ಬ್ರೇಕಿಂಗ್ ನ್ಯೂಸ್
21-07-21 05:27 pm Mangalore Correspondent ಕ್ರೈಂ
ಮಂಗಳೂರು, ಜುಲೈ 21: ಕುದ್ರೋಳಿ ಕಸಾಯಿಖಾನೆ ಬಳಿಯ ಖಾಸಗಿ ಕಟ್ಟಡದಲ್ಲಿ ಅಕ್ರಮವಾಗಿ ಗೋವುಗಳನ್ನು ಕಡಿಯಲು ಸಿದ್ಧತೆ ನಡೆಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ಕಡಿಯಲು ರೆಡಿ ಮಾಡಿದ್ದ ಎರಡು ಅಪ್ರಾಪ್ತ ವಯಸ್ಸಿನ ಕರುಗಳನ್ನು ಪತ್ತೆ ಮಾಡಲಾಗಿದೆ.
ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕೊಣಾಜೆಯ ಪಜೀರಿನಲ್ಲಿರುವ ಗೋವನಿತಾಶ್ರಮ ಗೋಶಾಲೆಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ಮನೆ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಕುದ್ರೋಳಿ ಕಸಾಯಿಖಾನೆಯಲ್ಲಿ ಕರು ಸೇರಿದಂತೆ ಅಪ್ರಾಪ್ತ ವಯಸ್ಸಿನ ಗೋವುಗಳನ್ನು ಕಡಿಯುತ್ತಿರುವ ಬಗ್ಗೆ ಮಾಹಿತಿ ಪಡೆದು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. 2020ರಲ್ಲಿ ಜಾರಿಗೆ ತಂದಿರುವ ನೂತನ ಕಾಯ್ದೆ ಪ್ರಕಾರ, ಅಪ್ರಾಪ್ತ ವಯಸ್ಸಿನ ಗೋವುಗಳನ್ನು ವಧೆ ಮಾಡುವುದು ಅಪರಾಧವಾಗಿದ್ದರಿಂದ ಕುದ್ರೋಳಿ ಕಸಾಯಿಖಾನೆಯ ಗುತ್ತಿಗೆ ಪಡೆದವರ ಲೈಸನ್ಸ್ ರದ್ದು ಮಾಡಲಾಗಿತ್ತು. ಅಲ್ಲದೆ, ವಧಾ ಗೃಹದ ಆವರಣದಲ್ಲಿ ಸಿಸಿಟಿವಿಯನ್ನೂ ಅಳವಡಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಕುದ್ರೋಳಿ ಕಸಾಯಿಖಾನೆಯಲ್ಲಿ ಗೋವುಗಳನ್ನು ಕಡಿಯಲಾಗಿಲ್ಲ ಎನ್ನುವ ಮಾಹಿತಿಯನ್ನು ಮೇಯರ್ ನೀಡಿದ್ದಾರೆ. ಅಲ್ಲದೆ, ಇಂದು ದಾಳಿ ನಡೆದಿರುವ ಜಾಗ ಅಲ್ಲಿಯೇ ಪಕ್ಕದ ಖಾಸಗಿ ಜಾಗ. ಆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದಿದ್ದಾರೆ. ಕಸಾಯಿಖಾನೆಯ ಪಕ್ಕದಲ್ಲೇ ಬೇರೊಂದು ಕಟ್ಟಡದಲ್ಲಿ ಕರುಗಳನ್ನು ವಧೆ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇಂದು ಬಕ್ರೀದ್ ಹಿನ್ನೆಲೆಯಲ್ಲಿ ಕಸಾಯಿಖಾನೆ ನಡೆಸುತ್ತಿದ್ದವರೇ ಕರುಗಳನ್ನು ಕಡಿಯಲು ಸಿದ್ಧತೆ ನಡೆಸಿದ್ದರು ಎಂದು ಬಜರಂಗದಳ ಕಾರ್ಯಕರ್ತರು ಆರೋಪಿಸಿದ್ದಾರೆ.
MCC and Police raid on Kudroli Slaughter house in Mangalore on bakrid. Two young cows rescued and one person has been arrested.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm