ಬ್ರೇಕಿಂಗ್ ನ್ಯೂಸ್
21-07-21 12:03 pm Headline Karnataka News Network ಕ್ರೈಂ
ಬೆಂಗಳೂರು, ಜುಲೈ 20: ಆರ್'ಟಿಐ ಕಾರ್ಯಕರ್ತ ವೆಂಕಟೇಶ್ ಕೊಲೆ ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತ ಆರೋಪಿಗಳನ್ನು ತಾವರೆಕೆರೆ ಟೌನ್ ನಿವಾಸಿ ಪ್ರದೀಪ್ ಕುಮಾರ್ ಅಲಿಯಾಸ್ ಪ್ರದೀ (33), ತಾವರಕೆರೆಯ ಮಂಜುನಾಥ ನಗರದ ನಿವಾಸಿ ಸತೀಶ್. ಟಿಸಿ (20), ತಾವರಕೆರೆಯ ಯಲಚಗುಪ್ಪೆ ನಿವಾಸಿ ತೇಜಸ್ ಕುಮಾರ್ ಎ (22) ಎಂದು ಗುರ್ತಿಸಲಾಗಿದೆ.
ಆರ್'ಟಿಐ ಕಾರ್ಯಕರ್ತ ವೆಂಕಟೇಶ್ ಅಲಿಯಾಸ್ ಮಹೀಮಯ್ಯ (43) ಎಂಬುವವರ ಮೇಲೆ ಜುಲೈ 15 ರಂದು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ದಾಳಿ ವೇಳೆ ವೆಂಕಟೇಶ್ ಅವರ ಬಲಗೈ ಹಾಗೂ ಕಾಲುಗಳನ್ನು ಕತ್ತರಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೆಂಕಟೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಕೊನೆಯುಸಿರೆಳೆದಿದ್ದರು.

ಪ್ರಕರಣ ಸಂಬಂಧ ತನಿಖೆ ಆರಂಭಿಸಿದ್ದ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಹತ್ಯೆಯು ಹಣಕಾಸು ವಿಚಾರವಾಗಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಫೈನಾನ್ಶಿಯರ್ ಆಗಿರುವ ಪ್ರದೀಪ್ ಕುಮಾರ್ ವೆಂಕಟೇಶ್ ಅವರಿಗೆ ರೂ.10 ಲಕ್ಷ ಸಾಲ ನೀಡಿದ್ದಾರೆ. ಈ ಹಣಕ್ಕೆ ಅಲ್ಪ ಪ್ರಮಾಣದ ಬಡ್ಡಿ ನೀಡಿದ್ದ ವೆಂಕಟೇಶ್ ಅವರು, ಸಾಲದ ಹಣವನ್ನು ಹಿಂತಿರುಗಿಸಿರಲಿಲ್ಲ. ಇದರಿಂದ ಬೇಸರಗೊಂಡಿದ್ದ ಪ್ರದೀಪ್ ಅವರು ಹಲವು ಬಾರಿ ಹಣವನ್ನು ಹಿಂತಿರುಗಿಸುವಂತೆ ಮನವಿ ಮಾಡಿದ್ದಾರೆ. ಆದರೆ, ಇದಕ್ಕೆ ಒಪ್ಪದ ವೆಂಕಟೇಶ್ ಅವರು, ಪ್ರದೀಪ್ ವಿರುದ್ಧ ಪೊಲೀಸರಿಗೆ ದೂರು ನೀಡುವ ಬದರಿಕೆ ಹಾಕಿದ್ದಾರೆ. ಹೀಗಾಗಿ ವೆಂಕಟೇಶ್ ಅವರಿಗೆ ಪಾಠ ಕಲಿಸುವ ಸಲುವಾಗಿ ನಾಲ್ಕು ಮಂದಿಗೆ ಸುಪಾರಿ ನೀಡಿದ್ದಾರೆ. ವೆಂಕಟೇಶ್ ಅವರ ಮೇಲೆ ದಾಳಿ ನಡೆಸುವಂತೆ ತಿಳಿಸಿದ್ದಾರೆ.
ಪ್ರದೀಪ್ ಸುಪಾರಿ ನೀಡಿದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳು ವೆಂಕಟೇಶ್ ಅವರ ಮೇಲೆ ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಪ್ರದೀಪ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದು, ಮತ್ತಿಬ್ಬರೂ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆಸಿದ್ದಾರೆಂದು ತಿಳಿದುಬಂದಿದೆ.
Read: ಆರ್ಟಿಐ ಕಾರ್ಯಕರ್ತನ ಕೈ ಕಾಲು ಕಡಿದುಹಾಕಿದ ದುಷ್ಕರ್ಮಿಗಳು ! ನಡುಬೀದಿಯಲ್ಲಿ ಬೆಚ್ಚಿ ಬೀಳಿಸಿದ ಕೃತ್ಯ
Three persons have been arrested by the police in connection with the murder of an RTI activist at Tavarekere in Ramanagara district.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm