ಬ್ರೇಕಿಂಗ್ ನ್ಯೂಸ್
20-07-21 02:44 pm Mangalore Correspondent ಕ್ರೈಂ
ಮಂಗಳೂರು, ಜುಲೈ 20: ಆಂಬುಲೆನ್ಸ್ ವಾಹನ ಸಾಗುತ್ತಿದ್ದಾಗ ಅಡ್ಡಾದಿಡ್ಡಿ ಕಾರು ಚಲಾಯಿಸಿ, ತುರ್ತು ಅಗತ್ಯದ ರೋಗಿಯ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಕಾರು ಚಾಲಕ ಮತ್ತು ವಾಹನವನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲದ ಕುಂಪಲ ನಿವಾಸಿ ಚರಣ್ ರಾಜ್ ಎಸ್. (31) ಎಂದು ಗುರುತಿಸಲಾಗಿದೆ.
ನಿನ್ನೆ ಸಂಜೆ ದೇರಳಕಟ್ಟೆಯ ಕಣಚೂರು ಆಸ್ಪತ್ರೆಯಿಂದ ಮಂಗಳೂರಿನ ನಗರದ ಆಸ್ಪತ್ರೆಗೆ ತುರ್ತು ಅಗತ್ಯದ ರೋಗಿಯನ್ನು ಆಂಬುಲೆನ್ಸ್ ನಲ್ಲಿ ತರುತ್ತಿದ್ದಾಗ ದೇರಳಕಟ್ಟೆಯಿಂದ ತೊಕ್ಕೊಟ್ಟು ಹೆದ್ದಾರಿ ಮೂಲಕ ಮಂಗಳೂರಿನ ಎಕ್ಕೂರು ವರೆಗೂ ಕಾರು ಚಾಲಕ ಸಂಚಾರಕ್ಕೆ ಅಡ್ಡಿಪಡಿಸಿದ್ದು ವಿಡಿಯೋದಲ್ಲಿ ದಾಖಲಾಗಿತ್ತು. ಆಂಬುಲೆನ್ಸ್ ನಲ್ಲಿದ್ದವರೇ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು, ಕಾರಿನ ನಂಬರ್ (ಕೆಎ 19 ಎಂಜೆ 8924) ಸ್ಪಷ್ಟವಾಗಿ ದಾಖಲಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಮಂಗಳೂರು ನಗರ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಕ್ರಮ ಜರುಗಿಸಿದ್ದಾರೆ.







ಅಡ್ಡಾದಿಡ್ಡಿ ಚಲಾಯಿಸಿದ್ದ ಎರ್ಟಿಕಾ ಕಾರನ್ನು ವಶಕ್ಕೆ ಪಡೆದು, ಕಂಕನಾಡಿ ನಗರ ಸಂಚಾರಿ ಠಾಣೆಗೆ ತಂದಿರಿಸಿದ್ದಾರೆ. ಆರೋಪಿ ಚಾಲಕ ಚರಣ್ ರಾಜ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಕಮಿಷನರ್ ಶಶಿಕುಮಾರ್, ಯಾವುದೇ ತುರ್ತು ಸೇವಾ ವಾಹನಗಳು ಸೈರನ್ ಹೊಡೆದು ಸಂಚರಿಸುತ್ತಿರುವ ವೇಳೆ ಸದರಿ ವಾಹನವನ್ನು ಹಿಂಬಾಲಿಸಿದಲ್ಲಿ ಅಥವಾ ಸಂಚಾರಕ್ಕೆ ಅಡ್ಡಿಪಡಿಸಿದಲ್ಲಿ ದಂಡ ಅಥವಾ ಆರು ತಿಂಗಳು ಶಿಕ್ಷೆ ವಿಧಿಸಬಹುದು. ಗಂಭೀರ ಅಪರಾಧ ಆಗಿದ್ದಲ್ಲಿ ಎರಡನ್ನೂ ವಿಧಿಸಲು ಅವಕಾಶ ಇರುತ್ತದೆ. ಹಾಗಾಗಿ ಸದ್ರಿ ಪ್ರಕರಣದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ. ಆತ ಡ್ರಿಂಕ್ಸ್ ಮಾಡಿ, ಈ ರೀತಿ ಅಪರಾಧ ಎಸಗಿದ್ದಾನೆಯೇ ಅನ್ನುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
Video:
The driver of a Maruti Ertiga car bearing registration No. KA19 MJ8924 was detained, his car was seized, and a fine was imposed. He had blocked the path of an ambulance on NH 66 stretch of Thokkottu to Pumpwell, by which a patient who was facing an emergency was being taken from Kanachur hospital to another hospital in the city. The incident had happened on the evening of Monday July 19 and the video clip of the same had gone viral on social media.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm