ಬ್ರೇಕಿಂಗ್ ನ್ಯೂಸ್
13-07-21 02:19 pm Mangalore Correspondent ಕ್ರೈಂ
ಸುರತ್ಕಲ್, ಜು.13 : ಹಳೆಯಂಗಡಿ ಶ್ರೀ ದುರ್ಗಾಪರಮೇಶ್ವರಿ ವಿನಾಯಕ ಮಠದಲ್ಲಿ ಸೋಮವಾರ ರಾತ್ರಿ ಕಳ್ಳತನ ನಡೆದಿದ್ದು, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.
ಕಳೆದ ರಾತ್ರಿ ವಿಶ್ವಕರ್ಮ ಸಮುದಾಯದ ಹಳೆಯಂಗಡಿ ವಿನಾಯಕ ಮಠಕ್ಕೆ ನುಗ್ಗಿದ ಕಳ್ಳರು ಗರ್ಭಗುಡಿಯ ಬೀಗ ಮುರಿದು ದೇವಿಯ ಬೆಳ್ಳಿ ಪ್ರಭಾವಳಿ, ಬೆಳ್ಳಿಯ ಕವಚ, ಮೂಗುತಿ ಸೇರಿದಂತೆ ಚಿನ್ನ-ಬೆಳ್ಳಿಯ ಆಭರಣಗಳನ್ನು ಕಳವುಗೈದಿದ್ದಾರೆ. ಅದಲ್ಲದೆ ಗರ್ಭಗುಡಿಯ ಹೊರ ಬದಿಯಲ್ಲಿರುವ ಗಣಪತಿಯ ಗುಡಿಯ ಎರಡು ಬೀಗ ಒಡೆದು ಗಣಪತಿ ದೇವರ ಕವಚ, ಮತ್ತು ಪ್ರಭಾವಳಿ, ಚಿನ್ನದ ತಿಲಕ, ಕಾಣಿಕೆ ಡಬ್ಬಿ, ಶ್ರೀದೇವಿಯ ಗರ್ಭಗುಡಿ ಹೊರ ಬದಿಯ ಕಾಣಿಕೆ ಡಬ್ಬಿ ಬೀಗ ಒಡೆದು ಕಳ್ಳತನ ಮಾಡಿದ್ದಾರೆ.

ಸುಮಾರು ಏಳೂವರೆ ಕೆ.ಜಿ.ಯಷ್ಟು ಬೆಳ್ಳಿ ಹಾಗೂ 9 ಗ್ರಾಂನಷ್ಟು ಚಿನ್ನದ ಸೊತ್ತು ಹಾಗೂ ಕಾಣಿಕೆ ಡಬ್ಬಿಯಲ್ಲಿದ್ದ ನಗದು ಸೇರಿದಂತೆ ಸುಮಾರು 6 ಲಕ್ಷ ರೂ. ವರೆಗಿನ ಸೊತ್ತು ಕಳವಾಗಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಇಂದು ಬೆಳಗ್ಗೆ ಅರ್ಚಕರು ಪೂಜೆಗೆಂದು ದೇವಳದ ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ. ಕಳ್ಳರು ಮಠದ ಹೊರ ಬದಿಯಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ಮಠದ ಒಳಗಡೆ ಬಂದಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thieves steal lakhs worth of Gold Monuments from Temple in Haleyangadi. Mulki police are now investigating the case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm