ಬ್ರೇಕಿಂಗ್ ನ್ಯೂಸ್
23-07-21 01:03 pm Headline Karnataka News Network ಕ್ರೈಂ
ಕಾಸರಗೋಡು, ಜು.23: ಮನೆಯಲ್ಲಿ ಅಸೌಖ್ಯದಿಂದ ಮಲಗಿದ್ದ ಗಂಡನನ್ನು ಪತ್ನಿಯೇ ಕೊಲೆಗೈದ ಘಟನೆ ಚಂದೇರದ ಪಿಲಿಕ್ಕೋಡು ಮಡಿವಯಲ್ ಎಂಬಲ್ಲಿ ಬುಧವಾರ ರಾತ್ರಿ ನಡೆದಿದ್ದು, ಪತ್ನಿ ಸೇರಿದಂತೆ ಮೂವರನ್ನು ಚಂದೇರ ಪೊಲೀಸರು ಬಂಧಿಸಿದ್ದಾರೆ.
ಮಡಿವಯಲ್ ನ ಕುಂಞಂಬು(66) ಕೊಲೆಗೀಡಾದವರು. ಪ್ರಕರಣಕ್ಕೆ ಸಂಬಂಧಿಸಿ ಕೊಲೆಯಾದವರ ಪತ್ನಿ ಜಾನಕಿ, ಸಂಬಂಧಿಕರಾದ ವಿ.ರಾಜೇಶ್ ಹಾಗೂ ಅನಿಲ್ ಎಂಬಾತನನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.
ಕೋವಿಡ್ ಸೋಂಕಿಗೆ ಒಳಗಾಗಿದ್ದ ಕುಂಞಂಬು ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದ್ದರು. ಇವರನ್ನು ನೋಡಿಕೊಳ್ಳಲು ಕಷ್ಟವಾಗುತ್ತೆ ಅಂತ ಬುಧವಾರ ತಡರಾತ್ರಿ ಕೊಲೆ ನಡೆಸಿರುವುದಾಗಿ ಬಂಧಿತರು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ.

ಬುಧವಾರ ರಾತ್ರಿ ಸ್ಥಳೀಯ ಆ್ಯಂಬುಲೆನ್ಸ್ ಚಾಲಕರೊಬ್ಬರಿಗೆ ಅನಾಮಧೇಯ ಕರೆ ಬಂದಿತ್ತು. ಮಡಿವಯಲ್ ನಲ್ಲಿ ವ್ಯಕ್ತಿಯೋರ್ವರು ಗಂಭೀರ ಸ್ಥಿತಿಯಲ್ಲಿದ್ದು ಆಸ್ಪತ್ರೆಗೆ ತಲಪಿಸುವಂತೆ ತಿಳಿಸಿದ್ದ. ಬಳಿಕ ಆ್ಯಂಬುಲೆನ್ಸ್ ಚಾಲಕ ಅದೇ ನಂಬರ್ ಗೆ ಮರಳಿ ಕರೆ ಮಾಡಿದಾಗ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಇದರಿಂದ ಸಂಶಯಗೊಂಡು ಪರಿಸರದ ನಿವಾಸಿಗಳಿಗೆ ಮಾಹಿತಿ ನೀಡಿದ್ದ. ಸ್ಥಳೀಯರು ವಿಚಾರಿಸಿದಾಗ ಕುಂಞಂಬು ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಆದರೆ ಅವರ ಕುತ್ತಿಗೆಯಲ್ಲಿ ಗಾಯದ ಗುರುತು ಹಾಗೂ ನೆಲದಲ್ಲಿ ರಕ್ತದ ಕಲೆಗಳು ಕಂಡುಬಂದಿತ್ತು. ಈ ಬಗ್ಗೆ ಮೃತರ ಪತ್ನಿ ಜಾನಕಿಯನ್ನು ಪ್ರಶ್ನಿಸಿದಾಗ ಮಂಚದಿಂದ ಬಿದ್ದು ಗಾಯಗೊಂಡಿರುವುದಾಗಿ ತಿಳಿಸಿದ್ದಳು. ಸ್ಥಳೀಯರು ಚಂದೇರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ನಡುವೆ ಕುಂಞಂಬು ಮನೆಗೆ ಬುಧವಾರ ರಾತ್ರಿ ಇಬ್ಬರು ಆಗಮಿಸಿರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ಜಾನಕಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
Wife and three others kill husband infected with Covid 19 disease in Kasaragod. The incident happened at Pilikkod Madivayal within Chandera police station limits. Kunhambu (66) from Madivayal was murdered in this case. His wife Janaki, and relatives V Rajesh and Anil, have been arrested. The police, who took the trio into custody, subjected them to intense questioning before arresting them on Thursday night.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm