಟ್ ಮನೆಯಲ್ಲಿ ನೆಲೆಸಿದ್ದ ಮಹಿಳೆಯೊಬ್ಬರನ್ನು ಕುತ್ತಿಗೆ ಬಿಗಿದು ಕೊಲೆಗೈದ ಘಟನೆ ಬ್ರಹ್ಮಾವರದಲ್ಲಿ ನಡೆದಿದ್ದು ಹಣ ಮತ್ತು ಚಿನ್ನಕ್ಕಾಗಿ ಕೊಲೆ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಕೊಲೆಯಾದ ಮಹಿಳೆ ಗಂಗೊಳ್ಳಿಯ ನಾಯಕವಾಡಿ ಜನತಾ ಕಾಲನಿ ನಿವಾಸಿ ವಿಶಾಲ ಗಾಣಿಗ(35) ಎಂಬವರಾಗಿದ್ದು ಕುತ್ತಿಗೆಗೆ ವಯರ್ ಬಿಗಿದು ಕೊಲೆ ಮಾಡಿರುವುದು ತನಿಖೆಯಲ್ಲಿ ಕಂಡುಬಂದಿದೆ. ಕೊಲೆಯಾದ ಮಹಿಳೆ ಕೆಲವು ದಿನಗಳ ಹಿಂದೆಯಷ್ಟೆ ವಿದೇಶದಿಂದ ಆಗಮಿಸಿದ್ದರು ಎನ್ನಲಾಗಿದೆ.
ಪತಿ ರಾಮಕೃಷ್ಣ ಜತೆ ವಿದೇಶದಲ್ಲಿದ್ದ ವಿಶಾಲಾ ಅವರು, 10 ದಿನಗಳ ಹಿಂದಷ್ಟೇ ಮಗು ಜತೆ ಊರಿಗೆ ಬಂದಿದ್ದರು. ದಂಪತಿ ಉಪ್ಪಿನಕೋಟೆಯ ಅಪಾರ್ಟ್ಮೆಂಟ್ನಲ್ಲಿ ಫ್ಲಾಟ್ ಹೊಂದಿದ್ದು, ಊರಿಗೆ ಬಂದಾಗ ಇಲ್ಲಿರುತ್ತಿದ್ದರು. ಈ ಬಾರಿ ತಂದೆ- ತಾಯಿ ಜತೆ ವಿಶಾಲಾ ಫ್ಲ್ಯಾಟ್ನಲ್ಲಿ ಇದ್ದರು. ಸೋಮವಾರ ಮಧ್ಯಾಹ್ನ ವಿಶಾಲಾ ತಂದೆ, ತಾಯಿ ಹಾಗೂ ಮಗು ಜತೆ ರಿಕ್ಷಾದಲ್ಲಿ ನಾಯಕವಾಡಿಯ ಮನೆಗೆ ತೆರಳಿದ್ದರು. ನಂತರ ಬ್ಯಾಂಕ್ನಲ್ಲಿ ಕೆಲಸವಿದೆ ಎಂದು ಮಹಿಳೆ ಒಬ್ಬರೇ ಹಿಂತಿರುಗಿದ್ದರು. ಸಾಯಂಕಾಲ 3 ಗಂಟೆಯಾದರೂ ಮಗಳು ಹಿಂದಿರುಗದ ಕಾರಣ, ತಂದೆ ಫ್ಲ್ಯಾಟ್ಗೆ ತೆರಳಿ ನೋಡಿದಾಗ ಬೀಗ ಹಾಕಿದ್ದು ಕಂಡುಬಂದಿದೆ. ಬಳಿಕ ಬೇರೊಂದು ಕೀಯಿಂದ ಬೀಗ ತೆರೆದು ನೋಡಿದಾಗ ವಿಶಾಲಾ ಬೆಡ್ ರೂಮಿನಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
'
ಕೂಡಲೇ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಹೆತ್ತವರ ಬಳಿ ಮಾಹಿತಿ ಸಂಗ್ರಹಿಸಿದ್ದಾರೆ. ಅವರಿಗೆ ಬೇರಾವುದೇ ಮಾಹಿತಿ ಇರಲಿಲ್ಲ. ಆಟೋದಲ್ಲಿ ಮನೆಗೆ ಹಿಂತಿರುಗಿ ಬಂದಿದ್ದಳು ಎನ್ನೋ ವಿಚಾರವನ್ನು ತಿಳಿಸಿದ್ದರು. ಅದರಂತೆ, ಆಕೆ ಪ್ರಯಾಣಿಸಿದ್ದ ಆಟೋರಿಕ್ಷಾ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಿದೇಶದಲ್ಲಿ ನೆಲೆಸಿದ್ದ ಮಹಿಳೆಯ ಬಳಿ ಸಾಕಷ್ಟು ಹಣ ಮತ್ತು ಚಿನ್ನ ಇರಬಹುದೆಂದು ಆಟೋ ಚಾಲಕನೇ ಕೃತ್ಯ ಎಸಗಿದ್ದಾನೆಯೇ, ಬೇರಾವುದೇ ಕೈವಾಡ ಇರಬಹುದೇ ಎನ್ನುವ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Video:
35-year-old woman found murdered in her apartment at Brahmavar in Udupi. The deceased has been identified as Vishala Ganiga (35). As per primary sources, although the killing happened on Sunday, the news broke out on Monday.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm