ಬ್ರೇಕಿಂಗ್ ನ್ಯೂಸ್
19-07-21 05:29 pm Udupi Correspondent ಕ್ರೈಂ
ಉಡುಪಿ, ಜುಲೈ 19: ವಿಶಾಲ ಗಾಣಿಗ(35) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ತಂಡಗಳಲ್ಲಾಗಿ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಹಾದಿ ಈಗ ಬೆಂಗಳೂರು, ಕೇರಳಕ್ಕೂ ವಿಸ್ತರಣೆಯಾಗಿದೆ. ಈ ನಡುವೆ, ಪೊಲೀಸರು ವಿಶಾಲಾ ಗಾಣಿಗ ಪತಿ ರಾಮಕೃಷ್ಣ ಗಾಣಿಗ ಅವರನ್ನು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ.
ಪತ್ನಿಯ ಕೊಲೆಯ ನಂತರ ದುಬೈನಿಂದ ಊರಿಗೆ ಬಂದಿದ್ದ ರಾಮಕೃಷ್ಣ ಅವರನ್ನು ಪೊಲೀಸರು ಎರಡು, ಮೂರು ಬಾರಿ ವಿಚಾರಣೆ ನಡೆಸಿದ್ದರು. ಇದೀಗ ಕೆಲವೊಂದು ಮಾಹಿತಿ ಪಡೆಯುವುದಕ್ಕಾಗಿ ರಾಮಕೃಷ್ಣ ಅವರನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೇಲ್ನೋಟಕ್ಕೆ ಯಾರೋ ಸುಪಾರಿ ನೀಡಿ ವಿಶಾಲ ಗಾಣಿಗ ಅವರನ್ನು ಕೊಲೆಗೈದಿರುವ ಸಂಶಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ಬೆಂಗಳೂರು ಮತ್ತು ಕೇರಳಕ್ಕೆ ವಿಸ್ತರಿಸಿದ್ದಾರೆ. ಕೊಲೆಯ ಬಳಿಕ ಆರೋಪಿಗಳು ಹೊರ ರಾಜ್ಯಕ್ಕೆ ಪರಾರಿಯಾಗಿದ್ದಾರೆಯೇ ಎಂಬ ಸಂಶಯ ಕೇಳಿಬಂದಿದೆ. ಪ್ರಕರಣ ಸಂಬಂಧಿಸಿ ಇಬ್ಬರು ಸುಪಾರಿ ಕಿಲ್ಲರ್ಗಳನ್ನು ಪೊಲೀಸರು ಹೊರ ರಾಜ್ಯದಲ್ಲಿ ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
ದುಬೈಯಿಂದ ಮಗುವಿನೊಂದಿಗೆ ಊರಿಗೆ ಬಂದಿದ್ದ ವಿಶಾಲ ಗಾಣಿಗ ಬ್ರಹ್ಮಾವರದ ಕುಮ್ರಗೋಡು ಗ್ರಾಮದ ಫ್ಲ್ಯಾಟ್ ನಲ್ಲಿ ಜು.12ರಂದು ಒಬ್ಬರೇ ಇರುವಾಗ ದುಷ್ಕರ್ಮಿಗಳು, ಕುತ್ತಿಗೆ ಬಿಗಿದು ಕೊಲೆಗೈದು ಮೈಮೇಲಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದರು. ಪ್ರಕರಣ ಭಾರೀ ಸಂಚಲನಕ್ಕೆ ಕಾರಣವಾಗಿದ್ದು ಯಾವುದೇ ಸುಳಿವು ನೀಡದೆ ಆರೋಪಿಗಳು ಕೃತ್ಯ ಎಸಗಿರುವುದು ಪೊಲೀಸರಿಗೆ ಸವಾಲಾಗಿದೆ.
ಕೃತ್ಯ ನಡೆದಿದ್ದ ದಿನ ವಿಶಾಲಾ ಗಾಣಿಗ ಬ್ಯಾಂಕಿಗೆ ತೆರಳಿ, ಫ್ಲಾಟಿಗೆ ಬಂದಿದ್ದರು. ಈ ವೇಳೆ, ಹತ್ತಿರದ ಸಂಬಂಧಿಕರು ಬಿಟ್ಟರೆ ಅಪರಿಚಿತ ಕರೆಗಳು ಬಂದಿರಲಿಲ್ಲ. ಆದರೆ, ವಿಶಾಲಾ ಅವರು ಇಂಟರ್ನೆಟ್ ಕರೆ ಅಥವಾ ವಾಟ್ಸಪ್ ಕರೆಗಳನ್ನು ಪಡೆದಿದ್ದರೆ ಅದನ್ನು ಪತ್ತೆ ಮಾಡಲು ಸಾಧ್ಯವಾಗಲ್ಲ. ಆ ರೀತಿಯ ಕರೆ ಬಂದಿರುವುದು ಮಾತ್ರ ಹೇಳುತ್ತದೆ ವಿನಾ ಅದು ಎಲ್ಲಿಂದ ಮತ್ತು ಯಾರು ಮಾಡಿದ್ದಾರೆ ಎನ್ನೋದನ್ನು ಖಚಿತಪಡಿಸಲ್ಲ. ಇದೇ ವೇಳೆ ಪತಿಯಿಂದ ಕರೆ ಬಂದಿದೆ ಎನ್ನಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರು ಪತಿ ಬಗ್ಗೆ ಸಂಶಯಗೊಂಡು ಹೆಚ್ಚುವರಿ ತನಿಖೆಗೆ ಒಳಪಡಿಸಿದ್ದಾರೆ.
ವಿಶಾಲಾ ಗಾಣಿಗ ಕೊಲೆ ; ಆರೋಪಿಗಳ ಸುಳಿವು ಲಭ್ಯ, ಪೊಲೀಸ್ ತಂಡ ಬೆಂಗಳೂರಿಗೆ, ಶೀಘ್ರದಲ್ಲೇ ಕೀಚಕರ ಬಂಧನ ಸಾಧ್ಯತೆ
ವಿದೇಶದಲ್ಲಿ ನೆಲೆಸಿದ್ದ ಮಹಿಳೆಯ ಬರ್ಬರ ಕೊಲೆ ; ಬ್ರಹ್ಮಾವರದ ಫ್ಲಾಟ್ ನಲ್ಲಿ ಕೃತ್ಯ, ಹಣ, ಚಿನ್ನಕ್ಕಾಗಿ ಹತ್ಯೆ ಶಂಕೆ
Vishala Ganiga Murder case Husband taken into Police custody for interrogation. It is said that Vishala's husband used to deal in properties and had acquired properties in different places. In some cases, there were disputes over the properties, it is being claimed. Therefore, enmity could also be a reason for the murder.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm