ಬ್ರೇಕಿಂಗ್ ನ್ಯೂಸ್
13-07-21 11:33 am Udupi Correspondent ಕ್ರೈಂ
ಉಡುಪಿ, ಜುಲೈ 13: ಅಪಾರ್ಟ್ಮೆಂಟ್ ಮನೆಯಲ್ಲಿ ನೆಲೆಸಿದ್ದ ಮಹಿಳೆಯೊಬ್ಬರನ್ನು ಕುತ್ತಿಗೆ ಬಿಗಿದು ಕೊಲೆಗೈದ ಘಟನೆ ಬ್ರಹ್ಮಾವರದಲ್ಲಿ ನಡೆದಿದ್ದು ಹಣ ಮತ್ತು ಚಿನ್ನಕ್ಕಾಗಿ ಕೊಲೆ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಕೊಲೆಯಾದ ಮಹಿಳೆ ಗಂಗೊಳ್ಳಿಯ ನಾಯಕವಾಡಿ ಜನತಾ ಕಾಲನಿ ನಿವಾಸಿ ವಿಶಾಲ ಗಾಣಿಗ(35) ಎಂಬವರಾಗಿದ್ದು ಕುತ್ತಿಗೆಗೆ ವಯರ್ ಬಿಗಿದು ಕೊಲೆ ಮಾಡಿರುವುದು ತನಿಖೆಯಲ್ಲಿ ಕಂಡುಬಂದಿದೆ. ಕೊಲೆಯಾದ ಮಹಿಳೆ ಕೆಲವು ದಿನಗಳ ಹಿಂದೆಯಷ್ಟೆ ವಿದೇಶದಿಂದ ಆಗಮಿಸಿದ್ದರು ಎನ್ನಲಾಗಿದೆ.
ಪತಿ ರಾಮಕೃಷ್ಣ ಜತೆ ವಿದೇಶದಲ್ಲಿದ್ದ ವಿಶಾಲಾ ಅವರು, 10 ದಿನಗಳ ಹಿಂದಷ್ಟೇ ಮಗು ಜತೆ ಊರಿಗೆ ಬಂದಿದ್ದರು. ದಂಪತಿ ಉಪ್ಪಿನಕೋಟೆಯ ಅಪಾರ್ಟ್ಮೆಂಟ್ನಲ್ಲಿ ಫ್ಲಾಟ್ ಹೊಂದಿದ್ದು, ಊರಿಗೆ ಬಂದಾಗ ಇಲ್ಲಿರುತ್ತಿದ್ದರು. ಈ ಬಾರಿ ತಂದೆ- ತಾಯಿ ಜತೆ ವಿಶಾಲಾ ಫ್ಲ್ಯಾಟ್ನಲ್ಲಿ ಇದ್ದರು. ಸೋಮವಾರ ಮಧ್ಯಾಹ್ನ ವಿಶಾಲಾ ತಂದೆ, ತಾಯಿ ಹಾಗೂ ಮಗು ಜತೆ ರಿಕ್ಷಾದಲ್ಲಿ ನಾಯಕವಾಡಿಯ ಮನೆಗೆ ತೆರಳಿದ್ದರು. ನಂತರ ಬ್ಯಾಂಕ್ನಲ್ಲಿ ಕೆಲಸವಿದೆ ಎಂದು ಮಹಿಳೆ ಒಬ್ಬರೇ ಹಿಂತಿರುಗಿದ್ದರು. ಸಾಯಂಕಾಲ 3 ಗಂಟೆಯಾದರೂ ಮಗಳು ಹಿಂದಿರುಗದ ಕಾರಣ, ತಂದೆ ಫ್ಲ್ಯಾಟ್ಗೆ ತೆರಳಿ ನೋಡಿದಾಗ ಬೀಗ ಹಾಕಿದ್ದು ಕಂಡುಬಂದಿದೆ. ಬಳಿಕ ಬೇರೊಂದು ಕೀಯಿಂದ ಬೀಗ ತೆರೆದು ನೋಡಿದಾಗ ವಿಶಾಲಾ ಬೆಡ್ ರೂಮಿನಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


'


ಕೂಡಲೇ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಹೆತ್ತವರ ಬಳಿ ಮಾಹಿತಿ ಸಂಗ್ರಹಿಸಿದ್ದಾರೆ. ಅವರಿಗೆ ಬೇರಾವುದೇ ಮಾಹಿತಿ ಇರಲಿಲ್ಲ. ಆಟೋದಲ್ಲಿ ಮನೆಗೆ ಹಿಂತಿರುಗಿ ಬಂದಿದ್ದಳು ಎನ್ನೋ ವಿಚಾರವನ್ನು ತಿಳಿಸಿದ್ದರು. ಅದರಂತೆ, ಆಕೆ ಪ್ರಯಾಣಿಸಿದ್ದ ಆಟೋರಿಕ್ಷಾ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಿದೇಶದಲ್ಲಿ ನೆಲೆಸಿದ್ದ ಮಹಿಳೆಯ ಬಳಿ ಸಾಕಷ್ಟು ಹಣ ಮತ್ತು ಚಿನ್ನ ಇರಬಹುದೆಂದು ಆಟೋ ಚಾಲಕನೇ ಕೃತ್ಯ ಎಸಗಿದ್ದಾನೆಯೇ, ಬೇರಾವುದೇ ಕೈವಾಡ ಇರಬಹುದೇ ಎನ್ನುವ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Video:
35-year-old woman found murdered in her apartment at Brahmavar in Udupi. The deceased has been identified as Vishala Ganiga (35). As per primary sources, although the killing happened on Sunday, the news broke out on Monday.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm