ಬ್ರೇಕಿಂಗ್ ನ್ಯೂಸ್
21-07-21 10:42 pm Mangaluru Correspondent ಕ್ರೈಂ
ಮಂಗಳೂರು, ಜುಲೈ 21: ಭಜನಾ ಮಂದಿರಕ್ಕೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿ ಕಳವುಗೈದ ಘಟನೆ ನೀರುಮಾರ್ಗದಲ್ಲಿ ನಡೆದಿದ್ದು ಇದರ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.
ನೀರುಮಾರ್ಗ ಜಂಕ್ಷನ್ ಬಳಿಯ ಸುಬ್ರಹ್ಮಣ್ಯ ಭಜನಾ ಮಂದಿರದ ಮುಂಭಾಗಕ್ಕೆ ಬುಧವಾರ ನಸುಕಿನ 1.45ರ ಸುಮಾರಿಗೆ ಬಂದಿದ್ದ ಕಳ್ಳರು ಬಾಗಿಲು ಬೀಗ ಮುರಿದು ಒಳನುಗ್ಗಿದ್ದಾರೆ. ಬಳಿಕ ಉತ್ತರದ ಬಾಗಿಲು ತೆರೆದು ಪ್ರಧಾನ ಗುಡಿಯ ಮುಂಭಾಗದಲ್ಲಿರುವ ಕಾಣಿಕೆ ಡಬ್ಬಿಯನ್ನು ಹೊರಗೆ ಸಾಗಿಸಿದ್ದಾರೆ. ಒಬ್ಬಾತ ಹರಿತವಾದ ಅಸ್ತ್ರವೊಂದರಿಂದ ಗರ್ಭಗುಡಿಯ ಬಾಗಿಲು ಮುರಿದು ಜಾಲಾಡಿದ್ದಾನೆ. ಕಾಣಿಕೆ ಡಬ್ಬಿಯಲ್ಲಿ ಮೂರೂವರೆ ಸಾವಿರ ರೂ.ಗೂ ಅಧಿಕ ಕಾಣಿಕೆ ಹಣ ಇತ್ತೆಂದು ತಿಳಿದು ಬಂದಿದೆ.

ಕಳ್ಳರ ಚಲನವಲನಗಳ ಸುಮಾರು 45 ನಿಮಿಷಗಳ ವೀಡಿಯೋ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಕೃತ್ಯದಲ್ಲಿ ಮೇಲ್ನೋಟಕ್ಕೆ ಇಬ್ಬರು ಶಾಮೀಲಾಗಿರುವುದು ತಿಳಿದು ಬಂದಿದೆ. ಚಪ್ಪಲಿ ಹಾಕಿಕೊಂಡೇ ಭಜನಾ ಮಂದಿರದ ಪ್ರಧಾನ ಗುಡಿ ಪ್ರವೇಶಿಸಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಜಾನ್ಸನ್ ಡಿಸೋಜ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ.
Mangalore Thieves steal Gold from Neermarga Bhajana Mandira recorded in CCTV. Case filed at Kankandy Rural police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm