ಬ್ರೇಕಿಂಗ್ ನ್ಯೂಸ್
13-07-21 11:33 am Udupi Correspondent ಕ್ರೈಂ
ಉಡುಪಿ, ಜುಲೈ 13: ಅಪಾರ್ಟ್ಮೆಂಟ್ ಮನೆಯಲ್ಲಿ ನೆಲೆಸಿದ್ದ ಮಹಿಳೆಯೊಬ್ಬರನ್ನು ಕುತ್ತಿಗೆ ಬಿಗಿದು ಕೊಲೆಗೈದ ಘಟನೆ ಬ್ರಹ್ಮಾವರದಲ್ಲಿ ನಡೆದಿದ್ದು ಹಣ ಮತ್ತು ಚಿನ್ನಕ್ಕಾಗಿ ಕೊಲೆ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಕೊಲೆಯಾದ ಮಹಿಳೆ ಗಂಗೊಳ್ಳಿಯ ನಾಯಕವಾಡಿ ಜನತಾ ಕಾಲನಿ ನಿವಾಸಿ ವಿಶಾಲ ಗಾಣಿಗ(35) ಎಂಬವರಾಗಿದ್ದು ಕುತ್ತಿಗೆಗೆ ವಯರ್ ಬಿಗಿದು ಕೊಲೆ ಮಾಡಿರುವುದು ತನಿಖೆಯಲ್ಲಿ ಕಂಡುಬಂದಿದೆ. ಕೊಲೆಯಾದ ಮಹಿಳೆ ಕೆಲವು ದಿನಗಳ ಹಿಂದೆಯಷ್ಟೆ ವಿದೇಶದಿಂದ ಆಗಮಿಸಿದ್ದರು ಎನ್ನಲಾಗಿದೆ.
ಪತಿ ರಾಮಕೃಷ್ಣ ಜತೆ ವಿದೇಶದಲ್ಲಿದ್ದ ವಿಶಾಲಾ ಅವರು, 10 ದಿನಗಳ ಹಿಂದಷ್ಟೇ ಮಗು ಜತೆ ಊರಿಗೆ ಬಂದಿದ್ದರು. ದಂಪತಿ ಉಪ್ಪಿನಕೋಟೆಯ ಅಪಾರ್ಟ್ಮೆಂಟ್ನಲ್ಲಿ ಫ್ಲಾಟ್ ಹೊಂದಿದ್ದು, ಊರಿಗೆ ಬಂದಾಗ ಇಲ್ಲಿರುತ್ತಿದ್ದರು. ಈ ಬಾರಿ ತಂದೆ- ತಾಯಿ ಜತೆ ವಿಶಾಲಾ ಫ್ಲ್ಯಾಟ್ನಲ್ಲಿ ಇದ್ದರು. ಸೋಮವಾರ ಮಧ್ಯಾಹ್ನ ವಿಶಾಲಾ ತಂದೆ, ತಾಯಿ ಹಾಗೂ ಮಗು ಜತೆ ರಿಕ್ಷಾದಲ್ಲಿ ನಾಯಕವಾಡಿಯ ಮನೆಗೆ ತೆರಳಿದ್ದರು. ನಂತರ ಬ್ಯಾಂಕ್ನಲ್ಲಿ ಕೆಲಸವಿದೆ ಎಂದು ಮಹಿಳೆ ಒಬ್ಬರೇ ಹಿಂತಿರುಗಿದ್ದರು. ಸಾಯಂಕಾಲ 3 ಗಂಟೆಯಾದರೂ ಮಗಳು ಹಿಂದಿರುಗದ ಕಾರಣ, ತಂದೆ ಫ್ಲ್ಯಾಟ್ಗೆ ತೆರಳಿ ನೋಡಿದಾಗ ಬೀಗ ಹಾಕಿದ್ದು ಕಂಡುಬಂದಿದೆ. ಬಳಿಕ ಬೇರೊಂದು ಕೀಯಿಂದ ಬೀಗ ತೆರೆದು ನೋಡಿದಾಗ ವಿಶಾಲಾ ಬೆಡ್ ರೂಮಿನಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


'


ಕೂಡಲೇ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಹೆತ್ತವರ ಬಳಿ ಮಾಹಿತಿ ಸಂಗ್ರಹಿಸಿದ್ದಾರೆ. ಅವರಿಗೆ ಬೇರಾವುದೇ ಮಾಹಿತಿ ಇರಲಿಲ್ಲ. ಆಟೋದಲ್ಲಿ ಮನೆಗೆ ಹಿಂತಿರುಗಿ ಬಂದಿದ್ದಳು ಎನ್ನೋ ವಿಚಾರವನ್ನು ತಿಳಿಸಿದ್ದರು. ಅದರಂತೆ, ಆಕೆ ಪ್ರಯಾಣಿಸಿದ್ದ ಆಟೋರಿಕ್ಷಾ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಿದೇಶದಲ್ಲಿ ನೆಲೆಸಿದ್ದ ಮಹಿಳೆಯ ಬಳಿ ಸಾಕಷ್ಟು ಹಣ ಮತ್ತು ಚಿನ್ನ ಇರಬಹುದೆಂದು ಆಟೋ ಚಾಲಕನೇ ಕೃತ್ಯ ಎಸಗಿದ್ದಾನೆಯೇ, ಬೇರಾವುದೇ ಕೈವಾಡ ಇರಬಹುದೇ ಎನ್ನುವ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Video:
35-year-old woman found murdered in her apartment at Brahmavar in Udupi. The deceased has been identified as Vishala Ganiga (35). As per primary sources, although the killing happened on Sunday, the news broke out on Monday.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm